ಬಲಿಗಾಗಿ ಕಾದಿವೆ ಕೆರೆ ಕಟ್ಟೆ


Team Udayavani, Dec 10, 2018, 4:47 PM IST

ray-1.jpg

ಮಾಗಡಿ: ತಾಲೂಕಿನಲ್ಲಿರುವ ಬಹುತೇಕ ಕೆರೆ, ಕಟ್ಟೆಗಳಿಗೆ ತಡೆಗೋಡೆ ನಿರ್ಮಿಸಿಲ್ಲ. ಇದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಕೂಡಲೇ ಪಿಡಬ್ಲ್ಯೂಡಿ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಡೆಗೋಡೆ ನಿರ್ಮಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ಮಾಗಡಿ ಬೆಂಗಳೂರು ಮುಖ್ಯ ರಸ್ತೆಯಲ್ಲಿ ಪ್ರತಿದಿನ ಸಾವಿರಾರೂ ವಾಹನಗಳು ಸಂಚರಿ ಸುತ್ತವೆ. ಬೆಂಗಳೂರು ಕಡೆಯಿಂದ ಹುಲಿ ಯೂರುದುರ್ಗ, ಕುಣಿಗಲ್‌ ಸೇರಿದಂತೆ ಹಲವು ಪಟ್ಟಣಗಳನ್ನು ಬೆಸೆಯುವ ರಸ್ತೆ ಇದಾಗಿದೆ. ಅಲ್ಲದೇ ರಜಾ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಇರುವುದ ರಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮುಂತಾದ ಕಡೆಗಳಿಗೆ ತೆರಳುವವರು ಹೆಚ್ಚಾಗಿ ಮಾಗಡಿ ಬೆಂಗಳೂರು ರಸ್ತೆ ಬಳಸುತ್ತಾರೆ. 

ರಸ್ತೆ ಪಕ್ಕದಲ್ಲೇ ಇದೆ ಕಟ್ಟೆ: ಮಾಗಡಿಯ ತಿರುಮಲೆ ಹೆಬ್ಟಾಗಿ ಲಿನಿಂದ ಕೂಗಳತೆ ದೂರದಲ್ಲಿರುವ ಅಂಬಾ ರಯ್ಯನ ಕಟ್ಟೆ ರಸ್ತೆ ಪಕ್ಕದಲ್ಲಿಯೇ ಇದೆ. ಇದಕ್ಕೆ ತಡೆಗೋಡೆ ನಿರ್ಮಿಸಿಲ್ಲ, ಈ ಕಟ್ಟೆಯ ಬಳಿ ತಿರುವು ಹಾಗೂ ಇಳಿಜಾರು ಇದೆ. ಮಾಗಡಿ ಯಿಂದ ವೇಗವಾಗಿ ಬರುವ ವಾಹನಗಳ ಚಾಲಕರು
ಸ್ವಲ್ಪ ಯಾಮಾರಿದರೂ ವಾಹನ ನೇರವಾಗಿ ಕಟ್ಟೆಗೆ ಉರುಳಲಿದೆ. ಈ ಕಟ್ಟೆಗೆ ತಡೆಗೋಡೆ ನಿರ್ಮಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ತನ ತೋರುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತಡೆಗೋಡೆ ಇಲ್ಲದ ಕೆರೆಗಳು: ತಾಲೂಕಿನ ತಗ್ಗೀಕುಪ್ಪೆ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ತಿರುವಿನಲ್ಲಿ ಒಂದು ಕಟ್ಟೆ ಇದೆ. ಇದಕ್ಕೂ ತಡೆಗೋಡೆ ನಿರ್ಮಿಸಿಲ್ಲ. ಹೇಳಿಗೆಹಳ್ಳಿ ಕಾಲೋನಿಗೆ ತೆರಳುವ ರಸ್ತೆಯ ಬದಿಯ ಲ್ಲಿರುವ ಕೆರೆಗೂ ತಡೆಗೋಡೆ ನಿರ್ಮಿಸಿಲ್ಲ. ಪಟ್ಟಣದಿಂದ ಮಾಡಬಾಳ್‌ಗೆ ತೆರಳುವ ರಸ್ತೆಯ ಪಕ್ಕದಲ್ಲಿರುವ ಭರ್ಗಾವತಿ ಕೆರೆಗೂ ಯಾವುದೇ ತಡೆಯಿಲ್ಲ. ಕಲ್ಯಾದಿಂದ ಶ್ರೀಪತಿಹಳ್ಳಿಗೆ ತೆರಳುವ ರಸ್ತೆ ಪಕ್ಕದಲ್ಲಿರುವ ಕೆರೆ ಅಪಾಯಕ್ಕೆ ಆಹ್ವಾನಿಸುತ್ತಿದೆ. ಈ ಎಲ್ಲಾ ಕಡೆಗಳಲ್ಲಿ ರಸ್ತೆ ಪಕ್ಕದಲ್ಲಿರುವ ಕೆರೆ, ಕಟ್ಟೆಗಳಿಗೆ ತಡೆಗೋಡೆಯನ್ನು ನಿರ್ಮಿಸಬೇಕಿದೆ. 

ದುರಂತ ನಡೆದ್ರೂ ಕ್ರಮಕೈಗೊಂಡಿಲ್ಲ: ಇತ್ತೀಚೆಗೆ ಮಂಡ್ಯದ ಪಾಂಡವಪುರ ತಾಲೂಕಿ ನಲ್ಲಿ ವಿಸಿ ನಾಲೆಗೆ ಬಸ್‌ ಬಿದ್ದು ಮಕ್ಕಳು, ಮಹಿಳೆಯರು ಸೇರಿ 30 ಮಂದಿ ಮೃತ ಪಟ್ಟಿದ್ದರು. ನಾಲೆಗೆ ತಡೆಗೋಡೆ ನಿರ್ಮಿಸಿದ್ದರೆ ಅಷ್ಟು ಮಂದಿ ಬದುಕುವ ಸಾಧ್ಯತೆ ಇತ್ತು. ಈ ಘಟನೆ ನಂತರವಾದ್ರೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಪಕ್ಕದಲ್ಲಿರುವ ಕೆರೆ ಕಟ್ಟೆ, ಹಳ್ಳಗಳಿಗೆ ತಡೆಗೋಡೆ ನಿರ್ಮಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. 

ಕಳೆದ ವಾರವಷ್ಟೇ ಮಂಡ್ಯ ಜಿಲ್ಲೆಯ ಕನಗನಮರಡಿ ಗ್ರಾಮದಲ್ಲಿ ಬಸ್‌ ನಾಲೆಗೆ ಬಿದ್ದು, 30 ಮಂದಿ ಸಾವನ್ನಪ್ಪಿದ್ದಾರೆ. ಅದೇ ರೀತಿಯ ಇಂತಹ ಘಟನೆಗಳು ರಾಜ್ಯದ ವಿವಿಧೆಡೆ ಬಹಳಷ್ಟು ನಡೆದಿವೆ. ಆದರೂ ಅಧಿಕಾರಿಗಳು ಪಾಠ ಕಲಿತ್ತಿಲ್ಲ. ಕೂಡಲೇ ರಸ್ತೆ ಪಕ್ಕದಲ್ಲಿರುವ ಕೆರೆಗಳ ಏರಿಗೆ ತಡೆಗೋಡೆ ನಿರ್ಮಿಸಿ ಮುಂದೆ ಸಂಭವಿಸಬಹುದಾದ ಅಪಾಯ ತಪ್ಪಿಸಬೇಕು.
 ಅರುಂಧತಿ ಚಿಕ್ಕಣ್ಣ, ಹನುಮಾಪುರ.

ಮಾಗಡಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿರುವ ಅಂಬಾರಯ್ಯನ ಕಟ್ಟೆಗೆ ತಡೆಗೋಡೆ ಇಲ್ಲ. ಈಗಾಗಲೇ ವಾಹನಗಳು ಈ ಕಟ್ಟೆಗೆ ಉರುಳಿ ಬಿದ್ದಿವೆ. ಅದೃಷ್ಟವಶಾತ್‌ ಕಟ್ಟೆಯಲ್ಲಿ ನೀರಿಲ್ಲದ ಕಾರಣ ಪ್ರಾಣಾಪಾಯ ಸಂಭವಿಸಿಲ್ಲ. ರಜಾ ದಿನಗಳಲ್ಲಿ ಈ ರಸ್ತೆಯಲ್ಲಿ ಹೆಚ್ಚು ವಾಹನಗಳು ಸಂಚರಿಸುತ್ತವೆ. ಚಾಲಕ ಅಜಾಗರೂಕತೆಯಿಂದ ವಾಹನ ಓಡಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ತಡೆಗೋಡೆ ನಿರ್ಮಿಸಬೇಕು.
 ಡಿ.ಜಿ. ಕುಮಾರ್‌, ದಂಡಿಗೆಪುರ 

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.