ಗೊಲ್ಲರಹಟ್ಟಿಯಲ್ಲಿ ನೀರಿಗಾಗಿ ಪರದಾಟ

ಚುನಾವಣೆ ಗುಂಗಿನಲ್ಲಿದೆ ತಾಲೂಕು ಆಡಳಿತ • ನೀರು ಪೂರೈಸಲು ವಿಫ‌ಲ • ಜಲಕ್ಕೆ ಹೊಲ, ತೋಟ ಅವಲಂಬನೆ

Team Udayavani, May 1, 2019, 3:03 PM IST

ramanagar-tdy-1..

ಗೊಲ್ಲರಹಟ್ಟಿಯಲ್ಲಿ ನೀರಿಗಾಗಿ ಕಾಯುತ್ತಿರುವ ಮಕ್ಕಳು ಮತ್ತು ಮಹಿಳೆಯರು.

ಮಾಗಡಿ: ಕಾಡಂಚಿನಲ್ಲಿರುವ ಗೊಲ್ಲರಹಟ್ಟಿಗಳಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ತಾಲೂಕು ಆಡಳಿತ ಇನ್ನೂ ಲೋಕಸಭೆ ಚುನಾವಣೆ ಗುಂಗಿನಿಂದ ಹೊರಬಂದಿಲ್ಲ. ಬೇಸಿಗೆಯ ಬಿಸಿಲಿಗೆ ಅಂತರ್ಜಲ ಕುಸಿದಿದೆ. ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ತಾಲೂಕು ಆಡಳಿತ ಸಂಪೂರ್ಣ ವಿಫ‌ಲವಾಗಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಮಾಗಡಿ ತಾಲೂಕಿನ ತಿಪ್ಪಸಂದ್ರ ಸಮೀಪದ ಗೊಲ್ಲರಹಟ್ಟಿ ಗ್ರಾಮದಲ್ಲಿ 6 ಕುಡಿಯುವ ನೀರಿನ ಮಿನಿ ಟ್ಯಾಂಕ್‌ಗಳಿವೆ. ಯಾವುದರಲ್ಲೂ ನೀರಿಲ್ಲ, ಎಲ್ಲಾ ಟ್ಯಾಂಕ್‌ಗಳು ಖಾಲಿ, ಖಾಲಿ. ದಿನನಿತ್ಯ ಕೊಡ ಹಿಡಿದು ನೀರಿಗಾಗಿ ರೈತರ ಹೊಲ, ಗದ್ದೆ, ತೋಟಗಳನ್ನು ಅವಲಂಬಿಸಬೇಕಿದೆ. ಈ ಗ್ರಾಮದಲ್ಲಿ ಸುಮಾರು 200ಕ್ಕೂ ಹೆಚ್ಚು ಮಂದಿ ವಾಸ ಮಾಡುತ್ತಿದ್ದಾರೆ. ಪ್ರತಿ ವರ್ಷವೂ ಬೇಸಿಗೆ ಕಾಲದಲ್ಲಿ ನೀರಿಗಾಗಿ ಅಲೆಯುವಂತ ಪರಿಸ್ಥಿತಿ ಎದುರಿಸುತ್ತಿದ್ದರೂ ಯಾವೊಬ್ಬ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನ ಹರಿಸುತ್ತಿಲ್ಲ. ಓಟಿಗಾಗಿ ಎಡತಾಕುವ ಮಂದಿಗೇನು ಕಡಿಮೆಯಿಲ್ಲ. ನೀರು ಸಮಸ್ಯೆ ಎದುರಿಸುತ್ತಿದ್ದರೂ ಪರಿಹಾರ ಹುಡುವ ಕೆಲಸ ಮಾಡುತ್ತಿಲ್ಲ. ಇತ್ತ ಅಧಿಕಾರಿಗಳು ಸಹ ಅಗತ್ಯ ನೀರಿನ ಸೌಕರ್ಯ ಕಲ್ಪಿಸುವಲ್ಲಿ ಮೀನಮೇಶ ಎಣಿಸುತ್ತಿದ್ದಾರೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹನಿ ನೀರು ತುಂಬಿಸಿಲ್ಲ: ಕಳೆದ 10 ವರ್ಷಗಳ ಹಿಂದೆ ಜನಸಂಖ್ಯೆಯ ಆಧಾರದ ಮೇಲೆ ಇಲ್ಲಿ ನೀರಿನ ಮಿನಿ ಟ್ಯಾಂಕ್‌ಗಳನ್ನು ಸ್ಥಾಪನೆ ಮಾಡಿದ್ದರೂ ಇಲ್ಲಿಯವರಿಗೂ ಒಂದು ಹನಿ ನೀರನ್ನು ತುಂಬಿಸಿಲ್ಲ. ಅಧಿಕಾರಿಗಳಿಂದ ಎನ್‌ಒಸಿ ಪಡೆದು ಬಿಲ್ ಮಾಡಿಕೊಂಡು ಜೇಬು ತುಂಬಿಸಿಕೊಂಡಿದ್ದು ಬಿಟ್ಟರೆ, ಜನರಿಗೆ ನೀರು ಕೊಡುವ ಪ್ರಯತ್ನ ಮಾಡುತ್ತಿಲ್ಲ. ಇಲ್ಲಿನ ಸಾರ್ವಜನಿಕರು ಫ್ಲೋರೈಡ್‌ ನೀರು ಕುಡಿದು ರೋಗಕ್ಕೆ ತುತ್ತಾಗುತ್ತಿದ್ದಾರೆ. ಕಳೆದ ಎರಡು- ಮೂರು ವರ್ಷಗಳ ಹಿಂದೆಯಷ್ಟೆ ಕೊಳವೆ ಬಾವಿ ಕೊರೆಸಲಾಗಿದೆ. ಅಲ್ಲಿಂದ ಇಲ್ಲಿಯವರಿಗೂ ಪಂಪ್‌, ಮೋಟರ್‌ ಅಳವಡಿಸಿಲ್ಲ. ಪಂಪ್‌, ಮೋಟರ್‌ ಅಳವಡಿಸಲು ಅನುದಾನವಿಲ್ಲ ಎಂಬ ಹಾರಿಕೆ ಉತ್ತರ ಪಂಚಾಯ್ತಿ ಅಧಿಕಾರಿಗಳಿಂದ ಕೇಳಿ ಬರುತ್ತಿದೆ.

8 ವರ್ಷದಿಂದ ಹುದ್ದೆ ಖಾಲಿ: ಗೊಲ್ಲರಹಟ್ಟಿ ಇತರೆ ಭಾಗಗಳಿಗೆ ನೀರು ಬಿಡುವ ನೀರುಗಂಟಿ ನಿವೃತ್ತಿಯಾಗಿದ್ದಾರೆ. ಅಲ್ಲಿಂದ ಇಲ್ಲಿಯವರೆಗೂ ಯಾರನ್ನು ನೇಮಿಸಿಲ್ಲ. ಕಳೆದ 8 ವರ್ಷಗಳಿಂದ ಖಾಲಿ ಇರುವ ಹುದ್ದೆಗೆ ನೇಮಕ ಮಾಡಲು ಇನ್ನೂ ಕ್ರಮ ಕೈಗೊಂಡಿಲ್ಲ. ನಿವೃತ್ತಿಯಾಗಿರುವ ನೀರುಗಂಟಿಗೆ ವೇತನವೂ ಸಹ ನೀಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇನ್ನಾದರೂ ಪಂಚಾಯ್ತಿ ಪಿಡಿಒ ಎಚ್ಚೆತ್ತು ನೀರುಗಂಟಿ ನೇಮಕ ಮಾಡಬೇಕು. ಗೊಲ್ಲರಹಟ್ಟಿ ನೀರಿನ ಟ್ಯಾಂಕ್‌ಗಳಿಗೆ ನೀರು ತುಂಬಿಸಿ ಗ್ರಾಮದ ಜನರ ದಾಹ ಇಂಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

● ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; Mother-son passed away due to gas leak from geyser

Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.