ವಂಡರ್‌ಲಾ ಪರಿಸರ, ಇಂಧನ ಸಂರಕ್ಷಣಾ ಪ್ರಶಸ್ತಿ ಪ್ರದಾನ


Team Udayavani, Feb 17, 2019, 12:45 AM IST

ban17021906.jpg

ರಾಮನಗರ: ಜೀವನಕ್ಕೆ ಅತ್ಯವಶ್ಯಕವಾಗಿ ಬೇಕಾಗಿರುವ, ಪರಿಸರದ ಕೊಡುಗೆಗಳಾದ ನೀರು, ಗಾಳಿ, ಭೂಮಿ ಮಲೀನಗೊಳ್ಳುತ್ತಿದೆ.
ಇವುಗಳಿಲ್ಲದಿದ್ದರೆ ಜೀವಕುಲ ನಾಶವಾಗುತ್ತದೆ. ಮಾಲಿನ್ಯ ತಡೆಯಲು ಈಗಿನ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ವಂಡರ್‌ಲಾದ ಜಂಟಿ ವ್ಯವಸ್ಥಾಪಕ ನಿರ್ದೇಶಕ ಜಾರ್ಜ್‌ ಜೋಸೆಫ್ ಹೇಳಿದರು.

ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ವಂಡರ್‌ಲಾ ಹಾಲಿಡೇಸ್‌ನಲ್ಲಿ ನಡೆದ 2018ನೇ ಸಾಲಿನ ವಂಡರ್‌ಲಾ ಪರಿಸರ ಮತ್ತು ಇಂಧನ ಸಂರಕ್ಷಣೆ ಪ್ರಶಸ್ತಿ(ವೀಕಾ-2018) ವಿಜೇತರಿಗೆ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಾಳಿ, ನೀರು ಉಚಿತವಾಗಿ ಸಿಗುತ್ತಿತ್ತು. ಹೀಗಾಗಿಯೇ ಮಾನವರು ಅದನ್ನು ನಿರ್ಲಕ್ಷಿಸಿದರು.ಇಂದು ಇವು ಮಲಿನಗೊಂಡಿವೆ. ನೀರಿಗೆ ಇಂದು ದುಡ್ಡು ಕೊಟ್ಟು ಕೊಳ್ಳುವ ಪರಿಸ್ಥಿತಿ ಒದಗಿದೆ ಎಂದು ವಿಷಾದಿಸಿದರು. ದಕ್ಷಿಣ ಆಫ್ರಿಕಾದ ಪ್ರಾಂತ್ಯವೊಂದರ ನಾಗರಿಕರಿಗೆ ಇಂತಿಷ್ಠೆ ನೀರು ಬಳಸಿಕೊಳ್ಳಬೇಕೆಂಬ ನಿಯಮ ಜಾರಿಯಾಗಿದ್ದನ್ನು ಅವರು ನೆನಪಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ “ಮಿಸ್‌ ಯೂನಿವರ್ಸ್‌ ಇಂಡಿಯಾ-2016′ ರೋಶ್ಮಿತಾ ಹರಿಮೂರ್ತಿ ಮಾತನಾಡಿ,
ಪರಿಸರ ಉಳಿಸುವುದರ ಮೂಲಕ ನಮ್ಮನ್ನು ನಾವು ಉಳಿಸಿಕೊಳ್ಳೋಣ ಎಂದು ಕರೆ ನೀಡಿದರು. ವಂಡರ್‌ಲಾದ ಸಲಹೆಗಾರ ರಾಜಗೋಪಾಲನ್‌ ಮಾತನಾಡಿ, ತೀವ್ರಗತಿಯಲ್ಲಿ ಸಾಗುತ್ತಿರುವ ನಗರೀಕರಣ,ವಿವೇಚನೆ ಇಲ್ಲದೆ ಮರಗಳನ್ನು ಕಡಿಯುತ್ತಿರುವುದು ಪರಿಸರ ವಿನಾಶಕ್ಕೆ ಮುನ್ನುಡಿ ಬರೆದಿವೆ. ಫೆಬ್ರವರಿ ತಿಂಗಳಲ್ಲೇ ಬಿಸಿಲಿನ ಜಳ ಆರಂಭವಾಗಿದೆ. ಅಂದರೆ ಮಾನವರು ಇದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಬಿಸಿನೆಸ್‌ ಡೆವಲಪ್‌ಮೆಂಟ್‌ ಮ್ಯಾನೇಜರ್‌ ನಿಕೋಲಸ್‌ ಜಿರಾಲ್ಡ್‌ ಕಾರ್ಯಕ್ರಮ ನಿರೂಪಿಸಿದರು.ಮಾರ್ಕೆಟಿಂಗ್‌ ವಿಭಾಗದ ಬಾಲಕೃಷ್ಣ ವಂದಿಸಿದರು.

ಪ್ರಶಸ್ತಿ ವಿಜೇತರು
ವೀಕಾ-2018 ಪ್ರಶಸ್ತಿ ವಿಜೇತ ಶಾಲೆಗಳಿಗೆ “ಮಿಸ್‌ ಯೂನಿವರ್ಸ್‌ ಇಂಡಿಯಾ-2016′ ರೋಶ್ಮಿತಾ ಹರಿಮೂರ್ತಿ ಪ್ರಶಸ್ತಿ ವಿತರಿಸಿದರು.ಪ್ರಥಮ ಬಹುಮಾನ ತಮಿಳುನಾಡಿನ ಹೊಸೂರಿನ ಮಹರ್ಷಿ ವಿದ್ಯಾಮಂದಿರ ಸೆಕೆಂಡರಿ ಶಾಲೆಗೆ ದೊರಕಿದೆ. 50 ಸಾವಿರ ನಗದು ಬಹಮಾನವನ್ನು ಈ ಶಾಲೆ ಪಡೆದುಕೊಂಡಿದೆ. ದ್ವಿತೀಯ ಬಹುಮಾನ ದಕ್ಷಿಣ ಕನ್ನಡದ ಶ್ರೀ ಸತ್ಯಸಾಯಿ ಲೋಕ ಸೇವಾ ಶಾಲೆ ಹಾಗೂ ಬೆಂಗಳೂರಿನ ಸಾತನೂರು ಗ್ರಾಮದ ದೆಹಲಿ ಪಬ್ಲಿಕ್‌ ಶಾಲೆಯ ಪಾಲಾಗಿವೆ.

ಈ ಶಾಲೆಗಳು ತಲಾ 25 ಸಾವಿರ ರೂ.ಬಹುಮಾನವನ್ನು ತನ್ನದಾಗಿಸಿಕೊಂಡಿವೆ. ತೃತೀಯ ಬಹುಮಾನವನ್ನು ಗದಗ
ಜಿಲ್ಲೆಯ ಗೋಜನೂರಿನ ಸರ್ಕಾರಿ ಪ್ರೌಢಶಾಲೆಗೆ, ದಾವಣಗೆರೆಯ ಅನ್ಮೋಲ್‌ ಪಬ್ಲಿಕ್‌ ಶಾಲೆ, ಬೆಂಗಳೂರಿನ ಕ್ರೈಸ್ಟ್‌ ಧರ್ಮಾರಾಮ್‌ ಶಾಲೆ ಪಡೆದುಕೊಂಡಿದ್ದು, ಈ ಮೂರು ಶಾಲೆಗಳಿಗೆ ತಲಾ 15 ಸಾವಿರ ರೂ.ನಗದು ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.