ರಜೆಯಲ್ಲೂ ಗ್ರಾಪಂ ಅಧಿಕಾರಿಗಳಿಂದ ಕೆಲಸ
Team Udayavani, Oct 25, 2022, 3:29 PM IST
ಕನಕಪುರ: ಗ್ರಾಮ ಪಂಚಾಯ್ತಿಯಲ್ಲಿ ನಡೆದಿರುವ ಅವ್ಯವಹಾರದ ದಾಖಲೆಗಳನ್ನು ತಿರುಚಲು ಅಳ್ಳಿಮಾರನಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ರಜಾ ದಿನದಲ್ಲೂ ಕೆಲಸ ಮಾಡುತ್ತಿ¨ªಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಕಸಬಾ ಹೋಬಳಿಯ ಅಳ್ಳಿ ಮಾರನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಬಳಿ ಜಮಾವಣೆ ಗೊಂಡಿದ್ದ ರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಪಡೆ ಪುಟ್ಟಸ್ವಾಮಿ, ಜಾಗೃತಿ ಟ್ರಸ್ಟ್ ರವಿ, ಮಾನವ ಹಕ್ಕು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ತಾಲೂಕು ಅಧ್ಯಕ್ಷ ಸುರೇಶ್ ಸೇರಿದಂತೆ ಗ್ರಾಮಸ್ಥರು ರಜಾ ದಿನದಲ್ಲೂ ಗ್ರಾಮ ಪಂಚಾಯಿತಿ ಕಚೇರಿ ಬಾಗಿಲು ತೆರೆದು ಕೆಲಸ ಮಾಡುತ್ತಿದ್ದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಮಾತಿನ ಚಕಮಕಿ: ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಗ್ರಾಮಸ್ಥರ ವಿರೋಧದ ನಡುವೆಯೂ ಅಧಿಕಾರಿಗಳು ಪೊಲೀಸರ ರಕ್ಷಣೆ ಪಡೆದು ಕೆಲಸ ಮುಂದು ವರಿಸಿದರು. ಗ್ರಾಮಸ್ಥರ ಆಕ್ರೋಶ ಹೆಚ್ಚಾಗುತ್ತಿದ್ದಂತೆ, ಗ್ರಾಮ ಪಂಚಾಯ್ತಿ ಅಧಿಕಾರಿಗಳು ಕಚೇರಿಗೆ ಬೀಗ ಜಡಿದು ಸ್ಥಳದಿಂದ ಕಾಲ್ಕಿತ್ತರು.
ಪ್ರಕರಣದ ತನಿಖೆ ಬಾಕಿ: ಅಳ್ಳಿಮಾರನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಪ್ಪ ರೇಣಿ, ಇ-ಖಾತೆ ಮಾಡಿಕೊಡಲು ಗ್ರಾಮಸ್ಥರ ಬಳಿ ಲಂಚ ಪಡೆದಿದ್ದರು. ಈ ಪ್ರಕರಣದ ತನಿಖೆ ಬಾಕಿ ಇದೆ. ಗ್ರಾಮ ಪಂಚಾಯಿತಿಯಲ್ಲಿ ಪ್ರಾಮಾಣಿಕತೆ ಯಿಂದ ಕರ್ತವ್ಯ ನಿರ್ವಹಿಸದೆ, ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಟ್ಟಿದ್ದಾರೆ. ಸುತ್ತಮುತ್ತಲಿನ ಗ್ರಾಮಸ್ಥರು ಸಮಸ್ಯೆ ಹೇಳಿಕೊಳ್ಳಲು ಬಂದರೆ, ಇವರು ದರ್ಶನ ಕೊಡುವುದೇ ಅಪರೂಪ. ತಿಂಗಳಲ್ಲಿ 4-5 ದಿನ ಕಚೇರಿಗೆ ಬಂದರೆ ಹೆಚ್ಚು ಎಂದು ದೂರಿದರು.
ಕರ್ತವ್ಯ ನಿರ್ವಹಣೆಗೆ ಆದೇಶಿಸಿಲ್ಲ: ಅಮಾವಾಸ್ಯೆಗೊಮ್ಮೆ ಹುಣ್ಣಿಮೆಗೊಮ್ಮೆ ಕಚೇರಿಗೆ ಬರುವ ಇವರು, ರಜಾ ದಿನದಲ್ಲೂ ಕಚೇರಿ ಬಾಗಿಲು ತೆರೆದು ಕೆಲಸ ಮಾಡುತ್ತಿರುವುದನ್ನು ನೋಡಿದರೆ, ದಿಗ್ಬ†ಮೆಯಾಗುತ್ತಿದೆ. ನಮಗೆ ನಂಬಲು ಸಾಧ್ಯ ವಾಗುತ್ತಿಲ್ಲ. ರಜಾ ದಿನಗಳಲ್ಲಿ ಕರ್ತವ್ಯ ನಿರ್ವಹಿಸ ಬೇಕಾದರೆ, ಸಂಬಂಧಪಟ್ಟವರಿಂದ ಆದೇಶದ ಪ್ರತಿ ಇರಬೇಕು. ಆದರೆ, ಯಾವುದೇ ಆದೇಶ ಇಲ್ಲದಿದ್ದರೂ ಇವರು ನಡೆಸಿರುವ ಅವ್ಯವಹಾರ ಅಕ್ರಮಗಳನ್ನು ಮುಚ್ಚಿಹಾಕಲು ಯಾರಿಗೂ ತಿಳಿಯದಂತೆ ಬಾಗಿಲು ಹಾಕಿಕೊಂಡು, ರಜಾದಿನದಲ್ಲಿ ದಾಖಲೆಗಳನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅಧಿಕಾರಿಗಳು, ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಿ: ಪಿಡಿಒ ಹನುಮಪ್ಪರೇಣಿ ಅವರು ಇಲ್ಲಿ ಪ್ರಭಾರ ಅಧಿಕಾರಿಯಾಗಿ ಬಂದು ಹತ್ತಾರು ವರ್ಷಗಳೇ ಕಳೆದಿವೆ. ಒಬ್ಬ ಅಧಿಕಾರಿ ಪ್ರಭಾರ ಅಧಿಕಾರಿಯಾಗಿ ಎಷ್ಟು ವರ್ಷ ಕೆಲಸ ಮಾಡಬಹುದು. ಇಷ್ಟು ವರ್ಷ ಕಳೆದರೂ ಏಕೆ ಇವರು ಇಲ್ಲೇ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಮೇಲಧಿಕಾರಿಗಳು ಮತ್ತು ರಾಜಕಾರಣಿಗಳ ಶ್ರೀರಕ್ಷೆ ಇದೆ. ಹೀಗಾಗಿ ಈ ಗ್ರಾಪಂನಿಂದ ಇವರನ್ನು ಬಿಡುಗಡೆ ಮಾಡಿಲ್ಲ. ಸಂಬಂಧಪಟ್ಟ ಮೇಲಾಧಿಕಾರಿಗಳು, ಇದೆಲ್ಲದರ ಬಗ್ಗೆ ಸೂಕ್ತ ತನಿಖೆ ನಡೆಸಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಕಾನೂನು ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು, ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಿಪಂನಿಂದ ವರ್ಕ್ ಶಾಪ್ ಆಗಿದೆ. ಸಾರ್ವಜನಿಕರ ಜಮೀನು ಸರ್ವೆ ಮಾಡಲು ಶಿಬಿರ ಆಯೋಜನೆ ಮಾಡಿ, ಸಭೆಯಲ್ಲಿ ಸೂಚನೆ ನೀಡಿದ್ದಾರೆ. ನರೇಗಾ ಸಂಬಂಧಪಟ್ಟಂತೆ ಜಿಯೋ ಟ್ಯಾಗ್ ಮತ್ತು ನೆರೆಯಿಂದ ಆಗಿರುವ ಸಮಸ್ಯೆಗಳ ಬಗ್ಗೆ ಅಗತ್ಯ ಕ್ರಮಕ್ಕೆ ಜಿಪಂ ಉಪ ಕಾರ್ಯದರ್ಶಿ ಗ್ರೂಪ್ ಟಾಕ್ನಲ್ಲಿ ತಿಳಿಸಿದ್ದಾರೆ. ಹೀಗಾಗಿ ರಜಾ ದಿನದಲ್ಲಿ ಕೆಲಸ ಮಾಡುತ್ತಿದ್ದೇವೆ. – ಹನುಮಪ್ಪ ರೇಣಿ, ಅಭಿವೃದ್ಧಿ ಅಧಿಕಾರಿ, ಅಳ್ಳಿಮಾರನಹಳ್ಳಿ ಗ್ರಾಪಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ