ಕೆಲಸ ಕೊಡಿಸುವುದಾಗಿ 15 ಲಕ್ಷ ವಂಚನೆ
Team Udayavani, Mar 25, 2019, 12:14 PM IST
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ರಕ್ಷಕ ಹುದ್ದೆ ಕೊಡಿಸುವುದಾಗಿ ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬ ಗದಗ ಜಿಲ್ಲೆಯ ಯುವಕನಿಗೆ 15 ಲಕ್ಷ ರೂ. ವಂಚಿಸಿರುವ ಸಂಗತಿ ಬೆಳಕಿಗೆ ಬಂದಿದೆ.
ಈ ಸಂಬಂಧ ಗದಗ ಜಿಲ್ಲೆಯ ರವಿ ಶಿವಪ್ಪ ತಳವಾರ ಎಂಬುವರು ಮಾ.22ರಂದು ಉಪ್ಪಾರಪೇಟೆ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಹುಬ್ಬಳ್ಳಿಯ ತಾಜನಗರ ನಿವಾಸಿ ಸಾಯಿರಾಜ್ ಬಸವರಾಜ್ ರಾಮ್ ಜೀ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ಮುಂದುವರಿಸಿದ್ದಾರೆ.
ಸ್ನೇಹಿತ ಆನಂದ್ ಎಂಬಾತನ ಮೂಲಕ ರವಿ ಅವರಿಗೆ ಕೆಲ ತಿಂಗಳ ಹಿಂದೆ ಆರೋಪಿಯ ಪರಿಚಯವಾಗಿತ್ತು. ಈ ವೇಳೆ ತಾನು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದು, ಬೆಂಗಳೂರಿನಲ್ಲಿರುವ ಹಿರಿಯ ಸರ್ಕಾರಿ ಅಧಿಕಾರಿಗಳ ಪರಿಚಯವಿದೆ.
ಹಣ ಕೊಟ್ಟರೆ, ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ರಕ್ಷಕ ಹುದ್ದೆ ಕೊಡಿಸುತ್ತೇನೆ ಎಂದು ನಂಬಿಸಿದ್ದ. ಬಳಿಕ ಮಾತುಕತೆ ನಡೆಸಲು ರವಿ ಹಾಗೂ ಆತನ ಸ್ನೇಹಿತರನ್ನು ಮೆಜೆಸ್ಟಿಕ್ ಸಮೀಪದ ಖಾಸಗಿ ಹೋಟೆಲ್ಗೆ ಕರೆಸಿಕೊಂಡಿದ್ದ ಆರೋಪಿ, 15 ಲಕ್ಷ ರೂ. ಕೊಟ್ಟರೆ ಕೆಲಸ ಕೊಡಿಸುವುದಾಗಿ ಹೇಳಿದ್ದಾನೆ.
ಆರೋಪಿಯ ಮಾತು ನಂಬಿದ ರವಿ ಹಾಗೂ ಸ್ನೇಹಿತರು. ಆತ ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ. ವರ್ಗಾವಣೆ ಮಾಡಿದ್ದಾರೆ. ಆದರೆ, ಹಣ ಕೊಟ್ಟು ಬಹಳ ದಿನಗಳಾದರೂ ಆರೋಪಿ, ಕೆಲಸ ಕೊಡಿಸದೆ ತಲೆಮರೆಸಿಕೊಂಡಿದ್ದ. ಕರೆ ಮಾಡಿದರೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ ಎಂದು ರವಿ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು