ಇದು ತಾತ್ಕಾಲಿಕ ಸ್ಥಗಿತವಷ್ಟೇ.. ಮತ್ತೆ ರಾಮನಗರದಿಂದಲೇ ಪಾದಯಾತ್ರೆ ಮುಂದುವರಿಸುತ್ತೇವೆ
Team Udayavani, Jan 13, 2022, 1:13 PM IST
ರಾಮನಗರ: ಕೋವಿಡ್ 19 ಸೋಂಕಿನ ಮೂರನೇ ಅಲೆಯು ಹೆಚ್ಚುತ್ತಿರುವ ಕಾರಣ ನಾವು ಇದೀಗ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದ್ದೇವೆ. ಮೂರನೇ ಅಲೆ ಕಡಿಮೆಯಾದ ಮೇಲೆ ಮತ್ತೆ ಮುಂದುವರಿಸುತ್ತೇವೆ ಎಂದು ವಿಧಾನಪಕ್ಷದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಯಾವುದೇ ನೋಟಿಸ್ ಗೆ ಹೆದರಲ್ಲ. ಯಾವುದೇ ನಿರ್ಬಂಧಕ್ಕೆ ನಾವು ಹೆದರಲ್ಲ. ಆದರೆ ಜನರ ಆರೋಗ್ಯದ ಹಿತದೃಷ್ಠಿಯಿಂದ ನಾವು ಈ ತೀರ್ಮಾನಕ್ಕೆ ಬಂದಿದ್ದೇವೆ ಎಂದರು.
ಕೋವಿಡ್ ಮೂರನೇ ಅಲೆ ಹರಡುತ್ತಿದೆ. ಮೂರನೇ ಅಲೆ ವೇಗವಾಗಿ ಹರಡಲು ಕಾಂಗ್ರೆಸ್ ಕಾರಣವಲ್ಲ. ಬದಲಾಗಿ ಬಿಜೆಪಿಯವರೇ ಕಾರಣ ಎಂದು ಆರೋಪಿಸಿದರು.
ರಾಜ್ಯದಲ್ಲಿ ಬಂದಿರುವ 15 ಸಾವಿರ ಪ್ರಕರಣಗಳು ಪಾದಯಾತ್ರೆಯ ಕಾರಣದಿಂದಲ್ಲ. ದೇಶದಲ್ಲಿ ಸ್ವಾಭಾವಿಕವಾಗಿ ಮೂರನೇ ಅಲೆ ಇದೆ. ಹಾಗೆಯೇ ನಮ್ಮ ರಾಜ್ಯದಲ್ಲೂ ಸೋಂಕು ಹರಡಿದೆ. ನಮಗೆ ಜನರ ಆರೋಗ್ಯದ ಬಗ್ಗೆ ಕಾಳಜಿಯಿದೆ. ಯಾವುದೇ ಕಾರಣಕ್ಕೂ ಪಾದಯಾತ್ರೆಯಿಂದ ಸೋಂಕು ಉಲ್ಭಣವಾಗಬಾರದು ಎಂಬ ಕಾಳಜಿಯಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ:ಐದನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ ಸ್ಥಗಿತ: ಕೈ ನಾಯಕರ ಮಹತ್ವದ ನಿರ್ಧಾರ
ಸೋಂಕು ಉಲ್ಬಣವಾಗಲು ನಾವು ಕಾರಣಕರ್ತರು ಎಂಬ ಭಾವನೆ ಜನರಿಗೆ ಬರಬಾರದು. ಹೀಗಾಗಿ ನಾವು ಇಂದು ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದ್ದೇವೆ. ಮೂರನೇ ಅಲೆ ಕಡಿಮೆಯಾದಾಗ, ಕೋವಿಡ್ ನಿಯಮಗಳು ಸಡಿಲವಾದಾಗ ಮತ್ತೆ ಈ ಪಾದಯಾತ್ರೆಯು ರಾಮನಗರದಿಂದ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು