ಸೇತುವೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ


Team Udayavani, Sep 7, 2020, 12:45 PM IST

ಸೇತುವೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ

ರಾಮನಗರ: ತಾಲೂಕಿನ ನಾಗೋಹಳ್ಳಿ- ಕೈಲಾಂಚ ಗ್ರಾಮಗಳ ನಡುವೆ ಅರ್ಕಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮೇಲೆ ಮಳೆ ನೀರು ನಿಲ್ಲುತ್ತಿದ್ದು, ಜನರ ಓಡಾಟಕ್ಕೆ ತೊಂದರೆಯಾಗುತ್ತಿದೆ. ನೀರು ನಿಂತು ಸೇತುವೆಗೆ ಧಕ್ಕೆಯಾಗಲಿದೆ. ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದು ಆ ಭಾಗದ ಗ್ರಾಮಸ್ಥರು ದಿಢೀರ್‌ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

20 ವರ್ಷಗಳ ಹಿಂದೆ ಲೋಕೋಪಯೋಗಿ ಇಲಾಖೆ ಸೇತುವೆ ನಿರ್ಮಿಸಿದೆ. ಸೂಕ್ತ ನಿರ್ವಹಣೆ ಇಲ್ಲದೇ ಸೇತುವೆ ಶಿಥಿಲವಾಗುತ್ತಿದೆ. ಸೇತುವೆ ಎರಡೂ ಬದಿ ಯಲ್ಲಿರುವ ಕೈಹಿಡಿಗಳು ಮುರಿದು ಹಾಳಾಗಿವೆ. ಸಿಮೆಂಟ್‌ ಕಿತ್ತು ಹೋಗಿ ಕಬ್ಬಿಣ ರಾಡುಗಳು ಹೊರ ಚಾಚಿವೆ. ಈ ಬಗ್ಗೆ ಇಲಾಖೆಯ ಗಮನ ಸೆಳೆದರೂ ಉಪಯೋಗವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ನಾಗೋಹಳ್ಳಿ, ವಡ್ಡರಹಳ್ಳಿ, ಚನ್ನಿಗನದೊಡ್ಡಿ, ಗುನ್ನೂರು ಗ್ರಾಮಗಳ ಪ್ರಮುಖ ಸಂಪರ್ಕ ಸೇತುವೆಯಾಗಿದೆ. ಕನಕಪುರ, ಚನ್ನಪಟ್ಟಣ, ರಾಮನಗರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯೂ ಆಗಿದೆ. ಅಧಿಕಾರಿಗಳು ಕೂಡಲೇ ಈ ಸೇತುವೆಯ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಗ್ರಾಮಸ್ಥರಾದ ಎನ್‌.ಪಿ.ಶಶಿಕುಮಾರ್‌, ರಾಮಕೃಷ್ಣ, ಶಿವಕುಮಾರ್‌, ಆರ್‌. ರುದ್ರೇಶ್‌, ಎನ್‌.ಎಸ್‌.ಕೆಂಪರಾಜು, ಎನ್‌.ಎಸ್‌.ಕುಮಾರ್‌, ಎನ್‌.ಸಿ.ಚಂದ್ರು, ಎನ್‌.ಎಸ್‌. ಶಿವಲಿಂಗಯ್ಯ, ಕೆ.ಪ್ರಭು ಮುಂತಾದವರು ಆಗ್ರಹಿಸಿದ್ದಾರೆ.

………………………………………………………………………………………………………………………………………………………

ಆದಿಜಾಂಬವ ಸಮಾಜದ ಜಾಗೃತಿಗೆ ಶ್ರಮ :

ಮಾಗಡಿ: ಆದಿಜಾಂಬುವ ಜನಾಂಗವನ್ನು ಒಳಮೀಸಲಾತಿಯಡಿ ತರಲು ಸಂಘಟನಾತ್ಮಕವಾಗಿ ಹೋರಾಟ ಮಾಡಿದ ಕ್ರಿಯಾಶೀಲ ವ್ಯಕ್ತಿ ಆದಿಜಾಂಬವ ಜಿಲ್ಲಾಧ್ಯಕ್ಷ ಶಶಿಧರ್‌ ನಿಧನದಿಂದ ಉತ್ತಮ ಹೋರಾಟಗಾರರನ್ನು ಕಳೆದುಕೊಂಡಿದ್ದೇವೆ ಎಂದು ತಾಲೂಕು ಗೌರವಾಧ್ಯಕ್ಷ ಹಾಗೂ ನಿವೃತ್ತ ಶಿಕ್ಷಕ ವೆಂಕಟೇಶ್‌ ತಿಳಿಸಿದರು.

ಪಟ್ಟಣದ ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಆದಿಜಾಂಬವ ಸಂಘದ ಜಿಲ್ಲಾಧ್ಯಕ್ಷ ಶಶಿಧರ್‌ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಆದಿಜಾಂಬವ ಸಮಾಜವನ್ನು ಸಂಘಟ ನಾತ್ಮಕವಾಗಿ ಜಾಗೃತಿಗೊಳಿಸುವಲ್ಲಿ ಶ್ರಮಿಸಿದ್ದರು ಎಂದರು.

ಜಿಲ್ಲಾ ಗೌರವಾಧ್ಯಕ್ಷ ದೊಡ್ಡಯ್ಯ ಮಾತನಾಡಿ, ಶಶಿಧರ್‌ ಅವರು ತಳಸಮುದಾಯವನ್ನು ಒಗ್ಗೂಡಿಸಲು ಹಾಗೂ ಶ್ರೇಯೋಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದರು. ಅವರ ಕನಸನ್ನು ನನಸು ಮಾಡುವ ಮೂಲಕ ಸಾಕಾರಗೊಳಿಸೋಣ ಎಂದರು. ಸಂಘದ ಉಪಾಧ್ಯಕ್ಷ ರಾಮಕೃಷ್ಣಪ್ಪ, ಆದಿಜಾಂಬುವ ಸಂಘದ ತಾಲೂಕು ಅಧ್ಯಕ್ಷ ಆನಂದ್‌, ಉಪಾಧ್ಯಕ್ಷ ತಟವಾಳ್‌ ಪ್ರಕಾಶ್‌, ನಾಗರಾಜು ಅವರು ದಿ.ಶಶಿಧರ್‌ ಅವರ ಒಡನಾಟ ಕುರಿತು ಕಂಬನಿ ಮಿಡಿದರು. ಜಿಲ್ಲಾ ನಿರ್ದೇಶಕ ನಾಗರಾಜು, ಮುರಳಿ, ಗೋಪಾಲ್‌, ಕುಮಾರ್‌, ಜಿಲ್ಲಾ ಸಂಚಾಲಕ ಗುಡ್ಡಹಳ್ಳಿ ಮೂರ್ತಿ, ಶ್ರೀನಿವಾಸ್‌, ಶಿವಲಿಂಗಯ್ಯ, ರವಿಕುಮಾರ್‌, ಮೋಹನ್‌ಕುಮಾರ್‌ ಬೆಳಗುಂಬ ವಿಶ್ವನಾಥ್‌, ರಂಗಪ್ಪ, ವಿನ ಯ್‌, ಮೂರ್ತಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.