ಉತ್ತರ ಕರ್ನಾಟಕದ ಮನೆ ಮನೆಯಲ್ಲೂ ರೊಟ್ಟಿ ಹಬ್ಬದ ಸಂಭ್ರಮ
ಕೋವಿಡ್ ಮಧ್ಯೆಯೂ ಹಬ್ಬದ ಸಡಗರದಲ್ಲಿ ಜನಮನೆ ಮಂದಿಯಲ್ಲ ಸವಿದರು ರುಚಿಕರ ರೊಟ್ಟಿ
Team Udayavani, Aug 12, 2021, 9:20 PM IST
ಕೊಪ್ಪಳ: ಉತ್ತರ ಕರ್ನಾಟಕದ ವಿಶೇಷ ಹಬ್ಬ ಎಂದೆನಿಸಿದ ರೊಟ್ಟಿ ಹಬ್ಬವು ಜಿಲ್ಲಾದ್ಯಂತ ಕೋವಿಡ್ ಮಧ್ಯೆ ಸಂಭ್ರಮದಿಂದಲೇ ಜರುಗಿತು. ನಗರ ಸೇರಿ ಗ್ರಾಮೀಣ ಪ್ರದೇಶದಲ್ಲೂ ಮನೆ ಮನೆಯಲ್ಲಿ ನಾರಿಯರು ಎಳ್ಳು ರೊಟ್ಟಿ, ಶೇಂಗಾ ಪುಡಿ, ಕಾಳು, ಬದನೆ ಪಲ್ಲೆಯೊಂದಿಗೆ ಅಕ್ಕಪಕ್ಕದ ಮನೆಯವರೊಂದಿಗೆ ರೊಟ್ಟಿಗಳ ವಿನಿಮಯ ಮಾಡಿಕೊಂಡು ರೊಟ್ಟಿ ಹಬ್ಬ ಆಚರಿಸಿದರು.
ಎರಡು ವರ್ಷಗಳಿಂದ ಇಡೀ ಜಗತ್ತಿನಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸಿ ಒಬ್ಬರ ಮನೆಗೆ ಒಬ್ಬರು ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಬ್ಬ ಹರಿದಿನಗಳ ಸಂಭ್ರಮ ಮಂಕಾಗಿದೆ. ಆದರೆ ಕೋವಿಡ್ ಎರಡನೇ ಅಲೆ ನಿಯಂತ್ರಣದ ಬಳಿಕ ಸರ್ಕಾರವು ಕೆಲ ವಿನಾಯತಿ ನೀಡಿದ್ದು, ಜನತೆ ಸಹಜ ಸ್ಥಿತಿಗೆ ಮರಳುವಂತೆ ಮಾಡಿದೆ. ಈ ಮಧ್ಯೆಯೂ ಕೊರೊನಾ ಮೂರನೇ ಅಲೆ ಭೀತಿ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ.
ಎರಡು ವರ್ಷಗಳಿಂದ ಹಬ್ಬದ ಸಂಭ್ರಮವನ್ನೇ ಮರೆತಿದ್ದ ಜಿಲ್ಲೆಯ ಜನರು ನಾಗರ ಪಂಚಮಿಯಲ್ಲಿನ ರೊಟ್ಟಿ ಹಬ್ಬವನ್ನು ಜಿಲ್ಲಾದ್ಯಂತ ಸಂಭ್ರಮ, ಸಡಗರದಿಂದಲೇ ಆಚರಣೆ ಮಾಡಿದ್ದು ಕಂಡುಬಂತು. ಹಬ್ಬ ಬರುವ ಮೊದಲೇ ಮನೆ ಮನೆಯಲ್ಲಿನ ಮಹಿಳೆಯರು ಹದಿನೈದು ದಿನ ಮುಂಚಿತವಾಗಿ ಎಳ್ಳು ರೊಟ್ಟಿ, ಜೋಳದ ರೊಟ್ಟಿ, ಸಜ್ಜೆ ರೊಟ್ಟಿ, ಅರಿಶಿನ ರೊಟ್ಟಿ ಹೀಗೆ ನಾನಾ ಬಗೆಯ ರೊಟ್ಟಿಗಳನ್ನು ತಟ್ಟಿಟ್ಟುಕೊಂಡಿದ್ದರು.
ರೊಟ್ಟಿ ಹಬ್ಬದ ದಿನದಂದು ಮನೆಯಲ್ಲಿ ಬದನೆಕಾಯಿ, ಹಿರೇಕಾಯಿ, ಸೌತೆಕಾಯಿ ಪಲ್ಲೆ, ಚವಳೆಕಾಯಿ ಪಲ್ಲೆ, ಹೆಸರು, ಮಡಿಕೆ, ಅಲಸಂದಿ ಕಾಳು, ಶೇಂಗಾ, ಗುರೆಳ್ಳು, ಅಗಸೆ ಪುಡಿಯನ್ನು ಸಿದ್ಧಪಡಿಸಿಟ್ಟುಕೊಂಡು ರೊಟ್ಟಿಗೆ ಅದೆಲ್ಲವನ್ನು ಬಡಿಸಿಕೊಂಡು ತಮ್ಮ ಓಣಿಯ, ಸ್ನೇಹ ಬಳಗಕ್ಕೆ, ಗ್ರಾಮದಲ್ಲಿ ಸಂಬಂಧಿಗಳ ಮನೆ ಮನೆಗೆ ತೆರಳಿ ಕೊಟ್ಟು ಅವರ ಮನೆಯ ರೊಟ್ಟಿಗಳನ್ನು ಪಡೆದು ರೊಟ್ಟಿ ಹಬ್ಬವನ್ನು ಆಚರಣೆ ಮಾಡಿದರು.
ನಾಗರ ಪಂಚಮಿಯಲ್ಲಿನ ರೊಟ್ಟಿ ಹಬ್ಬವು ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷತೆ ಪಡೆದಿದೆ. ಒಟ್ಟಿನಲ್ಲಿ ಜಿಲ್ಲಾದ್ಯಂತ ರೊಟ್ಟಿಗಳ ಸಪ್ಪಳವೂ ಜೋರಾಗಿಯೇ ನಡೆಯಿತು. ಮನೆಯ ನಾರಿಯರು ತಮ್ಮ ಸ್ನೇಹ ಬಳಗಕ್ಕೆ, ಸಂಬಂಧಿ ಕರಿಗೆ, ಮನೆ ಪಕ್ಕದಲ್ಲಿನ ಆತ್ಮೀಯರಿಗೆ ರೊಟ್ಟಿಗಳ ವಿನಿಮಯ ಮಾಡಿ ನಾವೆಲ್ಲರೂ ಸಂತೋಷದಿಂದ ಹೀಗೆ ಇರೋಣ. ಸುಖಮಯ ಜೀವನ ನಡೆಸೋಣ. ಎಲ್ಲರೂ ಭಾವೈಕ್ಯತೆಯಿಂದ ಬಾಳ್ಳೋಣ ಎನ್ನುವ ಸಂದೇಶ ಸಾರುವ ಮೂಲಕ ರೊಟ್ಟಿಯ ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್