Water Problem: ಜಿಲ್ಲೆಯಲ್ಲೂ ಹೆಚ್ಚಿದ ಕುಡಿವ ನೀರಿನ ಬವಣೆ


Team Udayavani, Mar 9, 2024, 4:48 PM IST

Water Problem: ಜಿಲ್ಲೆಯಲ್ಲೂ ಹೆಚ್ಚಿದ ಕುಡಿವ ನೀರಿನ ಬವಣೆ

ರಾಮನಗರ: ಬೇಸಿಗೆ ಸಮೀಪಿಸಿದ ಬೆನ್ನಲ್ಲೇ ಜಿಲ್ಲೆಯಲ್ಲಿ ಕುಡಿವ ನೀರಿನ ಬವಣೆ ಹೆಚ್ಚಿದೆ. ಒಂದೆಡೆ ಬೆಂಗಳೂರಿನ ನೀರಿನ ದಾಹ ನೀಗಿಸಲು ರಾಮನಗರದಿಂದ ನೀರು ಪೂರೈಸುವುದಾಗಿ ಉಪಮುಖ್ಯಮಂತ್ರಿ ಹೇಳುತ್ತಿದ್ದರೆ, ಮತ್ತೂಂದೆಡೆ ಅವರ ತವರು ಜಿಲ್ಲೆಯಲ್ಲೇ ಕುಡಿಯುವ ನೀರಿನ ಕೊರತೆ ಹೆಚ್ಚುತ್ತಿದ್ದು, ಬೇಸಿಗೆ ಆರಂಭದ ದಿನಗಳಲ್ಲೇ ಈ ಪರಿಯಾದರೆ, ಬೇಸಿಗೆ ತೀವ್ರಗೊಂಡರೆ ಕತೆ ಏನು ಎಂಬುದು ಜನತೆಯ ಪ್ರಶ್ನೆಯಾಗಿದೆ.

ಜಿಲ್ಲೆಯ ಬಹುತೇಕ ಪಟ್ಟಣಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಜನತೆ ಖಾಸಗಿ ಬೋರ್‌ ವೆಲ್‌ಗ‌ಳಿಗೆ ಮೊರೆ ಹೋಗಿದ್ದಾರೆ. ಮತ್ತೂಂದೆಡೆ ಒಂದೊಂದೆ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಪರದಾಟ ಆರಂಭಗೊಂಡಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಶೇ.50 ಹಳ್ಳಿಗಳಲ್ಲಿ ನೀರಿನ ಭವಣೆ ಎದುರಾಗಲಿದೆ ಎಂದು ಪಂಚಾಯತ್‌ರಾಜ್‌ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.

108 ಹಳ್ಳಿಗಳಲ್ಲಿ ನೀರಿಗೆ ಆಹಾಕಾರ: ಜಿಲ್ಲೆಯಲ್ಲಿ ಈಗಾಗಲೇ 108 ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗಿದೆ ಎಂದು ಪಂಚಾಯತ್‌ರಾಜ್‌ ಇಲಾಖೆ ಮಾಹಿತಿ ನೀಡಿದೆ. ಕನಕಪುರ ತಾಲೂಕಿನಲ್ಲಿ 18, ಚನ್ನ ಪಟ್ಟಣ 10, ರಾಮನಗರ 32 ಹಾಗೂ ಮಾಗಡಿ 44 ಹಳ್ಳಿಗಳು ಹಾಗೂ ಹಾರೋಹಳ್ಳಿ 04 ಗ್ರಾಮಗಳಲ್ಲಿ ಕುಡಿ ವ ನೀರಿಗಾಗಿ ಪರದಾಡುವ ಪರಿಸ್ಥಿತಿ ಸೃಷ್ಠಿಯಾಗಿದೆ. ಕುಡಿಯುವ ನೀರಿನ ಬವಣೆ ತೀವ್ರವಾಗಿರುವ ಕನಕಪುರ ತಾಲೂಕಿನ ಬೇವುದೊಡ್ಡಿ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುತ್ತಿದ್ದರೆ, ಉಳಿದ 6 ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಯನ್ನು ಬಾಡಿಗೆಗೆ ಪಡೆದು ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಲ ಗ್ರಾಮಗಳಲ್ಲಿ ಹೊಸದಾಗಿ ಕುಡಿವ ನೀರಿನ ಕೊಳವೆ ಬಾವಿ ಕೊರೆಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ನಗರದಲ್ಲಿ ಹೆಚ್ಚಿದ ನೀರಿನ ಬವಣೆ: ಜಿಲ್ಲೆಯ ನಗರ ಪ್ರದೇಶಗಳಲ್ಲಿ ಸಹ ಕುಡಿವ ನೀರಿನ ಸಮಸ್ಯೆ ಉಲ್ಬಣಿಸುತ್ತಿದ್ದು, ಜಿಲ್ಲಾ ಕೇಂದ್ರದಲ್ಲಿ ನೀರಿನ ಬವಣೆ ತೀವ್ರವಾಗಿದೆ. ಚನ್ನಪಟ್ಟಣ ನಗರಸಭೆಯಲ್ಲಿ 10 ವಾರ್ಡು, ಕನಕಪುರ ನಗರಸಭೆಯಲ್ಲಿ 02 ವಾರ್ಡ್‌ , ರಾಮನಗರ ನಗರಸಭೆಯಲ್ಲಿ 19 ವಾರ್ಡ್‌ ಹಾಗೂ ಹಾರೋಹಳ್ಳಿ ಪಪಂನಲ್ಲಿ 03 ವಾರ್ಡುಗಳಲ್ಲಿ ಕುಡಿಯುವ ನೀರಿನ ಆಹಾಕಾರ ತೀವ್ರ ಗೊಂಡಿದೆ. ರಾಮನಗರಪಟ್ಟಣಕ್ಕೆ 15 ದಿನಗಳಿಗೆ ಒಂದು ಬಾರಿ ಒಂದು ತಾಸುಗಳ ಕಾಲ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.

ಚನ್ನಪಟ್ಟಣದಲ್ಲಿ ವಾರಕ್ಕೆ ಒಮ್ಮೆ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದು, ಅರ್ಕಾವತಿ ಮತ್ತು ಶಿಂಷಾದಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿ ರುವುದು ಈ ಎರಡೂ ಪಟ್ಟಣದಲ್ಲಿ ನೀರಿನ ಬವಣೆ ಮತ್ತಷ್ಟು ಹೆಚ್ಚಿಸಲಿದೆ. ಸದ್ಯಕ್ಕೆ ರಾಮನಗರ ನಗರಸಭೆ ವ್ಯಾಪ್ತಿಯ 9 ವಾರ್ಡ್‌ಗಳಿಗೆ ನಗರಸಭೆ ಟ್ಯಾಂಕರ್‌ ಮೂಲಕ ಕುಡಿವ ನೀರನ್ನು ಸರಬರಾಜು ಮಾಡಲಾಗು ತ್ತಿದ್ದು, ಇದು ಸಾಕಾಗುತ್ತಿಲ್ಲ. ಹೀಗಾಗಿ 22 ಟ್ಯಾಂಕರ್‌ ಗಳಲ್ಲಿ ನೀರು ಪೂರೈಕೆ ಮಾಡಲು ಸಿದ್ಧತೆಗಳು ನಡೆದಿವೆ.

ಟ್ಯಾಂಕರ್‌ಹಾವಳಿ : ನಗರದ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿರುವ ಬೆನ್ನಲ್ಲೇ ಖಾಸಗಿ ಟ್ಯಾಂಕರ್‌ಗಳ ಹಾವಳಿಯೂ ತೀವ್ರಗೊಂಡಿದೆ. ಈ ಹಿಂದೆ ನಗರ ಪ್ರದೇಶದಲ್ಲಿ 300 ರೂ.ಗಳಿಗೆ ಟ್ಯಾಂಕರ್‌ ನೀರು ಪೂರೈಕೆ ಮಾಡುತ್ತಿದ್ದವರು ಇದೀಗ 500 ರೂ. ವರೆಗೆ ಹಣ ಪಡೆಯುತ್ತಿದ್ದಾರೆ. ಇನ್ನು ಗ್ರಾಮಾಂತರ ಪ್ರದೇಶದಲ್ಲಿ ಈ ಮೊತ್ತ 600 ರೂ. ಗಡಿದಾಟಿದೆ. ಜಿಲ್ಲೆಯಲ್ಲಿ ದುಬಾರಿ ದರ ಪಡೆಯುತ್ತಿರುವ ಖಾಸಗಿ ನೀರಿನ ಟ್ಯಾಂಕರ್‌ಗಳಿಗೆ ಕಡಿವಾಣ ಹಾಕುವವರು ಇಲ್ಲವಾಗಿದ್ದಾರೆ.

-ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.