ಪ್ರವಾಹ ಹೊಡೆತಕ್ಕೆ ನಲುಗಿದ ಗ್ರಾಮಗಳು!

ರಸ್ತೆ-ವಿದ್ಯುತ್‌ ಸಂಪರ್ಕವಿಲ್ಲ•ಮೊಬೈಲ್ ಟವರ್‌ಗಳು ಜಖಂ•ಕೊಚ್ಚಿ ಹೋಯ್ತು ಅಪಾರ ಬೆಳೆ

Team Udayavani, Aug 15, 2019, 1:26 PM IST

15-Agust-27

ರೋಣ: ಬಸರಕೋಡ ಗ್ರಾಮದಿಂದ ಹೊಳೆಹಡಗಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಪ್ರವಾಹಕ್ಕೆ ಕೊಚ್ಚಿ ಹೋಗಿದೆ.

ರೋಣ: ಕಳೆದ ವಾರ ಮುನವಳ್ಳಿಯ ನವಿಲು ತೀರ್ಥ ಜಲಾಯಶದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನದಿ ಪಾತ್ರದ ತಾಲೂಕುಗಳು ನಲುಗಿ ಹೋಗಿದ್ದು, ಇವುಗಳ ಸುಧಾರಣೆಗೆ ತಿಂಗಳುಗಳೇ ಬೇಕಾಗಿದೆ.

ಇದ್ದಕ್ಕಿಂತಕ್ಕೆ ಉಂಟಾದ ಪ್ರವಾಹದಿಂದ ತಾಲೂಕಿನ ಮೆಣಸಗಿ, ಗುಳಗಂದಿ, ಹೊಳೆಮಣ್ಣೂರ, ಮಾಳವಾಡ, ಹೊಳೆಆಲೂರ, ಅಮರಗೋಳ, ಹೊಳೆಹಡಗಲಿ, ಬಸರಕೋಡ, ಬಿ.ಎಸ್‌.ಬೇಲೆರಿ, ಕುರವಿನಕೊಪ್ಪ ಸೇರಿದಂತೆ ಅನೇಕ ಗ್ರಾಮಗಳಿಗೆ ಭಷ್ಮಾಸೂರನಂತೆ ನೀರು ನುಗ್ಗಿ ರಸ್ತೆಗಳು, ವಿದ್ಯುತ್‌ ಕಂಬಗಳು, ಮನೆಗಳು, ರೈತರು ಬೆಳೆದ ವಿವಿಧ ಬೆಳೆಗಳು ಸೇರಿದಂತೆ ಅನೇಕ ಮನುಷ್ಯನ ಮೂಲ ಸೌಕರ್ಯಗಳನ್ನು ನಾಶವಾಗುವಂತೆ ಮಾಡಿದೆ. ಇದರಿಂದ ಇಲ್ಲಿನ ಜನರಿಗೆ ನಿತ್ಯವೂ ಮೂಲ ಸೌಕರ್ಯಗಳಿಲ್ಲದೆ ನರಕಯಾತನೆ ಅನುಭವಿಸುವಂತಾಗಿದೆ.

ಈ ಹಿಂದೆ ಇಷ್ಟು ಪ್ರಮಾಣದಲ್ಲಿ ನೀರು ಹರಿಸದ ಕಾರಣ ಗ್ರಾಮಸ್ಥರು ಗ್ರಾಮ ಬಿಡಲು ಹಿಂದೇಟು ಹಾಕಿದರು. ಆದರೆ ಆ.8ರಂದು ಬೆಳಗ್ಗೆ ನಿದ್ದೆಯಿಂದ ಎಲ್ಲರೂ ಹೊರಬರುತ್ತಿದ್ದಂತೆ ಗ್ರಾಮಕ್ಕೆ ಗ್ರಾಮಗಳೇ ನದಿಯಂತೆಯಾಗಿದ್ದವು. ಇಷ್ಟಕ್ಕೆ ಸುಮ್ಮನಾಗದ ಮಲಪ್ರಭೆ ತನ್ನೊಟ್ಟಿಗೆ ಬೆಣ್ಣಿಹಳ್ಳವನ್ನು ಸೇರಿಸಿಕೊಂಡು ಈ ಗ್ರಾಮಗಳನ್ನು ಸಂಪೂರ್ಣವಾಗಿ ಕೊಚ್ಚಿ ಹೋಗುವಂತೆ ಮಾಡಿತು.

ರಸ್ತೆ-ವಿದ್ಯುತ್‌ ಸಂಪರ್ಕ ಇಲ್ಲ: ಸ್ಥಳದಿಂದ ಸ್ಥಳಕ್ಕೆ ಸ್ಥಾನಪಲ್ಲಟ ಮಾಡಲು ರಸ್ತೆಯೂ ಅತೀ ಮುಖ್ಯವಾಗಿಬೇಕು. ಆದರೆ ಮಲಪ್ರಭಾ ನದಿಯ ಅಕ್ಕಪಕ್ಕದಲ್ಲಿರುವ ಈ ನೆರೆಹಾವಳಿಗೆ ತುತ್ತಾಗಿರುವ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಇನ್ನು ಇವುಗಳು ಯಾವಾಗ ರಿಪೇರಿಯಾಗುತ್ತವೆ ಎಂಬ ಚಿಂತೆಯಲ್ಲಿ ಸಂತ್ರಸ್ತರು ಇದ್ದಾರೆ. ವಿದ್ಯುತ್‌ ಹಾಗೂ ಮೊಬೈಲ್ ಟವರ್‌ಗಳು ಕೂಡಾ ಜಖಂ ಆಗಿದ್ದು, ಇಲ್ಲಿನ ಜನರಿಗೆ ಯಾವುದೇ ಮೊಬೈಲ್ ನೆಟ್ವರ್ಕ್‌ ಕೂಡ ಸಿಗುತ್ತಿಲ್ಲ. ಇದರಿಂದ ಸಂತ್ರಸ್ತರು ತಮ್ಮ ಸಂಬಂಧಿಕರ ಜತೆಗೆ ಹಾಗೂ ಸೇನೆ ಸೇರಿದಂತೆ ಈ ಗ್ರಾಮದಿಂದ ಉದ್ಯೋಗವನ್ನರಿಸಿ ಹೋದವರ ಜತೆಗೆ ಕುಟುಂಬಸ್ಥರಿಗೆ ದೂರವಾಣಿಯ ಮೂಲಕ ಮಾತನಾಡಲು ತೊಂದರೆ ಉಂಟಾಗಿದೆ.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ: ಮುಂಗಾರು ಹಂಗಾಮಿನಲ್ಲಿ ಬೆಳೆಯುವ ಬೆಳೆಗಳಾದ ಗೋವಿನಜೋಳ, ಹೆಸರು, ಗೋಧಿ, ಸೂರ್ಯಕಾಂತಿ, ಕಬ್ಬು, ಈರುಳ್ಳಿ ಬೆಳೆಗಳು ತುಂಬಾ ಚೆನ್ನಾಗಿ ಫಸಲು ಬಂದಿತ್ತು. ಆದರೆ ಅದನ್ನು ಕಟಾವು ಮಾಡಿಕೊಂಡು ರಾಶಿಯನ್ನು ಮನೆಗೆ ಕೊಂಡೊಯ್ಯುವ ಸಮಯದಲ್ಲಿ ಪ್ರವಾಹದ ರುದ್ರನರ್ತನಕ್ಕೆ ಎಲ್ಲವೂ ನೀರಿನಲ್ಲಿ ಕೊಚ್ಚಿ ಹೋಗಿದೆ. ಪ್ರವಾಹ ಇಳಿದ ನಂತರ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ನಡೆಸಿದ ಬಳಿಕ ನಿಖರ ಅಂಕಿ-ಅಂಶಗಳು ಸಿಗುತ್ತದೆ.

ಪ್ರವಾಹಕ್ಕೆ ತುತ್ತಾಗಿರುವ ಗ್ರಾಮಗಳಿಗೆ ಮೂಲ ಸೌಕರ್ಯಗಳನ್ನು ತತಕ್ಷಣವೇ ನೀಡಲು ವಿವಿಧ ಇಲಾಖೆಯ ಅಧಿಕಾರಿಗಳಿಗೆ ರೋಣ ಮತ್ತು ನರಗುಂದ ಶಾಸಕರು ಸಭೆ ಕರೆದು ಸೂಚನೆ ನೀಡಿದ್ದಾರೆ. ಆ ಪ್ರಕಾರ ಆಡಳಿತಾತ್ಮಕ ಹಾಗೂ ತಾಂತ್ರಿಕ ಅನುಮೋದನೆಗಾಗಿ ಕಾಯದೆ, ಕಾಮಗಾರಿಗಳನ್ನು ಪ್ರಾರಂಭಿಸಿ, ರಸ್ತೆ, ವಿದ್ಯುತ್‌, ಕುಡಿಯುವ ನೀರು ಸೇರಿದಂತೆ ಅನೇಕ ಕಾಮಗಾರಿಗಳನ್ನು ಜರೂರಾಗಿ ಮಾಡಿ ಮುಗಿಸುವಂತೆ ಸೂಚನೆ ನೀಡಿದ್ದರಿಂದ ಈಗಾಗಲೇ ಸೇತುವೆ, ರಸ್ತೆ, ವಿದ್ಯುತ್‌ ಕೆಲಸಗಳ ದುರಸ್ತಿ ಹಂತದಲ್ಲಿವೆ.
ಶರಣಮ್ಮ ಕಾರಿ, ತಹಶೀಲ್ದಾರ್‌

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.