ಶುದ್ಧೀಕರಣ ಘಟಕಗಳಿಂದ ನೀರು ಪೋಲು


Team Udayavani, Nov 9, 2019, 4:43 PM IST

rn-tdy-1

ಚನ್ನಪಟ್ಟಣ: ಸಾರ್ವಜನಿಕರಿಗೆ ಕುಡಿಯಲು ಶುದ್ಧ ನೀರು ಒದಗಿಸುವ ಮಹತ್ವಾಕಾಂಕ್ಷೆಯಿಂದ ಸ್ಥಳೀಯ ಆಡಳಿತ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ಥಾಪನೆಯಾಗಿರುವ ನೀರಿನ ಘಟಕಗಳಲ್ಲಿ ನೀರು ಶುದ್ಧೀಕರಿಸಿದ ನಂತರ ಬೇರ್ಪ ಡುವ ಸಾವಿರಾರು ಲೀ. ನೀರು ಪ್ರತಿದಿನ ಚರಂಡಿ ಪಾಲಾಗುತ್ತಿದೆ.

ನೀರಿನ ಅಲಭ್ಯತೆಯ ನಡುವೆಯೇ ಶುದ್ಧ ಕುಡಿ ಯುವ ನೀರನ್ನು ಒದಗಿಸುವ ಭರದಲ್ಲಿ ಪ್ರತಿದಿನ ನೀರು ಪೋಲು ಮಾಡಲಾಗುತ್ತಿದ್ದು, ಕುಡಿಯಲು ಹೊರತುಪಡಿಸಿ ಅನ್ಯ ಕಾರ್ಯಗಳಿಗೆ ಈ ನೀರನ್ನು ಬಳಸಬಹುದಾದರೂ ನೀರು ಚರಂಡಿ ಸೇರುತ್ತಿದೆ. ತಾಲೂಕಿನಲ್ಲಿ ಸುಮಾರು 100ಕ್ಕಿಂತಲೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿ ಸಲಾಗಿದ್ದು, ಪ್ರತಿ ಘಟಕಗಳಲ್ಲೂ ಪ್ರತಿದಿನ ಸುಮಾರು 20 ಸಾವಿರ ಲೀ. ಶುದ್ಧ ನೀರು ಉತ್ಪಾದನೆಯಾಗುತ್ತಿದೆ.

ಹಾಗೆಯೇ 40 ಸಾವಿರ ಲೀ. ನೀರು ವ್ಯರ್ಥವಾಗಿ ಚರಂಡಿ ಪಾಲಾಗುತ್ತಿದೆ. ಅಂದರೆ ಎಲ್ಲಾ ಘಟಕಗಳಿಂದ ಲಕ್ಷಾಂತರ ಲೀ. ನೀರು ಪೋಲಾಗುತ್ತಿದ್ದರೂ ಯಾರೊಬ್ಬರ ಗಮನಕ್ಕೂ ಬರುತ್ತಿಲ್ಲ. 1 ಲೀ. ನೀರನ್ನು ಶುದ್ಧೀಕರಿಸಲು 2 ಲೀ. ನೀರಿನ ಅವಶ್ಯಕತೆ ಇದ್ದು, ಕೆಲವು ಕಡೆಗಳಲ್ಲಿ 2.5 ಲೀ.ವರೆಗೂ ವಿಸ್ತರಣೆಯಾಗುತ್ತಿದೆ. ಶೇ.60ರಷ್ಟು ನೀರು ಬಳಕೆ ಯಾಗುತ್ತಿಲ್ಲ. ಗ್ರಾಮೀಣ ಭಾಗದ ಒಂದೆರಡು ಕಡೆಗಳಲ್ಲಿ ತೊಟ್ಟಿ ನಿರ್ಮಿಸಿ ಅನ್ಯ ಕಾರ್ಯಗಳಿಗೆ ಬಳಸಲಾಗುತ್ತಿದೆಯಾದರೂ ನಗರ ಪ್ರದೇಶದಲ್ಲಿ ಈ ವ್ಯವಸ್ಥೆ ಮಾಡಲು ಮನಸ್ಸು ಮಾಡಿಲ್ಲ.

ಉಪಯೋಗ ಸಾಧ್ಯ: ಶುದ್ಧ ಘಟಕಗಳಿಂದ ಪೋಲಾಗುವ ಭಾರಿ ಪ್ರಮಾಣದ ನೀರನ್ನು ಕಾರ್ಖಾನೆ, ಹೋಟೆಲ್‌, ಮನೆ, ಉದ್ಯಾನವನಗಳಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಹುಲ್ಲು ಹಾಸು ಬೆಳೆಸಲು, ಮಣ್ಣು ರಸ್ತೆಗಳಲ್ಲಿ ಧೂಳು ನಿಯಂತ್ರಿಸಲು ಈ ನೀರನ್ನು ಬಳಸಬಹುದಾಗಿದ್ದರೂ,ಸೂಕ್ತ ವ್ಯವಸ್ಥೆ ಯಾಗಿಲ್ಲದಿರುವುದೇ ಸಮಸ್ಯೆಯಾಗಿದೆ. ಸಣ್ಣ ಘಟಕಗಳಲ್ಲೂ ಇದೇ ಸಮಸ್ಯೆ: ಇನ್ನು ದೊಡ್ಡ ಘಟಕಗಳನ್ನು ಹೊರತುಪಡಿಸಿ ಹೋಟೆಲ್‌ಗ‌ಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಅಪಾರ್ಟ್‌ಮೆಂಟ್‌ ಗಳಲ್ಲಿಯೂ ಇದೇ ವ್ಯವಸ್ಥೆ ಮುಂದುವರೆದಿದೆ. ಇಲ್ಲಿಯೂ ಸಹ ಶುದ್ಧೀಕರಿಸಿದ ನಂತರ ಬರುವ ನೀರನ್ನು ಚರಂಡಿಗೆ ಹರಿಸಲಾಗುತ್ತಿದೆ. ಮನೆಗಳಲ್ಲಿ ಆನೀರನ್ನು ಅನ್ಯ ಕೆಲಸಕ್ಕೆ ಬಳಸಬಹುದಾದರೂ ಅವರೂ ಸಹ ಬಳಸಿಕೊಳ್ಳದೆ ನೀರು ಪೋಲು ಮಾಡುತ್ತಿದ್ದಾರೆ.

ತೊಟ್ಟಿ ನಿರ್ಮಿಸಿ ನೀರು ಉಳಿಸಿ: ಶುದ್ಧ ನೀರಿನ ಘಟಕಗಳಿಂದ ಚರಂಡಿಗೆ ಹರಿಯುತ್ತಿರುವ ನೀರನ್ನು ಅನ್ಯ ಕಾರ್ಯಗಳಿಗೆ ಬಳಸಿಕೊಳ್ಳಲು ತೊಟ್ಟಿಗಳನ್ನು ನಿರ್ಮಾಣ ಮಾಡಬೇಕೆಂಬುದು ಪ್ರಜಾnವಂತರ ಆಗ್ರಹವಾಗಿದೆ. ಪ್ರತಿದಿನ 4 ಲಕ್ಷ ಲೀ. ನೀರು ಚರಂಡಿಗೆ ಹರಿಯುತ್ತಿದ್ದರೂ, ಸುಮ್ಮನಿರುವುದು ಸರಿಯಲ್ಲ. ಆ ನೀರನ್ನು ಬಳಸಿಕೊಳ್ಳುವ ಬಗ್ಗೆ ಸ್ಥಳೀಯ ನಿವಾಸಿಗಳಲ್ಲಿ ಅರಿವು ಮೂಡಿಸಿ ಆ ನೀರೂ ಬಳಕೆಯಾಗುವಂತೆ ನೋಡಿಕೊಳ್ಳಬೇಕೆಂಬುದು ಪ್ರಜ್ಞಾವಂತ ನಾಗರಿಕರ ಅನಿಸಿಕೆಯಾಗಿದೆ. ನೀರಿಗೆ ತೀವ್ರ ಅಭಾವ ಎದುರಾಗಿರುವ ಈ ಸಂದರ್ಭದಲ್ಲಿ ಹನಿ ನೀರನ್ನೂ ಸಮರ್ಪಕವಾಗಿ ಬಳಸಿಕೊಳ್ಳಬೇಕಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಇಲ್ಲದ ನೀರಿಗಾಗಿ ಸಾವಿರಾರು ಅಡಿ ಕೊಳವೆ ಬಾವಿ ಕೊರೆದು ಸಿಗುವ ಕೊಂಚ ನೀರಿಗೆಸಮಾಧಾನಪಟ್ಟುಕೊಳ್ಳುವ ಬದಲು ಲಭ್ಯವಾಗುತ್ತಿರುವ ನೀರನ್ನು ಪೋಲು ಮಾಡದೆ ಬಳಸಿಕೊಳ್ಳಬೇಕಿದೆ. ಸಂಬಂಧಿಸಿದವರು ಈ ಬಗ್ಗೆ ಗಮನ ಹರಿಸಿ ಪೋಲಾಗುತ್ತಿರುವ ನೀರನ್ನು ಬಳಕೆಗೆ ಲಭ್ಯವಾಗುವಂತೆ ಮಾಡುತ್ತಾರೆಯೇ ಎಂಬುದನ್ನು ಕಾದುನೋಡಬೇಕಿದೆ.

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.