ಉತ್ತರ ಕರ್ನಾಟಕದ ಮನೆ ಮನೆಯಲ್ಲೂ ರೊಟ್ಟಿ ಹಬ್ಬದ ಸಂಭ್ರಮ

ಕೋವಿಡ್‌ ಮಧ್ಯೆಯೂ ಹಬ್ಬದ ಸಡಗರದಲ್ಲಿ ಜನ­ಮನೆ ಮಂದಿಯಲ್ಲ ಸವಿದರು ರುಚಿಕರ ರೊಟ್ಟಿ

Team Udayavani, Aug 12, 2021, 9:20 PM IST

ftrter

ಕೊಪ್ಪಳ: ಉತ್ತರ ಕರ್ನಾಟಕದ ವಿಶೇಷ ಹಬ್ಬ ಎಂದೆನಿಸಿದ ರೊಟ್ಟಿ ಹಬ್ಬವು ಜಿಲ್ಲಾದ್ಯಂತ ಕೋವಿಡ್‌ ಮಧ್ಯೆ ಸಂಭ್ರಮದಿಂದಲೇ ಜರುಗಿತು. ನಗರ ಸೇರಿ ಗ್ರಾಮೀಣ ಪ್ರದೇಶದಲ್ಲೂ ಮನೆ ಮನೆಯಲ್ಲಿ ನಾರಿಯರು ಎಳ್ಳು ರೊಟ್ಟಿ, ಶೇಂಗಾ ಪುಡಿ, ಕಾಳು, ಬದನೆ ಪಲ್ಲೆಯೊಂದಿಗೆ ಅಕ್ಕಪಕ್ಕದ ಮನೆಯವರೊಂದಿಗೆ ರೊಟ್ಟಿಗಳ ವಿನಿಮಯ ಮಾಡಿಕೊಂಡು ರೊಟ್ಟಿ ಹಬ್ಬ ಆಚರಿಸಿದರು.

ಎರಡು ವರ್ಷಗಳಿಂದ ಇಡೀ ಜಗತ್ತಿನಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸಿ ಒಬ್ಬರ ಮನೆಗೆ ಒಬ್ಬರು ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಬ್ಬ ಹರಿದಿನಗಳ ಸಂಭ್ರಮ ಮಂಕಾಗಿದೆ. ಆದರೆ ಕೋವಿಡ್‌ ಎರಡನೇ ಅಲೆ ನಿಯಂತ್ರಣದ ಬಳಿಕ ಸರ್ಕಾರವು ಕೆಲ ವಿನಾಯತಿ ನೀಡಿದ್ದು, ಜನತೆ ಸಹಜ ಸ್ಥಿತಿಗೆ ಮರಳುವಂತೆ ಮಾಡಿದೆ. ಈ ಮಧ್ಯೆಯೂ ಕೊರೊನಾ ಮೂರನೇ ಅಲೆ ಭೀತಿ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಎರಡು ವರ್ಷಗಳಿಂದ ಹಬ್ಬದ ಸಂಭ್ರಮವನ್ನೇ ಮರೆತಿದ್ದ ಜಿಲ್ಲೆಯ ಜನರು ನಾಗರ ಪಂಚಮಿಯಲ್ಲಿನ ರೊಟ್ಟಿ ಹಬ್ಬವನ್ನು ಜಿಲ್ಲಾದ್ಯಂತ ಸಂಭ್ರಮ, ಸಡಗರದಿಂದಲೇ ಆಚರಣೆ ಮಾಡಿದ್ದು ಕಂಡುಬಂತು. ಹಬ್ಬ ಬರುವ ಮೊದಲೇ ಮನೆ ಮನೆಯಲ್ಲಿನ ಮಹಿಳೆಯರು ಹದಿನೈದು ದಿನ ಮುಂಚಿತವಾಗಿ ಎಳ್ಳು ರೊಟ್ಟಿ, ಜೋಳದ ರೊಟ್ಟಿ, ಸಜ್ಜೆ ರೊಟ್ಟಿ, ಅರಿಶಿನ ರೊಟ್ಟಿ ಹೀಗೆ ನಾನಾ ಬಗೆಯ ರೊಟ್ಟಿಗಳನ್ನು ತಟ್ಟಿಟ್ಟುಕೊಂಡಿದ್ದರು.

ರೊಟ್ಟಿ ಹಬ್ಬದ ದಿನದಂದು ಮನೆಯಲ್ಲಿ ಬದನೆಕಾಯಿ, ಹಿರೇಕಾಯಿ, ಸೌತೆಕಾಯಿ ಪಲ್ಲೆ, ಚವಳೆಕಾಯಿ ಪಲ್ಲೆ, ಹೆಸರು, ಮಡಿಕೆ, ಅಲಸಂದಿ ಕಾಳು, ಶೇಂಗಾ, ಗುರೆಳ್ಳು, ಅಗಸೆ ಪುಡಿಯನ್ನು ಸಿದ್ಧಪಡಿಸಿಟ್ಟುಕೊಂಡು ರೊಟ್ಟಿಗೆ ಅದೆಲ್ಲವನ್ನು ಬಡಿಸಿಕೊಂಡು ತಮ್ಮ ಓಣಿಯ, ಸ್ನೇಹ ಬಳಗಕ್ಕೆ, ಗ್ರಾಮದಲ್ಲಿ ಸಂಬಂಧಿಗಳ ಮನೆ ಮನೆಗೆ ತೆರಳಿ ಕೊಟ್ಟು ಅವರ ಮನೆಯ ರೊಟ್ಟಿಗಳನ್ನು ಪಡೆದು ರೊಟ್ಟಿ ಹಬ್ಬವನ್ನು ಆಚರಣೆ ಮಾಡಿದರು.

ನಾಗರ ಪಂಚಮಿಯಲ್ಲಿನ ರೊಟ್ಟಿ ಹಬ್ಬವು ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷತೆ ಪಡೆದಿದೆ. ಒಟ್ಟಿನಲ್ಲಿ ಜಿಲ್ಲಾದ್ಯಂತ ರೊಟ್ಟಿಗಳ ಸಪ್ಪಳವೂ ಜೋರಾಗಿಯೇ ನಡೆಯಿತು. ಮನೆಯ ನಾರಿಯರು ತಮ್ಮ ಸ್ನೇಹ ಬಳಗಕ್ಕೆ, ಸಂಬಂಧಿ ಕರಿಗೆ, ಮನೆ ಪಕ್ಕದಲ್ಲಿನ ಆತ್ಮೀಯರಿಗೆ ರೊಟ್ಟಿಗಳ ವಿನಿಮಯ ಮಾಡಿ ನಾವೆಲ್ಲರೂ ಸಂತೋಷದಿಂದ ಹೀಗೆ ಇರೋಣ. ಸುಖಮಯ ಜೀವನ ನಡೆಸೋಣ. ಎಲ್ಲರೂ ಭಾವೈಕ್ಯತೆಯಿಂದ ಬಾಳ್ಳೋಣ ಎನ್ನುವ ಸಂದೇಶ ಸಾರುವ ಮೂಲಕ ರೊಟ್ಟಿಯ ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.