ಜಾತ್ಯತೀತ ಪಕ್ಷಗಳಿಗೆ ಶಕ್ತಿ ತುಂಬಿ: ಬೋಸರಾಜ್‌

ಮಾನ್ವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ.ವಿ. ನಾಯಕ ಪರ ಪ್ರಚಾರ ಸಭೆ „ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿರಿಸಲು ಜಾತ್ಯತೀತ ಶಕ್ತಿಗಳು ಒಗ್ಗಟ್ಟು.

Team Udayavani, Apr 14, 2019, 3:39 PM IST

14-April-24

ಮಾನ್ವಿ: ಟಿಎಪಿಸಿಎಂಎಸ್‌ ಆವರಣದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌. ಬೋಸರಾಜ್‌ ಮಾತನಾಡಿದರು.

ಮಾನ್ವಿ: ದೇಶದಲ್ಲಿಯ ಕೋಮುವಾದಿ ಶಕ್ತಿಗಳನ್ನು ಹೊಡೆದೋಡಿಸಲು ಜಾತ್ಯತೀತ ಶಕ್ತಿಗಳೆಲ್ಲ ಒಂದಾಗುತ್ತಿವೆ. ಮತದಾರರು ಇವುಗಳನ್ನು ಬಲಪಡಿಸಲು ಮತ ನೀಡುವ ಮೂಲಕ ಆಶೀರ್ವದಿಸಬೇಕೆಂದು ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಬೋಸರಾಜ್‌ ಹೇಳಿದರು.

ಪಟ್ಟಣದ ಟಿಎಪಿಸಿಎಂಎಸ್‌ ಆವರಣದಲ್ಲಿ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಇದುವರೆಗೆ ಆಡಳಿತ ನಡೆಸಿದ ಕಾಂಗ್ರೆಸ್‌ ಬಡವರು, ರೈತರ ಅಭಿವೃದ್ಧಿಗಾಗಿ ಶ್ರಮಿಸಿದೆ. ಆದರೆ ಎರಡು ಬಾರಿ ಅವಕಾಶ ಪಡೆದ
ಬಿಜೆಪಿ ಸರ್ಕಾರ ವಿಭಜನೆ ಮಾಡುವ ಪ್ರಯತ್ನ ಮಾಡಿದೆ. ಕಳೆದ 17 ಲೋಕಸಭಾ ಚುನಾವಣೆಗಳಲ್ಲಿ ರಾಯಚೂರು ಕ್ಷೇತ್ರದಿಂದ 15
ಬಾರಿ ಕಾಂಗ್ರೆಸ್‌ ಅಭ್ಯರ್ಥಿಗಳೇ ಸಂಸದರಾಗಿದ್ದು ಈ ಬಾರಿ ಕೂಡ ಕಾಂಗ್ರೆಸ್‌ ಅಭ್ಯರ್ಥಿಯೇ ಜಯ ಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈತ್ರಿ ಪಕ್ಷಗಳ ಕಾಂಗ್ರೆಸ್‌ ಅಭ್ಯರ್ಥಿ ಬಿ.ವಿ.ನಾಯಕ ಮಾತನಾಡಿ, ತಮ್ಮ ಗೆಲುವಿಗೆ ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಒಂದಾಗಿ ಕೆಲಸ
ಮಾಡುತ್ತಿದ್ದಾರೆ. ಮತದಾರರು ತಮಗೆ ಆಶೀರ್ವದಿಸಿ ಆಯ್ಕೆ ಮಾಡಬೇಕೆಂದು ವಿನಂತಿಸಿದರು. ಮಾಜಿ ಶಾಸಕ ಹಂಪಯ್ಯ ನಾಯಕ, ಜಿಪಂ ಸದಸ್ಯ ಮಹಾಂತೇಶ ಪಾಟೀಲ ಅತ್ತನೂರು, ವಿಧಾನ ಪರಿಷತ್‌ ಸದಸ್ಯ ಬಸವರಾಜ ಪಾಟೀಲ ಇಟಗಿ, ಕಾಂಗ್ರೆಸ್‌ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಶಾಂತಪ್ಪ ಮಾತನಾಡಿದರು. ದೊಡ್ಡಬಸಪ್ಪಗೌಡ ಭೋಗಾವತಿ, ಶರಣಪ್ಪ ನಾಯಕ ಗುಡದಿನ್ನಿ,
ಕನಕಪ್ಪ ಅಳ್ಳೂರು, ಮಲ್ಲಿಕಾರ್ಜುನ ಪಾಟೀಲ ಇತರರು ಇದ್ದರು.

ಮೋದಿ ಪ್ರಧಾನಿಯಾದ ಮೇಲೆ ನೋಟ್‌ ಬ್ಯಾನ್‌ನಿಂದ ಸಾಮಾನ್ಯ ಜನರು ಕಷ್ಟ ಅನುಭವಿಸುವಂತಾಗಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದಾಗಿನಿಂದ ಅಭಿವೃದ್ಧಿ ವೇಗ ಹೆಚ್ಚಿದೆ. ಮಂಡ್ಯದಲ್ಲಿ ನಿಖೀಲ್‌ ಕುಮಾರಸ್ವಾಮಿ 3 ಲಕ್ಷ, ರಾಯಚೂರಿನಲ್ಲಿ ಬಿ.ವಿ.ನಾಯಕ 1 ಲಕ್ಷಕ್ಕೂ ಹೆಚ್ಚು ಬಹುಮತಗಳಿಂದ ಗೆಲುವು ಸಾಧಿ ಸಲಿದ್ದಾರೆ. ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಬಿ.ವಿ.ನಾಯಕ 30 ಸಾವಿರ ಮತಗಳ ಲೀಡ್‌ ಪಡೆಯಲಿದ್ದಾರೆ.
ರಾಜಾ ವೆಂಕಟಪ್ಪ ನಾಯಕ
ಶಾಸಕರು, ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.