ಚುನಾವಣೆಗೆ ಎಚ್ಡಿಕೆ ಸರ್ಕಾರದ ಹಣ ಬಳಕೆ

ಮಸ್ಕಿಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಯಡಿಯೂರಪ್ಪ ಆರೋಪ

Team Udayavani, Apr 19, 2019, 3:30 PM IST

19-April-22

ಮಸ್ಕಿ: ಪಟ್ಟಣದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಬಹಿರಂಗ ಸಮಾವೇಶವನ್ನು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಉದ್ಘಾಟಿಸಿದರು.

ಮಸ್ಕಿ: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮೈತ್ರಿ ಪಕ್ಷಗಳು ಸರ್ಕಾರದ ಹಣ, ಅಧಿಕಾರ ಬಳಸಿಕೊಳ್ಳಲು ಹೊರಟಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು.

ಪಟ್ಟಣದ ತೇರ್‌ ಬಜಾರ ಹತ್ತಿರ ಬುಧವಾರ ನಡೆದ  ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ ತಮ್ಮ ಮಗನನ್ನು ಗೆಲ್ಲಿಸಲು ನೈತಿಕವಾಗಿ ಚುನಾವಣೆ ಎದುರಿಸದೇ 150 ಕೋಟಿ ಹಣ ಚೆಲ್ಲಿ ಗೆಲ್ಲಲು ಹೊರಟಿರುವುದು ಚೇತನಗೌಡ ಹಾಗೂ ರಮೇಶ ಎಂಬ ಜೆಡಿಎಸ್‌ ಮುಖಂಡರು ನಡೆಸಿರುವ ದೂರವಾಣಿಯಲ್ಲಿ ಬಹಿರಂಗವಾಗಿದೆ ಎಂದು ಅವರು ಆರೋಪಿಸಿದರು.

ಹೊಟ್ಟೆಗೆ ಹಿಟ್ಟಿಲ್ಲದ ಯುವಕರು ದೇಶದ ಸೇನೆ ಸೇರುತ್ತಾರೆ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಜನರ
ಕ್ಷಮೆಯಾಚಿಸಬೇಕೆಂದು ಅವರು ಆಗ್ರಹಿಸಿದರು.

ದೇಶದ ಎಲ್ಲ ನದಿಗಳ ಜೋಡಣೆ ಮಾಡಿ ನೀರಿನ ಸಮಸ್ಯೆಗೆ ಪರಿಹಾರ ನೀಡಲಾಗುವುದು. ಈ ಭಾಗದ ಕೃಷ್ಣ ಬಲದಂಡೆ 5ಎ ನಾಲಾ ಯೋಜನೆ ಹಾಗೂ ಕನಕನಾಲಾ ಯೋಜನೆಗಳ ಜಾರಿಗೆ ಆದ್ಯತೆ ನೀಡಲಾಗುವುದು. 60 ವರ್ಷದ ರೈತರಿಗೆ ಪೆನ್ಷನ್‌ ಯೋಜನೆ ಜಾರಿಗೊಳಿಸಲಾಗುವುದು. ರೈತರ ಖಾತೆಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಹಾಕಲಾಗುವುದು. ಶೇ 33 ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಾಗುವುದು. ದೇಶದಲ್ಲಿನ ಎಲ್ಲರಿಗೂ ಸೂರು ಒದಗಿಸಲಾಗುವುದು ಎಂದರು.

ಲೋಕಸಭೆ ಚುನಾವಣೆಯಲ್ಲಿ 22 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದ ಅವರು ಮೋದಿ ಮತ್ತೇ ಪ್ರಧಾನಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೋದಿ ಅವರನ್ನು ಪ್ರಧಾನಿ ಮಾಡಲು ಸರಳ ಸಜ್ಜನಿಕೆಯ ಕೊಪ್ಪಳ ಲೋಕಸಭಾ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಅವರನ್ನು ಬಹುಮತದಿಂದ ಆರಿಸಿ ತರುವಂತೆ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೋಳ್ಳುವಂತೆ ಮನವಿ ಮಾಡಿದರು.

ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಗಣ್ಣ ಕರಡಿ ಮಾತನಾಡಿ, ಪುಲ್ವಾಮಾ ಉಗ್ರರ ದಾಳಿಯಲ್ಲಿ 44 ಸೈನಿಕರು ಹತರಾಗಿದ್ದಕ್ಕೆ ಪ್ರತೀಕಾರವಾಗಿ ದೇಶದ ಸೇನೆ ಪಾಕಿಸ್ತಾನದ ಬಾಲಾಕೋಟ್‌ ಉಗ್ರರ ತಾಣದ ಮೇಲೆ ದಾಳಿ ಮಾಡಿ 250ಕ್ಕೂ ಹೆಚ್ಚು ಉಗ್ರರನ್ನು ಸದೆಬಡಿದಿದೆ. ಆದರೆ ಉಗ್ರರು ಸತ್ತ ದೃಶ್ಯವನ್ನು ಮಾಧ್ಯಮದಲ್ಲಿ ತೋರಿಸಿಲ್ಲ ಎಂದು ಹೇಳಿರುವ ಶಾಸಕ ಬಸವರಾಜ ಹಿಟ್ನಾಳ್‌ ಅವರ ಮನಸ್ಥಿತಿ ಎಂಥದ್ದು ಎಂಬುದು ಇದರಿಂದ ಗೋತ್ತಾಗುತ್ತದೆ ಎಂದು ಟೀಕಿಸಿದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದ ಜನತೆ ತಮಗೆ 13 ಸಾವಿರಕ್ಕೂ ಅಧಿಕ ಮತಗಳ ಲೀಡ್‌ ನೀಡಿದ್ದರು. ಈ ಬಾರಿ ಇನ್ನೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ವಿನಂತಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆರ್‌.ಬಸನಗೌಡ ತುರ್ವಿಹಾಳ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಬಿಜೆಪಿ ಜಿಲ್ಲಾಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ, ಬಸನಗೌಡ ಬ್ಯಾಗವಾಟ್‌, ಮಲ್ಲಪ್ಪ ಅಂಕುಶದೊಡ್ಡಿ ಮಾತನಾಡಿದರು.

ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ ಅನ್ವರಿ, ಸಿದ್ಧನಗೌಡ ಮಾಟೂರು, ಕೆ.ವೀರನಗೌಡ, ಜಿಪಂ ಮಾಜಿ ಸದಸ್ಯ ವಿಶ್ವನಾಥರೆಡ್ಡಿ ತೋರಣದಿನ್ನಿ, ದಯಾನಂದ ಪಾಟೀಲ ಹುಲ್ಲೂರು, ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ ರೆಡ್ಡಿ ಅಮೀನಗಡ, ನಗರ ಅಧ್ಯಕ್ಷ ಅಪ್ಪಾಜಿಗೌಡ, ಸಿದ್ದಣ್ಣ ಹೂವಿನಬಾವಿ, ವಿರುಪಾಪುರ ಅಮರೇಗೌಡ, ಯುವ
ಮೋರ್ಚಾ ಅಧ್ಯಕ್ಷ ಶರಣಯ್ಯಸ್ವಾಮಿ ಗುಡದೂರು, ನಗರ ಮಹಿಳಾ ಘಟಕ ಅಧ್ಯಕ್ಷೆ ಲತಾ, ಕಿರಣ ಸಾನಬಾಳ, ಶಂಕ್ರಪ್ಪ ಹಳ್ಳಿ, ಮಸ್ಕಿ ವಿಧಾನಸಭಾ ಕ್ಷೇತ್ರದ ಮಹಿಳಾ ಘಟಕ ಅಧ್ಯಕ್ಷೆ ಶಾರದಾ ರಾಠೊಡ ಸೇರಿ ಸಾವಿರಾರು ಜನ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸಂತಾಪ: ಇದೇ ವೇಳೆ ಬಸಾಪುರದ ವೀರ ಯೋಧ ವೀರಭದ್ರಪ್ಪ ಮಟ್ಟೂರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
ಬಿಎಸ್‌ವೈ ತರಾತುರಿ: ಬಾಗಲಕೋಟೆಯಲ್ಲಿ ಶುಕ್ರವಾರ ಪ್ರಧಾನಿ ಮೋದಿ ಸಮಾವೇಶದಲ್ಲಿ ಭಾಗಿಯಾಗಬೇಕಿದ್ದ ಹಿನ್ನೆಲೆಯಲ್ಲಿ ಯಡಿಯೂರಪ್ಪ ವೇದಿಕೆಗೆ ಆಗಮಿಸುತ್ತಲೇ ಕಾರ್ಯಕ್ರಮ ಉದ್ಘಾಟನೆಗೆ ಮುಂದಾದರು. ಸಮಾವೇಶದುದ್ದಕ್ಕೂ ಅವಸರಿಸಿದ ದೃಶ್ಯ ಕಂಡುಬಂತು. ಹೀಗಾಗಿ ಸಮಾವೇಶ ತರಾತುರಿಯಲ್ಲಿ ನಡೆಯಿತು.

ಅಕ್ರಮ ಹಣ ಇಟ್ಟುಕೊಂಡಿರುವವರ ಮೇಲೆ ಐಟಿ ದಾಳಿ ಮಾಡುತ್ತದೆ. ಆದರೆ ಇದನ್ನು ವಿರೋಧಿಸಿ ಐಟಿ ಇಲಾಖೆ ಮುಂದೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಚಿವರು, ಕಾಂಗ್ರೆಸ್‌-ಜೆಡಿಎಸ್‌ ಮುಖಂಡರೊಂದಿಗೆ ಧರಣಿ ನಡೆಸಿರುವುದು ಇವರ
ನಿಜಬಣ್ಣವನ್ನು ಬಯಲು ಮಾಡಿದೆ.
ಯಡಿಯೂರಪ್ಪ,
ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.