ಬೀದಿಗೆ ಬಿದ್ದ ಕಾರ್ಮಿಕರ ಬದುಕು: ಪ್ರತಿಭಟನೆ


Team Udayavani, Apr 17, 2022, 1:04 PM IST

ಬೀದಿಗೆ ಬಿದ್ದ ಕಾರ್ಮಿಕರ ಬದುಕು: ಪ್ರತಿಭಟನೆ

ಹಾರೋಹಳ್ಳಿ: ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿರುವ ಟೊಕೈ ರಬ್ಬರ್‌ ಆಟೋ ಪಾರ್ಟ್ಸ್ ಇಂಡಿಯಾ ಕಾರ್ಖಾನೆಯ ವಿರುದ್ಧ ಏಕಾಏಕಿ ಲಾಕ್‌ ಔಟ್‌ ಪ್ರಶ್ನಿಸಿ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದ್ದು ಕಾರ್ಮಿಕರ ಬದುಕು ಬೀದಿಗೆ ಬಿದ್ದಿದೆ.

ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿರುವ ಟೊಕೈ ರಬ್ಬರ್‌ ಆಟೋ ಪಾರ್ಟ್ಸ್ ಇಂಡಿಯಾ ಎಂಬ ಕಾರ್ಖಾ ನೆಯು ನಷ್ಟದ ನೆಪವೊಡ್ಡಿ ಏಕಾಏಕೀಮುಚ್ಚಿತ್ತು. ಇದರಿಂದ ಆಕ್ರೋಷಗೊಂಡ ಕಾರ್ಮಿಕರು ಅನಿರ್ದಿಷ್ಟಾವಧಿ ಪ್ರತಿಭಟನೆಗಿಳಿದಿದ್ದರು. ಇದೀಗ ಪ್ರತಿಭಟನೆ 6ನೇ ದಿನಕ್ಕೆ ತಲುಪಿದ್ದು ಆಡಳಿತ ಮಂಡಳಿ ಮಾತ್ರ ಕಾರ್ಮಿಕರ ಮೇಲೆ ಕಿಂಚಿತ್ತೂ ಕರುಣೆ ತೋರುವ ಕೆಲಸ ಮಾಡಿಲ್ಲ. ಕಾರ್ಮಿಕರ ಸಮಸ್ಯಗೆ ಪರಿಹಾರ ಸೂಚಿಸದೆ ಇರುವುದರಿಂದ ಕಾರ್ಮಿಕರ ಬದುಕು ಮೂರಾ ಬಟ್ಟೆಯಾಗಿದೆ.

ನಮಗೆ ಕೆಲಸ ಬೇಕು: ಇನ್ನು ಕಾರ್ಖಾನೆಯಲ್ಲಿ ಒಟ್ಟು 350ಕ್ಕೂ ಹೆಚ್ಚು ಜನ ಕೆಲಸ ನಿರ್ವಹಿಸುತ್ತಿದ್ದು, ಅಷ್ಟೂ ಜನರ ಕುಟುಂಬಗಳು ಬೀದಿಗೆ ಬಿದ್ದಿವೆ. ಇಷ್ಟು ದಿನ ಕಾರ್ಖಾನೆಯನ್ನು ನಂಬಿದ್ದ ಕಾರ್ಮಿಕರ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದ ಆಡಳಿತ ಮಂಡಳಿಯವರ ವಿರುದ್ಧ ಕಾರ್ಮಿಕರು ಸಿಟ್ಟಾಗಿದ್ದಾರೆ. ಕಾರ್ಖಾನೆ ಆರಂಭ ವಾಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಕಾರ್ಮಿಕರ ಮುಖಂಡರು ಹೇಳಿದ್ದಾರೆ.

ಕಾರ್ಖಾನೆ ನಷ್ಟದಲ್ಲಿದ್ದರೆ ಅದರ ಬಗ್ಗೆ ಮೊದಲೇ ಕಾರ್ಮಿಕರಿಗೆ ಸೂಚನೆಯನ್ನು ನೀಡಬೇಕಿತ್ತು. ಆದರೆ ಯಾರಿಗೂ ಹೇಳದೇ ಕೇಳದೇ ರಾತ್ರೋರಾತ್ರಿ ಲಾಕ್‌ ಔಟ್‌ ಘೋಷಿಸುವ ಅಗತ್ಯ ಏನಿತ್ತು ಎಂಬುದು ಕಾರ್ಮಿಕರ ಪ್ರಶ್ನೆ. ಅಲ್ಲದೇ ಕಾರ್ಖಾನೆಗೆ ನಷ್ಟವಾಗುತ್ತಿದ್ದರೆ ಎಲ್ಲಿ ತಪ್ಪಾಗುತ್ತಿದೆ ಎಂಬುದನ್ನು ಕೂಲಂಕುಷವಾಗಿ ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬಹುದಿತ್ತು.

19 ರವರೆಗೆ ಕಾದು ನೋಡುವ ತಂತ್ರ: ಜಿಲ್ಲಾ ಕಾರ್ಮಿಕಾಧಿಕಾರಿ, ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಸಂಧಾನ ಸಭೆ ಏ.19ರಂದು ನಡೆಯಲಿದೆ. ಸಂಧಾನ ಸಭೆ ಯಶಸ್ವಿಯಾದರೆ ಎಲ್ಲವನ್ನೂ ಮರೆತು ಕಾರ್ಖಾನೆಯ ಏಳಿಗೆಗಾಗಿ ದುಡಿಯಲಾಗುವುದು. ಇಲ್ಲವಾದರೆ ಸಂಬಂಧಪ ಟ್ಟವರೊಂದಿಗೆ ಚರ್ಚಿಸಿ ಉಗ್ರವಾದ ಹೋರಾಟವನ್ನು ಕೈಗೊಳ್ಳುವುದಾಗಿ ಕಾರ್ಮಿಕ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ ಆಡಳಿತ ಮಂಡಳಿಯೂ ಸಹ ಕಾರ್ಮಿಕರ ಬಗ್ಗೆ ಗಮನಹರಿಸಿ ಕೆಲಸ ಮಾಡಬೇಕೆಂಬುದು ಸಾರ್ವಜನಿಕರ ಅಭಿಪ್ರಾಯ ಆಗಿದೆ.

ಕಾರ್ಖಾನೆಗೆ ನಷ್ಟವಾಗಿದ್ದರೆ ಮೊದಲೇ ಹೇಳಬಹುದಿತ್ತು. ನಷ್ಟವಾಗುತ್ತಿದೆ, ಸಂಬಳ ಕೊಡಲಾಗುತ್ತಿಲ್ಲ ಮುಂದಿನ ದಿನಗಳಲ್ಲಿ ಕೊಡುತ್ತೇನೆ ಎಂದು ಕಾರ್ಮಿಕರ ಬಳಿ ಆಡಳಿತ ಮಂಡಳಿ ಚರ್ಚಿಸಬಹುದಿತ್ತು. ಆದರೆ ಅದ್ಯಾವುದೇ ಕೆಲಸವನ್ನು ಮಾಡದ ಆಡಳಿತ ಮಂಡಳಿ ಏಕಾಏಕೀ ಲಾಕ್‌ ಔಟ್‌ ಘೋಷಿಸಿದೆ. ಕಾರ್ಖಾನೆ ನಂಬಿಕೊಂಡು ಜೀವನ ನಡೆಸುತ್ತಿದ್ದ ಅಷ್ಟೂ ಕುಟುಂಬಗಳು ಬೀದಿಗೆ ಬಿದ್ದಿವೆ. ಕಾರ್ಖಾನೆ ಮರು ಆರಂಭವಾಗುವವರೆಗೂ ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ. – ಕೃಷ್ಣ ಕಾಂತ್‌, ಅಧ್ಯಕ್ಷ ಟೊಕೈ ರಬ್ಬರ್‌ ಇಂಡಿಯಾ ಕಾರ್ಮಿಕರ ಸಂಘ

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.