ಕೀಳರಿಮೆ ಬಿಟ್ಟು ಸಾಧನೆಯತ್ತ ಸಾಗಿ: ಡಾ.ಸನ್ಮತಿ


Team Udayavani, Mar 9, 2021, 4:53 PM IST

ಕೀಳರಿಮೆ ಬಿಟ್ಟು ಸಾಧನೆಯತ್ತ ಸಾಗಿ: ಡಾ.ಸನ್ಮತಿ

ಚನ್ನಪಟ್ಟಣ: ಮಹಿಳೆ ಮನಸ್ಸು ಮಾಡಿದರೆ ಏನನ್ನಾದರೂ ಸಾಧನೆ ಮಾಡಬಹುದು ಎಂಬು ದಕ್ಕೆ ಸಾಕಷ್ಟು ಉದಾಹರಣೆ ಕಣ್ಣ ಮುಂದಿವೆ. ವಿದ್ಯಾರ್ಥಿನಿಯರು ಕೀಳರಿಮೆ ಬಿಟ್ಟು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಜ್ಜಾಗಬೇಕು ಎಂದು ಆಯುರ್ವೇದ ಸ್ತ್ರೀರೋಗ ತಜ್ಞೆ ಡಾ. ಸನ್ಮತಿ ಹೇಳಿದರು.

ಪಟ್ಟಣದ ಶತಮಾನೋತ್ಸವ ಭವನದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮಹಿಳಾ ಕೋಶ, ಸಾಂಸ್ಕೃತಿಕ ಸಮಿತಿ ಹಾಗೂನವ್ಯ ಫೌಂಡೇಷನ್‌ ಸಹಯೋಗದಲ್ಲಿ ನಡೆದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಹಿಳೆ ಇಂದು ವಿಶ್ವದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾಳೆ. ಸಾಧನೆ ಮಾಡಲು ಮುಖ್ಯವಾಗಿ ದೃಢ ಮನಸ್ಸು ಇರಬೇಕು ಎಂದರು.

ಆಯುರ್ವೇದ ಪದ್ಧತಿ ಪುರಾತನ ಕಾಲದಿಂದಲೂ ಮಾನವನ ಆರೋಗ್ಯಕಾಪಾಡಿಕೊಂಡು ಬರುತ್ತಿದೆ. ನಮ್ಮ ಹಿರಿಯರು ಹೆಚ್ಚು ಕಾಲ ಬದುಕುತ್ತಿದ್ದರು. ಯಾವುದೇಅನಾರೋಗ್ಯ ಕಾಡುತ್ತಿರಲಿಲ್ಲ ಎಂಬುದಕ್ಕೆ ಆಯು ರ್ವೇದ ಪದ್ಧತಿಯೇ ಕಾರಣ. ಇಂದಿನ ದಿನಗಳಲ್ಲಿನ ಆಹಾರ ಪದ್ಧತಿ, ಒತ್ತಡದ ಬದುಕು ನಮ್ಮನ್ನು ಅನಾರೋಗ್ಯದತ್ತ ದೂಡುತ್ತಿದೆ ಎಂದರು.ನವ್ಯ ಫೌಂಡೇಷನ್‌ ಅಧ್ಯಕ್ಷೆ ಆರ್‌.ನವ್ಯಶ್ರೀ ಮಾತನಾಡಿ, ವಿದ್ಯಾರ್ಥಿ ಜೀವನ ಪ್ರತಿಯೊಬ್ಬರಿಗೂ ಅತ್ಯಂತ ಪ್ರಮುಖವಾದ ಘಟ್ಟ.ಆ ಸಮಯದಲ್ಲಿ ಕಲಿಯುವುದರ ಕಡೆಗೆ ಹೆಚ್ಚಿನ ಗಮನವಿರಬೇಕು. ವಿದ್ಯೆ, ಜಾnನವಿದ್ದರೆ ಈಜಗತ್ತಿನಲ್ಲಿ ಏನು ಬೇಕಾದರೂ ಸಾಧಿಸಬಹುದು.ಸಮಾಜಕ್ಕೆ ನಾವು ಏನಾದರೂ ಕೊಡುಗೆ ನೀಡಬೇಕೆನ್ನುವ ಮನೋಭಾವ ನಮ್ಮಲ್ಲಿ ಮೂಡಬೇಕು ಎಂದರು.

ಪ್ರತಿಭೆ ಗುರುತಿಸುವ ಕೆಲಸ: ಕಾಲೇಜುಪ್ರಾಂಶುಪಾಲ ಡಾ.ವಿ. ವೆಂಕಟೇಶ್‌ ಮಾತನಾಡಿ, ಕಾಲೇಜಿನ ಮಹಿಳಾ ಕೋಶ ಹಾಗೂ ಸಾಂಸ್ಕೃತಿಕಸಮಿತಿ ಮಹಿಳಾ ದಿನಾಚರಣೆ, ದೇಸೀ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಗುರುತಿಸುವ ಕೆಲಸ ಮಾಡಿದೆ. ವಿದ್ಯಾರ್ಥಿನಿಯರು ಮಹಿಳಾ ದಿನಾಚರಣೆಯಂದು ಹೊಸ ಆಲೋಚನೆಯತ್ತ ಗಮನಹರಿಸಬೇಕು ಎಂದರು.

ಕಾಲೇಜಿನ ಸಾಂಸ್ಕೃತಿಕ ಸಂಚಾಲಕ ಡಾ.ಅಣ್ಣಯ್ಯ ತೈಲೂರುಮಾತನಾಡಿದರು. ದೇಸೀ ಸಂಭ್ರಮದ ನಿಮಿತ್16 ಹಬ್ಬಗಳ ಮಾದರಿಗಳನ್ನು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸೃಷ್ಟಿಸಿದ್ದರು. ಸ್ಪರ್ಧೆಗಳಲ್ಲಿಭಾಗವಹಿಸಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಕಾಲೇಜಿನಮಹಿಳಾ ಕೋಶದ ಸಂಚಾಲಕಿ ವಾಣಿಶ್ರೀ ಇದ್ದರು.

ಸಾಧನೆಗೆ ಸಹಕಾರ, ಪ್ರೋತ್ಸಾಹ ಅಗತ್ಯ :

ಮಾಗಡಿ: ಆಧುನಿಕ ಸಮಾಜದಲ್ಲಿ ಹೆಣ್ಣು ಸಮಾಜದ ಕಣ್ಣಾಗಿದ್ದು, ದಿನೇ ದಿನೇ ಸಮಾಜದಲ್ಲಿ ಸಾಧನೆಯ ಶಿಖರವೇರು ತ್ತಿದ್ದಾರೆ. ಸ್ತ್ರೀಯರ ಅದ್ವಿತೀಯ ಸಾಧನೆ ಗೆ ಎಲ್ಲರ ಸಹಕಾರ ಪ್ರೋತ್ಸಾಹ ಅಗತ್ಯ ಎಂದು ಡಾ. ಸವಿತಾ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಅಂತಾ ರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ದಿ.ಇಂದಿರಾ ಗಾಂಧಿ ಒಂದುವರೆ ದಶಕಗಳ ಕಾಲ ಈ ದೇಶದ ಪ್ರಧಾನಿ ಯಾಗಿ ಅತ್ಯತ್ತಮ ಆಡಳಿತ ನೀಡಿದ ಹೆಗ್ಗಳಿಕೆ ಮಹಿಳೆಯದಾಗಿದೆ. ಅದೇ ರೀತಿ ಐಎಎಸ್‌ ಅಧಿಕಾರಿ ಕಿರಣ್‌ಬೇಡಿ ಮುಂತಾದ ಮಹಿಳೆಯರು ಸಾಹಸ, ಕ್ರೀಡೆ, ಸಾಹಿತ್ಯ, ಸಂಗೀ ತ, ಕೃಷಿ,  ಉನ್ನತ ಅಧಿಕಾರಿ , ವಿಜ್ಞಾನಿ , ಸಮಾಜಸೇವಕರು ಸೇರಿದಂತೆ ಅನೇಕ ರಂಗ ಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಸಾಧನೆ ಮೆರೆದಿದ್ದಾರೆ ಎಂದರು.

ಸಮಾಜದಲ್ಲಿ ದಿಟ್ಟ ಹೆಜ್ಜೆ ಇಡುತ್ತಿರುವ ಹೆಣ್ಣು ಮಕ್ಕಳ, ಅಬಲೆಯರ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ, ಅತ್ಯಾಚಾರ, ದೌರ್ಜನ್ಯ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಬೇಕು. ಎಂದರು.

ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರಾಜೇಶ್‌ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣಿಗೆ ಪೂಜನೀಯ ಸ್ಥಾನವಿದೆ. ಮಾನವೀಯ ಮೌಲ್ಯಗಳುಳ್ಳ ಹೆಣ್ಣಿಗೆ ಪ್ರತಿಯೊಬ್ಬರು ಗೌರವ ಕೊಡಬೇಕು. ದಿನದ 24 ಗಂಟೆ ಯೂ ದುಡಿಯುತ್ತಾ ಹೆಣ್ಣು ಅಬಲೆಯಲ್ಲ ಸಬಲೆ ಎಂದು ಈಗಾಗಲೇ ಎಲ್ಲ ರಂಗದಲ್ಲಿ ತೋರಿಸಿದ್ದಾಳೆ ಎಂದರು.

ಭ್ರೂಣ ಹತ್ಯೆ ನಿಲ್ಲಬೇಕು: ಡಾ. ಮಂಜುಳಾ ಮಾತನಾಡಿ,ಸಮಾಜದಲ್ಲಿ ಪ್ರತಿಯೊಬ್ಬರು ಹೆಣ್ಣಿಗೆಸಹಕಾರ ನೀಡಿದರೆ ಸಮಾಜದಲ್ಲಿಉನ್ನತ ಸ್ಥಾನಕ್ಕೇರಲು ಸಾಧ್ಯವಿದೆ.ಮನೆ ಮತ್ತು ಸಮಾಜದ ಸ್ವಾಸ್ತ್ಯ,ಆರೋಗ್ಯ ಕಾಪಾ ಡಲು ಹೆಣ್ಣಿನಆರೋಗ್ಯ ಅತ್ಯಂತ ಮುಖ್ಯ. ಹೆಣ್ಣುಮಕ್ಕಳ ಬಾಲ್ಯವಿವಾಹ ಪದ್ಧತಿನಿರ್ಮೂಲನೆ, ಹೆಣ್ಣು ಭ್ರೂಣ ಹತ್ಯೆನಿಲ್ಲಬೇಕು. ಶಿಕ್ಷಣದಿಂದ ವಂಚಿತ ರಾಗದಂತೆ ಕಾಪಾಡುವುದು ಸಮಾಜದ ಹೊಣೆ ಎಂದರು. ಡಾ. ನಾಗ ‌ ನಾಥ್‌, ಡಾ.ರಫಿಕ್‌, ಡಾ. ಚಂದ್ರಲೇಖಾ,ಡಾ.ಮುಧೋಳು, ಗುಣ ಶೇಖರ್‌, ಆರ್‌.ರಂಗನಾಥ್‌, ವರುಣ್‌, ರಾಮು, ರವಿ, ಸಂಜಯ್‌, ಉಮಾಮಹೇಶ್ವರಿ,ಇಂದಿರಾ, ಲೀನಾ ಕುಮಾರಿ, ಕೇಶವ ಮೂರ್ತಿ, ಗೌತಮ್‌ ಇದ್ದರು.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.