ದೇವರಗುಡ್ಡ ದನದ ಜಾತ್ರೆ ಕರಿನೆರಳು

ಪ್ರತಿವರ್ಷ ಸಾಕಷ್ಟು ದನಗಳು ಬರುತ್ತಿದ್ದವುಈ ಬಾರಿ ಬಂದಿದ್ದು ಬರೀ 1000 ದನಗಳು

Team Udayavani, Oct 17, 2019, 3:49 PM IST

17-October-18

„ಮಂಜುನಾಥ ಕುಂಬಳೂರ
ರಾಣಿಬೆನ್ನೂರ: ಈ ಬಾರಿ ನಿರಂತರ ಸುರಿದ ಮಳೆಯಿಂದ ರಾಜ್ಯದಲ್ಲೇ ಹೆಸರುವಾಸಿಯಾದ ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ದನಗಳ ಜಾತ್ರೆಯಿಂದ ದನಗಳ ಮಾಲೀಕರು ದೂರ ಉಳಿದಿದ್ದಾರೆ.

ಮಾಲತೇಶ ದೇವಸ್ಥಾನ ಕೆಳಭಾಗದಲ್ಲಿನ ಶ್ರೀ ರಣದಮ್ಮ ದೇವಸ್ಥಾನ ಸುತ್ತಲೂ 1 ಕಿ.ಮೀ.ನಷ್ಟು ಜಾಗದಲ್ಲಿರುವ ಜಾನುವಾರು ಜಾತ್ರೆಗೆ ಈ ಬಾರಿ ಕಳೆದ ವರ್ಷಕ್ಕಿಂತ ಕಾಲು ಭಾಗದಷ್ಟು ದನಗಳು ಆಗಮಿಸಿಲ್ಲ.

ಎತ್ತುಗಳ ಮಾಲಕರು ಗುಡ್ಡದಲ್ಲಿಯೇ ಎತ್ತುಗಳನ್ನು ಕಟ್ಟಿಕೊಂಡು, ತಾತ್ಕಾಲಿಕ ಟೆಂಟ್‌ ಹಾಕಿಕೊಂಡಿದ್ದಾರೆ. ಕೆಲವರು ದೂರದ ಊರಿನಿಂದ ಇಲ್ಲಿಗೆ ಬರಲು ಹಿಂದೇಟು ಹಾಕಿದ್ದಾರೆ.

ಈ ವರ್ಷ ಸದ್ಯ ಸುಮಾರು 1000ಕ್ಕೂ ಅಧಿಕ ದನಗಳು ಆಗಮಿಸಿದ್ದು, ಇದರಿಂದ ರೈತರು, ದನಗಳ ಮಾಲಕರು, ಖರೀದಿದಾರರು, ಮಧ್ಯವರ್ತಿಗಳು, ಮೇವು ಮಾರಾಟಗಾರರು ಬಹಳಷ್ಟು ನೋವು ಅನುಭವಿಸುವಂತಾಗಿದೆ. ಗ್ರಾಪಂನವರು ದನಗಳ ಜಾತ್ರೆ ಸುಸೂತ್ರವಾಗಿ ನಡೆಯಲು ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಮುಂದಾಗಿದ್ದಾರೆ.

ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆ ಒಂದಿಲ್ಲೊಂದು ಕಾರಣಗಳಿಂದ ಸೊರಗುತ್ತಿದೆ. ಉತ್ತರ ಕರ್ನಾಟಕ ಮತ್ತಿತರ ಭಾಗಗಳಲ್ಲಿ ಉಂಟಾದ ಜಲಪ್ರಳಯದಿಂದ ಜಾನುವಾರು ಜಾತ್ರೆ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದರಿಂದ ದನಗಳು ಹೆಚ್ಚಿನ ಪ್ರಮಾಣದಲ್ಲಿ ಬಾರದಿರುವುದು ನೋವು ತಂದಿದೆ ಎಂದು ಗ್ರಾಪಂ ಅಧ್ಯಕ್ಷೆ ಗದಿಗೆವ್ವ ಚಲವಾದಿ, ಉಪಾಧ್ಯಕ್ಷ ಚಂದ್ರಪ್ಪ ಉರ್ಮಿ ಅಭಿಪ್ರಾಯಪಟ್ಟಿದ್ದಾರೆ.

ಮೂಡಲು ಕರು, ಕಸಿ, ಕಿಲಾರಿ, ಜವಾರಿ, ಕರಮಲಗಿ ಸೇರಿದಂತೆ ವಿವಿಧ ತಳಿಯ ಎತ್ತುಗಳು ಹಾಗೂ ಕರುಗಳು ಕಡಿಮೆ ಪ್ರಮಾಣದಲ್ಲಿ ಆಗಮಿಸಿವೆ. ಗೋಕಾಕ, ಮೀರಜ್‌, ವಿಜಾಪುರ, ಬೆಳಗಾವಿ, ಮಂಡ್ಯ, ಮೈಸೂರು, ಹಾಸನ, ಚಿತ್ರದುರ್ಗ, ಬಳ್ಳಾರಿ, ಜಮಖಂಡಿ, ಮಂಡ್ಯ, ಪಾಂಡವಪುರ, ಶಿವಮೊಗ್ಗ ಮುಂತಾದ ಕಡೆಗಳಿಂದ ಈ ಭಾರಿ ಹೆಚ್ಚಿನ ಪ್ರಮಾಣದ ದನಗಳು ಬರಲಿಲ್ಲವೆಂದು ಜಾತ್ರೋತ್ಸವ ಸಮಿತಿ ಅಧ್ಯಕ್ಷೆ ರೇಣುಕವ್ವ ಹೊಂಜೋಗಿ, ಮೈಲಪ್ಪ ಗುಡಗೂರ, ನಾಗರಾಜ ಹಾಡೋರ, ಚಂದ್ರಪ್ಪ ಜಾಡರ, ಹೆಗ್ಗಪ್ಪ ಸಂಶಿ, ಬಸವರಾಜ ಮುಂಡವಾಡ, ಜಗದೀಶ ಹೆಗ್ಗೇರಿ ನೋವಿನಿಂದಲೇ ಹೇಳುತ್ತಾರೆ.

ದೇವರಗುಡ್ಡದಲ್ಲಿ ಎಲ್ಲಿ ನೋಡಿದರಲ್ಲಿ ಎತ್ತುಗಳು ಕಾಣ ಸಿಗುತ್ತಿದ್ದವು. ಆಗ ಸಂತಸವಾಗುತ್ತಿತ್ತು. ಆದರೆ ಈ ಭಾರಿ ಉಂಟಾದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ತಮ್ಮ ಎತ್ತುಗಳನ್ನು ಮಾರಲು ಬರಲಿಲ್ಲ, ಖರೀದಿದಾರರೂ ಹೆಚ್ಚಾಗಿ ಬಂದಿಲ್ಲ ಎಂದು ರೈತರನೇಕರು ನೋವು ಹಂಚಿಕೊಂಡರು. ಪ್ರತಿ ಜೋಡಿಗೆ 60 ಸಾವಿರದಿಂದ 2.50 ಲಕ್ಷ ರೂ.ವರೆಗೆ 100 ಜೋಡಿ ಎತ್ತುಗಳು ಮಾರಾಟವಾಗಿವೆ. ಈ ವರ್ಷ ಅತೀ ಹೆಚ್ಚು ಎಂದರೆ ಪಾಂಡವಪುರದ ಜೋಡೆತ್ತು 2.50 ಲಕ್ಷ ರೂ.ಗೆ ಮಾರಾಟವಾಗಿದ್ದು ವಿಶೇಷ ಎನ್ನುತ್ತಾರೆ ರೈತರು ಹಾಗೂ ಖರೀದಿದಾರರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.