ಸೇನೆ ಅವಹೇಳನ: ನಾಯಕ ವಿರುದ್ಧ ಬಿಜೆಪಿ ದೂರು
Team Udayavani, Apr 8, 2019, 4:13 PM IST
ದೂರು ಪ್ರತಿ
ರಾಯಚೂರು: ಚುನಾವಣಾ ಪ್ರಚಾರದ ವೇಳೆ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸೇನೆಯ ಅವಹೇಳನ ಮಾಡಿದ್ದಾರೆ ಎಂದು
ರಾಯಚೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ನಾಯಕ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಕಾನೂನು ಪ್ರಮುಖ ಎಂ.ವಿನೋದ ಕುಮಾರ ಶನಿವಾರ ಬೆಂಗಳೂರಿನಲ್ಲಿ ಆಯೋಗದ ಮುಖ್ಯಾಧಿ ಕಾರಿಗೆ ಲಿಖೀತ ದೂರು ನೀಡಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿದ ಹೇಳಿಕೆಯಲ್ಲಿ ನಾಯಕ ಅವರು, ಪ್ರಧಾನಿ ಮೋದಿ ರಕ್ಷಣಾ ಪಡೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.
ಪಾಕಿಸ್ತಾನದಂಥ ಚಿಕ್ಕ ರಾಷ್ಟ್ರದ ಮೇಲೆ ದಾಳಿ ಮಾಡಿದ್ದಾರೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ ಎಂಬಂಥ ಹೇಳಿಕೆ ನೀಡಿದ್ದರು ಎನ್ನಲಾಗಿದೆ.