ಬಿಡದಿ ಪಟ್ಟಣದಲ್ಲಿ ಕಸದ ರಾಶಿ; ಜನಾಕ್ರೋಶ


Team Udayavani, Mar 22, 2022, 2:17 PM IST

ಬಿಡದಿ ಪಟ್ಟಣದಲ್ಲಿ ಕಸದ ರಾಶಿ; ಜನಾಕ್ರೋಶ

ರಾಮಗನರ: ತಾಲೂಕಿನ ಬಿಡದಿ ಪಟ್ಟಣದಲ್ಲಿ ಸ್ವಚ್ಛ ಭಾರತ ಅಭಿಯಾನ ಎಂಬುದು ಮರಿಧೀಚಿಕೆಯಾಗಿದೆ. ಪುರಸಭೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಮತ್ತು ತಾವು ವಾಸಿಸುವ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂಬ ಕನಿಷ್ಠ ಪ್ರಜ್ಞೆಯನ್ನು ಕಳೆದುಕೊಂಡಿರುವ ಕೆಲವು ನಿವಾಸಿಗಳಿಂದಾಗಿ ಬಿಡದಿ ಪಟ್ಟಣದ ಬಹುತೇಕ ಬಡಾವಣೆಗಳು ಗಬ್ಬೆದ್ದು ಹೋಗಿದೆ.

ಬಹುತೇಕ ಎಲ್ಲ ಬಡಾವಣೆಗಳಲ್ಲೂ ಟನ್‌ಗಟ್ಟಲೆ ತ್ಯಾಜ್ಯ ವಿಲೇವಾರಿಯಾಗದೆ ರಸ್ತೆ ಬದಿಯಲ್ಲಿ ಶೇಖರಣೆ ಯಾಗುತ್ತಿದೆ. ತ್ಯಾಜ್ಯ ಕೊಳೆತು ನಾರುತ್ತಿದ್ದು, ರೋಗ ರುಜಿನಗಳಿಗೆ ಕಾರಣವಾಗುತ್ತಿದೆ. ಆದರೆ ಪುರಸಭೆಯ ಅಧಿಕಾರಿಗಳು ತ್ಯಾಜ್ಯವನ್ನು ವಿಲೇವಾರಿ ಮಾಡದೆ ಇದು ತಮ್ಮ ಹೊಣೆ ಅಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಇನ್ನೊಂದೆಡೆ ರಸ್ತೆ ಬದಿಯನ್ನು ತಿಪ್ಪೆ ಯನ್ನಾಗಿಸಿಕೊಂಡಿರುವ ನಾಗರಿಕರು ಗೃಹ ತ್ಯಾಜ್ಯವನ್ನು ಸುರಿಯುತ್ತಿದ್ದಾರೆ. ಬಿ

ಡದಿಯ ಪ್ರತಿಷ್ಠಿತ ಬಡಾವಣೆಗಳ ಪೈಕಿ ಒಂದು ಯೋಗೇಶ್‌ ಲೇ ಔಟ್‌ನ ಮುಖ್ಯ ರಸ್ತೆಯಲ್ಲಿ ವಾರ ಕಳೆದರೂ ತ್ಯಾಜ್ಯ ರಾಶಿ ವಿಲೇವಾರಿ ಆಗಿಲ್ಲ. ಇಲ್ಲಿನ ಕೆಲವು ನಿವಾಸಿಗಳು ಸಹ ತಮ್ಮ ಹೊಣೆ ಮರೆತು ಇಲ್ಲಿ ತ್ಯಾಜ್ಯ ಸುರಿಯುವುದನ್ನು ಮುಂದುವರಿಸಿದ್ದಾರೆ. ತ್ಯಾಜ್ಯ ಈಗ ರಸ್ತೆಯನ್ನು ಸಂಪೂರ್ಣವಾಗಿ ಆವರಿಸಿದ್ದು, ಪಾದಚಾರಿಗಳು ತ್ಯಾಜ್ಯವನ್ನು ತುಳಿದೇ ಹೋಗಬೇಕಾಗಿದೆ.

ಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಪುರಸ ಭೆ ವಾಹನಗಳಿಗೆ ಕೊಡಬೇಕಾದದ್ದು ನಾಗರಿಕರ ಕರ್ತವ್ಯ. ಪುರಸಭೆಯ ವಾಹನ ಬರದಿದ್ದರೆ ಅಧಿಕಾರಿಗಳಿಗೆ ತಿಳಿಸಿ ವಾಹನ ಕರೆಸಿಕೊಂಡು ತ್ಯಾಜ್ಯ ಕೊಡ ಬೇಕು. ಆದರೆ ಇಲ್ಲಿರುವ ಪ್ರಜ್ಞಾವಂತ ನಾಗರಿಕರು ಸಹ ತಮ್ಮ ಹೊಣೆ ಮರೆತು ರಸ್ತೆ ಬದಿಯಲ್ಲೇ ತ್ಯಾಜ್ಯ ಸುರಿಯುತ್ತಿದ್ದಾರೆ.

ಬಳಸಲು ಅಯೋಗ್ಯವಾದ ಹಾಸಿಗೆಗಳನ್ನು ತಂದು ರಸ್ತೆಯಲ್ಲಿ ಬಿಸಾಡಿ ಹೋಗಿರುವು ದನ್ನು ಇಲ್ಲಿ ಕಾಣಬಹುದು. ಬಿಡದಿ ಪುರಸಭೆಯ ಅಧಿಕಾರಿಗಳು ಕಸ ವಿಲೇವಾರಿಗೆ ಸ್ಥಳ ಇಲ್ಲ ಎಂಬ ನೆಪ ಹೇಳದೆ, ತಕ್ಷಣ ರಸ್ತೆ ಬದಿಗಳಲ್ಲಿ ಶೇಖರಣೆ ಆಗಿರುವ ತ್ಯಾಜ್ಯವನ್ನು ತೆರವುಗೊಳಿಸ ಬೇಕು. ನಾಗರಿಕರು ಪುರಸಭೆಯ ವಾಹನಗಳಿಗೆ ತ್ಯಾಜ್ಯ ಕೊಟ್ಟು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳ ಬೇಕು ಎಂಬುದು ಬಿಡದಿಯ ಬಹುತೇಕ ನಾಗರೀಕರ ಅಭಿಪ್ರಾಯ

ಯೋಗೇಶ್‌ ಬಡಾವಣೆಯಲ್ಲಿ ಕಳೆದ ಒಂದು ವಾರದಿಂದ ಶೇಖರಣೆ ಆಗಿರುವ ತ್ಯಾಜ್ಯ ತೆರವಾಗಿಲ್ಲ. ತ್ಯಾಜ್ಯ ಕೊಳೆತು ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ ಉಂಟಾಗಿದೆ. ಅಧಿಕಾರಿಗಳು ತಕ್ಷಣ ಈ ಸಮಸ್ಯೆಯತ್ತ ಗಮನ ಹರಿಸಿ ತ್ಯಾಜ್ಯ ತೆರವುಗೊಳಿಸಬೇಕು. – ಮುತ್ತಣ್ಣ , ನಾಗರಿಕರು, ಬಿಡದಿ

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.