![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ನರೇಗಾ ಯೋಜನೆ ನಿಯಮ ಉಲ್ಲಂಘನೆ
Team Udayavani, May 25, 2020, 7:47 AM IST
![narega-rmn](https://www.udayavani.com/wp-content/uploads/2020/05/narega-rmn-620x310.jpg)
ಕನಕಪುರ: ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆಯಿದ್ದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನ ಹರಿಸಿಲ್ಲ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ನರೇಗಾ ನಿಯಮಗಳನ್ನು ಗಾಳಿಗೆ ತೂರಿದ್ದು, ಕೂಲಿಕಾರ್ಮಿಕರ ಉದ್ಯೋಗ ಕಸಿದಿದ್ದಾರೆ ಎಂದು ತೋಕಸಂದ್ರ ಗ್ರಾಮಸ್ಥರು ಆರೋಪಿಸಿದ್ದಾರೆ. ತಾಲೂಕಿನ ಮರಳವಾಡಿ ಹೋಬಳಿ ತೋಕಸಂದ್ರ ಗ್ರಾಪಂ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೊಳಿಸಿಲ್ಲ.
ಸೂಕ್ತ ಚರಂಡಿಯಿಲ್ಲದೇ ಕೊಳಚೆ ನೀರು, ರಸ್ತೆಯಲ್ಲೇ ಹರಿಯುತ್ತಿದೆ. ಗ್ರಾಮದಲ್ಲಿ ಹಲವು ಸಮಸ್ಯೆಗಳಿದ್ದರೂ ಗ್ರಾಪಂ ಅಧಿಕಾರಿಗಳು ತಮಗೆ ಲಾಭ ತರುವ ಕಾಮಗಾರಿಗಳನ್ನು ಯಂತ್ರಗಳ ಮೂಲಕ ಮಾಡಿಕೊಂಡು, ಕಾರ್ಮಿಕರ ಉದ್ಯೋಗ ಕಸಿದಿದ್ದಾರೆ ಎಂಬ ಆರೋಪಗಳು ಕೇಳಿವೆ. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಗ್ರಾಮಗಳ ಮೂಲಸೌಕರ್ಯ ಮತ್ತು ಅಭಿವೃದ್ಧಿಗೆಂದು ಕೇಂದ್ರ ಸರ್ಕಾರದಿಂದ ಗ್ರಾಪಂಗಳಗೆ ಸಾಕಷ್ಟು ಅನುದಾನ ಹರಿದು ಬರುತ್ತಿದೆ.
ಚರಂಡಿ ನೀರು ರಸ್ತೆ ಕೆರೆಕುಂಟೆಗಳ ಅಭಿವೃದ್ಧಿ ಕಾಮಗಾರಿಗಳಲ್ಲಿ ಗ್ರಾಮದ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಬೇಕು ಎಂಬ ನಿಯಮವಿದೆ. ಆದರೆ ರಾಜಕಾರಣಿಗಳ ಬೆಂಬಲವಿರುವ ಪ್ರಭಾವಿ ಸದಸ್ಯರು ಗ್ರಾಮದಲ್ಲಿ ಮೂಲ ಸೌಕರ್ಯಗಳಂತಹ ಅಭಿವೃದ್ಧಿ ಕಾಮಗಾರಿ ಗಳಿಗೆ ಆದ್ಯತೆ ನೀಡುತ್ತಿಲ್ಲ. ಜತೆಗೆ ಕಾಮಗಾರಿಗಳನ್ನು ಯಂತ್ರಗಳಿಂದ ಮಾಡಿಸುತ್ತಿರುವುದಕ್ಕೆ, ಮೇಲಧಿಕಾರಿ ಗಳು ಬೆಂಬಲವಾಗಿದ್ದಾರೆ ಎಂಬ ಆರೋಪಗಳಿವೆ.
ಲಾಕ್ಡೌನ್ನಿಂದ ಸಂದಂರ್ಭದಲ್ಲೂ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡದೆ ಸರ್ಕಾರದ ಯೋಜನೆಗಳು ಉಳ್ಳವರ ಪಾಲಾಗುತ್ತಿವೆ. ಈ ಬಗ್ಗೆ ಇಒ ಮತ್ತು ಸಿಇಒ ಅವರಿಗೆ ದೂರು ನೀಡಲಾಗಿದ್ದು, ನಿಯಮ ಉಲ್ಲಂ ಸಿ ನಡೆಸಿರುವ ಕಾಮಗಾರಿ ತಡೆದು ಕ್ರಮಕೈಗೊಳ್ಳಬೇಕು ಎಂದು ರಾಜೇಶ್ ಸೆರಿದಂತೆ ಆನೇಕ ಊರಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Magadi; Mother-son passed away due to gas leak from geyser](https://www.udayavani.com/wp-content/uploads/2024/07/magadu-150x83.jpg)
Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ
![Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ](https://www.udayavani.com/wp-content/uploads/2024/07/karad-150x83.jpg)
Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
![Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ](https://www.udayavani.com/wp-content/uploads/2024/07/loka-150x84.jpg)
Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
![1-train](https://www.udayavani.com/wp-content/uploads/2024/07/1-train-150x96.jpg)
Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ
![HD-Kumaraswamy](https://www.udayavani.com/wp-content/uploads/2024/07/HD-Kumaraswamy-3-150x90.jpg)
Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.