ಅನ್ನದಾತನಿಗೆ ಆಘಾತ

ಬರಗಾಲ ಹಾಕಿದ್ದ ಗಾಯದ ಮೇಲೆ ಮಳೆಗಾಲ ಬರೆ ಸಾಲಸೂಲ ಮಾಡಿ ಬಿತ್ತಿದ್ದ ಬೆಳೆ ಜಲಾಹುತಿ

Team Udayavani, Aug 12, 2019, 1:16 PM IST

12-Agust-29

ರಾಣಿಬೆನ್ನೂರ: ಕುಪ್ಪೇಲೂರು ಹತ್ತಿರದ ಹಲಗೇರಿ ತುಮ್ಮಿನಕಟ್ಟಿ-ಹೊನ್ನಾಳಿ ರಸ್ತೆ ಸಂಪರ್ಕ ಕಡಿತಗೊಂಡಿದೆ

ಮಂಜುನಾಥ ಎಚ್ ಕುಂಬಳೂರು
ರಾಣಿಬೆನ್ನೂರ:
ತುಂಗಭದ್ರ, ಕುಮದ್ವತಿ ನದಿಯ ಪ್ರವಾಹದ ಭೀತಿಯಿಂದಾಗಿ ಜನರು ಆತಂಕಕ್ಕೀಡಾಗಿದ್ದು, ರೈತರಂತೂ ಮತ್ತೆ ಸಾಲಬಾಧೆ ಹಾಗೂ ಬೆಳೆ ಹಾನಿಯಿಂದ ದಿಕ್ಕುತೋಚದಂತಾಗಿ ಸಂಕಷ್ಟ ಎದುರಿಸುವಂತಾಗಿದೆ.ರವಿವಾರ ಸ್ವಲ್ಪ ಮಟ್ಟಿಗೆ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೂ ಜಲಾಶಯಗಳು ಭರ್ತಿಯಾಗಿದ್ದರಿಂದ ನೀರಿನ ಹೊರಹರಿವು ಹೆಚ್ಚಾಗುತ್ತಲೇ ಇದೆ. ಪರಿಣಾಮ ತುಂಗಭದ್ರ ಹಾಗೂ ಕುಮದ್ವತಿ ನದಿಗಳು ತುಂಬಿ ಹರಿಯುತ್ತಿವೆ.

ಸಂಪರ್ಕ ರಸ್ತೆಗಳು ಕಡಿತ: ತಾಲೂಕಿನ ಹಲಗೇರಿ ತುಮ್ಮಿನಕಟ್ಟಿ ಮಾರ್ಗವಾಗಿ ಹೊನ್ನಾಳಿಗೆ ಹೋಗುವ ರಸ್ತೆಯ ಕುಪ್ಪೇಲೂರು ಹತ್ತಿರ ಕುಮದ್ವತಿ ನದಿ ಸೇತುವೆ ಮೇಲೆ ನೀರು ಹರಿದು ಸಂಪರ್ಕ ಕಡಿತವಾಗಿದೆ.

ಮಣಕೂರಿನಿಂದ ಲಿಂಗದಹಳ್ಳಿಗೆ ಹೋಗುವ ರಸ್ತೆಯ ಸೇತುವೆ ಮೇಲೆ ನೀರು ಹರಿದು ರಸ್ತೆಯ ಸಂಪರ್ಕ ಕಡಿತವಾಗಿದೆ. ಅಲ್ಲದೇ ತಾಲೂಕಿನ ತುಂಗಭದ್ರ ನದಿ ನೀರಿನ ಹಿನ್ನೀರಿನಿಂದ ಹರನಗಿರಿ, ಚಿಕ್ಕಕುರುವತ್ತಿ, ಚೌಡಯ್ಯದಾನಪುರ ಗ್ರಾಮಗಳಿಗೆ ಸಂಪರ್ಕ ರಸ್ತೆ ಕಡಿತಗೊಂಡಿದೆ.

ಹಸು-ಎಮ್ಮೆಗಳ ಸಾವು: ತಾಲೂಕಿನ ವಿವಿಧ ಗ್ರಾಮಗಳು ಮತ್ತು ನಗರ ಸೇರಿದಂತೆ ಒಟ್ಟು 720 ಮನೆಗಳು ಹಾನಿಗೊಳಗಾಗಿದ್ದು, ಅದರಲ್ಲಿ 23 ಮನೆಗಳು ಸಂಪೂರ್ಣ ಬಿದ್ದು, 697 ಮನೆಗಳು ಭಾಗಶಃ ಹಾನಿಗೊಂಡಿವೆ. ಚಳಗೇರಿ ಗ್ರಾಮದಲ್ಲಿ ಹಾಗೂ ಇಟಗಿ ಗ್ರಾಮದಲ್ಲಿ ಎಮ್ಮೆಗಳೆರೆಡು, ದೇವರಗುಡ್ಡದಲ್ಲಿ 1 ಹಸು ಗೋಡೆ ಕುಸಿದು ಸಾವನ್ನಪ್ಪಿದ ಘಟನೆ ನಡೆದಿವೆ.

ಪರಿಹಾರ ಕೇಂದ್ರಗಳು: ನಗರದ ಆಂಜನೇಯ ಬಡಾವಣೆ, ಮಾಕನೂರು, ಕುಪ್ಪೇಲೂರು, ನದಿಹರಳಳ್ಳಿ, ಕೊಡಿಯಾಲ ಹೊಸಪೇಟೆ, ಚಿಕ್ಕಮಾಗನೂರ ಗ್ರಾಮಗಳಲ್ಲಿ ಪರಿಹಾರ ಕೇಂದ್ರವನ್ನು ತೆರೆಯಲಾಗಿದೆ. ಅಲ್ಲದೇ ಮುಷ್ಟೂರು ಗ್ರಾಮದಲ್ಲಿ ಪರಿಹಾರ ಕೇಂದ್ರವನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜಲಾವೃತಗೊಂಡ ಜಮೀನು: ಕುಮದ್ವತಿ ಹಾಗೂ ತುಂಗಭದ್ರ ನದಿ ತೀರದ ಗ್ರಾಮಗಳಾದ ತಾಲೂಕಿನ ಮುದೇನೂರ, ಮಾಕನೂರು, ನಾಗೇನಹಳ್ಳಿ, ಕವಲೆತ್ತು, ನದಿಹರಳಳ್ಳಿ, ಕೊಡಿಯಾಲ ಹೊಸಪೇಟೆ, ಚೌಡಯ್ಯದಾನಪುರ, ಚಂದಾಪುರ, ಚಿಕ್ಕಕುರುವತ್ತಿ, ಹರನಗಿರಿ, ಮೇಡ್ಲೇರಿ, ಊದಗಟ್ಟಿ, ಬೇಲೂರು, ಹೀಲದಹಳ್ಳಿ, ಕುಪ್ಪೇಲೂರ, ಮುಷ್ಟೂರು, ಹಿರೇಬಿದರಿ, ಐರಣಿ, ಕೋಣನತಂಬಗಿ, ಬೇಲೂರು ಸೇರಿದಂತೆ ಮತ್ತಿತರ ನದಿ ತೀರದ ಗ್ರಾಮದ ಒಟ್ಟು 4800 ಹೆಕ್ಟೇರ್‌ ಜಮೀನು ಜಲಾವೃತಗೊಂಡಿದೆ.

ಈಗಾಗಲೇ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹತ್ತಿ, ಮೆಕ್ಕೆಜೋಳ ಹಾಗೂ ತರಕಾರಿ ಬೆಳೆದ ನದಿ ತೀರದ ಜನರು ಹಾನಿಗೊಳಗಾಗಿದ್ದು, ಇದರ ಜತೆಗೆ 5 ದಿನಗಳಿಂದ ನದಿಯ ನೀರಿನ ಪ್ರಮಾಣ ಅಧಿಕವಾಗಿದ್ದು, ನದಿ ತೀರದ ಗ್ರಾಮಗಳ ರೈತರ ಬೆಳೆಗಳಾದ ಮೆಕ್ಕೆಜೋಳ, ಹತ್ತಿ, ಕಬ್ಬು, ಭತ್ತ, ಈರುಳ್ಳಿ, ಬೆಳ್ಳುಳ್ಳಿ, ಗೋವಿನಜೋಳ ಹಾಗೂ ವಿವಿಧ ತರಕಾರಿ ಬೆಳೆಗಳು ಜಲಾವೃತಗೊಂಡಿವೆ. ಇದರಿಂದ ಅನ್ನದಾತರು ಸಂಪೂರ್ಣ ಸಂಕಷ್ಟ ಎದುರಿಸುವಂತಾಗಿದೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.