ಅಭಿವೃದ್ಧಿಯ ವೇಗ; ವರದಪುರಕ್ಕೆ 2 ಬಸ್‌ಸ್ಟ್ಯಾಂಡ್‌!

ರಾಜಕೀಯ ಪೈಪೋಟಿ •ಒಂದು ಬಸ್‌ ನಿಲ್ದಾಣ ಇದ್ದಲ್ಲೇ ಮತ್ತೂಂದು ಬಸ್‌ ನಿಲ್ದಾಣ ನಿರ್ಮಾಣ

Team Udayavani, May 2, 2019, 1:25 PM IST

2-MAY-20

ಸಾಗರ: ಮರಸ, ಜಂಬಾನೆ ಮೊದಲಾದ ತಾಲೂಕಿನ ವಿವಿಧ ಗ್ರಾಮಾಂತರ ಪ್ರದೇಶಗಳಲ್ಲಿ ಬಸ್‌ ನಿಲ್ದಾಣಗಳಲ್ಲದೆ ಅಥವಾ ಇರುವ ಬಸ್‌ ಸ್ಟ್ಯಾಂಡ್‌ಗಳು ಸುಸ್ಥಿತಿಯಲ್ಲಿಲ್ಲದೆ ಸಾರ್ವಜನಿಕರು ಸಮಸ್ಯೆ ಅನುಭವಿಸುತ್ತಿದ್ದರೆ ಶ್ರೀಧರ ಸ್ವಾಮಿಗಳು ನೆಲೆಸಿದಂತಹ ವರದಪುರದಲ್ಲಿ ಇರುವ ಬಸ್‌ ನಿಲ್ದಾಣ ಗಟ್ಟಿಮುಟ್ಟಾಗಿದ್ದಾಗಲೇ ಇನ್ನೊಂದು ಬಸ್‌ ನಿಲ್ದಾಣ ಲೋಕಸಭಾ ಸದಸ್ಯರ ಸಂಸದ ನಿಧಿಯಲ್ಲಿ ನಿರ್ಮಾಣವಾಗಿರುವುದು ಹಲವರ ಹುಬ್ಬೇರಿಸುವಂತೆ ಮಾಡಿದೆ.

ಸಮೃದ್ಧಿಯ ವರದಪುರ!
ಬಳಕೆಯಲ್ಲಿರುವ ಹಂಚಿನ ಮಾಡಿನ ಬಸ್‌ ನಿಲ್ದಾಣ ಇರುವಾಗಲೇ ನಿರ್ಮಾಣಗೊಂಡಿರುವ ಇನ್ನೊಂದು ಬಸ್‌ ನಿಲ್ದಾಣ ಹಲವು ಪ್ರಶ್ನೆಗಳನ್ನು ಹುಟ್ಟಿಸಿದೆ.

2007-08ರ ಸಾಲಿನ ಶಾಸಕರ ಅನುದಾನದಲ್ಲಿ ಅಂದಿನ ಶಾಸಕ ಗೋಪಾಲಕೃಷ್ಣ ಬೇಳೂರು ವರದಪುರದ ಸ್ವಾಗತ ಕಮಾನಿನ ಪಕ್ಕದಲ್ಲಿ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ್ದರು. ಒಂದು ಲಕ್ಷ ರೂ. ಅನುದಾನದಲ್ಲಿ ಇಲ್ಲಿನ ಉಮಾಮಹೇಶ್ವರ ದೇಗುಲದ ಕಾಂಪೌಂಡ್‌ಗೆ ಅಂಟಿಕೊಂಡಂತೆ ಬಸ್‌ ನಿಲ್ದಾಣ ನಿರ್ಮಾಣವಾಗಿತ್ತು. ಸಿಮೆಂಟ್ ಕಟ್ಟೆ, ಹಂಚಿನ ಹೊದಿಕೆಯ ಮಾಡು ಹೊಂದಿರುವ ಈ ನಿಲ್ದಾಣ ಇಂದಿಗೂ ಸುಸ್ಥಿತಿಯಲ್ಲಿದೆ. ಇದ್ದಕ್ಕಿದ್ದಂತೆ ಇದರ ಪಕ್ಕದಲ್ಲಿ ಈ ವರ್ಷ ಶಿವಮೊಗ್ಗದ ನಿರ್ಮಿತಿ ಕೇಂದ್ರ ಸಂಸತ್‌ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮತ್ತೂಂದು ಬಸ್‌ ನಿಲ್ದಾಣ ನಿರ್ಮಾಣವಾಗಿದೆ. 2017-18ನೇ ಸಾಲಿನ ಸಂಸದರ ನಿಧಿಯಡಿ ಶಿವಮೊಗ್ಗ ಕ್ಷೇತ್ರದ ಎಂಪಿ ಯಡಿಯೂರಪ್ಪ ಪಾಲಿನ ಮೂರು ಲಕ್ಷ ರೂ. ಬಳಸಿ ಈ ನಿಲ್ದಾಣ ನಿರ್ಮಿಸಲಾಗಿದೆ.

ತಾಲೂಕಿನ ಗಾಳಿಪುರ, ಅಂಬುಗಳಲೆ, ಕೌತಿ, ಮರಸ, ಜಂಬಾನಿ ಮೊದಲಾದೆಡೆ ಬಸ್‌ ನಿಲ್ದಾಣ ಇಲ್ಲದೆ ಅಥವಾ ಇರುವ ಬಸ್‌ ನಿಲ್ದಾಣ ಬಳಕೆಗೆ ಯೋಗ್ಯವಿಲ್ಲದೆ ಪ್ರಯಾಣಿಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಅಂಬುಗಳಲೆಯ ಬಸ್‌ ನಿಲ್ದಾಣದಲ್ಲಿ ಪಕಾಶಿಯೇ ತುಂಡಾಗಿ ಬಿದ್ದು ಕುಳಿತುಕೊಳ್ಳುವುದೇ ಅಪಾಯ ಎನ್ನುವಂತಿದೆ. ಸಾಗರದ ರಾಮನಗರದಲ್ಲಿ ಎರಡು ವರ್ಷಗಳ ಹಿಂದೆ ತಂಗುದಾಣ ಬಿದ್ದ ನಂತರ ಮತ್ತೂಂದು ಬಸ್‌ ನಿಲ್ದಾಣ ನಿರ್ಮಾಣವಾಗಿಲ್ಲ. ಒಂದು ಬಸ್‌ ಓಡಾಡುವ ಗ್ರಾಮೀಣ ಭಾಗದಲ್ಲೂ ಬಸ್‌ ನಿಲ್ದಾಣ ಹೆಚ್ಚು ಅವಶ್ಯಕ. ಈ ಭಾಗದಲ್ಲಿ ಮಳೆಗಾಲದ ಸಂದರ್ಭದಲ್ಲಿ ಬಸ್‌ ನಿಲ್ದಾಣದ ಆಶ್ರಯದಲ್ಲಿ ಬಸ್‌ಗಾಗಿ ಕಾಯುವುದು ಅನಿವಾರ್ಯವಾಗುತ್ತದೆ. ಆದರೆ ಒಂದು ಬಸ್‌ ನಿಲ್ದಾಣ ಇರುವಲ್ಲಿಯೇ ಇನ್ನೊಂದು ಬಸ್‌ ನಿಲ್ದಾಣ ನಿರ್ಮಾಣ ತೀರಾ ಅನಗತ್ಯವಾದುದು ಎಂಬ ವಾದ ಕೇಳಿಬಂದಿದೆ. ಅಂತಹ ಸÊಮೃದ್ಧಿಯ ವರವನ್ನು ವರದಪುರ ಪಡೆದಿರುವುದರಲ್ಲಿ ರಾಜಕೀಯದ ಸೋಂಕು ಕೂಡ ಇದೆ ಎಂದೂ ಕೆಲವರು ವಿಶ್ಲೇಷಿಸುತ್ತಾರೆ.

ಪುಕ್ಕಟೆ ಪ್ರಚಾರ!
ಗ್ರಾಪಂ ಅನುದಾನದಲ್ಲಿ ಕೂಡ ಬಸ್‌ ನಿಲ್ದಾಣಗಳನ್ನು ನಿರ್ಮಾಣ ಮಾಡುವ ಸಾಧ್ಯತೆ ಇದೆಯಾದರೂ, ಬಹುತೇಕ ಗ್ರಾಪಂಗಳು ಈ ರೀತಿಯ ಕಟ್ಟಡ ನಿರ್ಮಾಣ ಯೋಜನೆಗಳಲ್ಲಿ ಬೇರೆ ಬೇರೆ ಮನೆ ನಿರ್ಮಾಣಕ್ಕೆ ಆದ್ಯತೆ ನೀಡುತ್ತವೆ. ಇದೇ ವೇಳೆ ಶಾಸಕ ನಿಧಿ ಅಥವಾ ಸಂಸದರ ನಿಧಿ ಬಳಸಿ ಬಸ್‌ ನಿಲ್ದಾಣ ನಿರ್ಮಿಸಿಕೊಡಲು ಜನಪ್ರತಿನಿಧಿಗಳು ಕೂಡ ಉತ್ಸುಕರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಜನರಿಂದ ನೇರ ಮನವಿ ಪಡೆಯುವ ಜನಪ್ರತಿನಿಧಿಗಳು ತಮಗಿರುವ ಅವಕಾಶ ಬಳಸಿಕೊಂಡು ಶಿಫಾರಸು ಮಾಡುತ್ತಾರೆ. ಬಸ್‌ ನಿಲ್ದಾಣದಲ್ಲಿ ತಮ್ಮ ಅನುದಾನದಿಂದ ನಿರ್ಮಿಸಿರುವ ಕುರಿತು ದೊಡ್ಡ ಫಲಕ ಅಳವಡಿಸುವ ಮೂಲಕ ಪುಕ್ಕಟೆ ಪ್ರಚಾರ ಪಡೆಯುವ ಕೆಲಸವನ್ನೂ ಅವರು ಮಾಡುತ್ತಾರೆ.

ಅದರಲ್ಲೂ ರಾಜಕೀಯವಿದೆ!
ಬಸ್‌ ನಿಲ್ದಾಣಗಳ ನಿರ್ಮಾಣ ಎಂಬುದು ಕೇವಲ ಅಗತ್ಯಗಳನ್ನು ಪೂರೈಸುವ ಕೆಲಸವಲ್ಲ. ಓರ್ವ ಜನಪ್ರತಿನಿಧಿ ತನಗೆ ಹೆಚ್ಚು ಮತ ಕೊಟ್ಟಂತಹ ಸ್ಥಳಗಳ ಮತದಾರರನ್ನು ಓಲೈಸಲು ಈ ರೀತಿ ಬಸ್‌ ನಿಲ್ದಾಣಗಳ ನಿರ್ಮಾಣ ಮಾಡುತ್ತಾರೆ. ಈ ರೀತಿ ಬಸ್‌ ನಿಲ್ದಾಣ ಇದ್ದಲ್ಲೇ ಮತ್ತೂಂದು ಬಸ್‌ಸ್ಟ್ಯಾಂಡ್‌ ಕಟ್ಟುವ ಪರಂಪರೆ ಸಾಗರ ತಾಲೂಕಿನಲ್ಲಿ ಹೊಸದೇನೂ ಅಲ್ಲ. ತಾಲೂಕಿನ ಕಲ್ಮನೆ ಗ್ರಾಪಂ ವ್ಯಾಪ್ತಿಯ ಚಿಪ್ಳಿ ಲಿಂಗದಹಳ್ಳಿಯ ಸಾಗರ ವರದಾಮೂಲ ರಸ್ತೆ ಪಕ್ಕದ ಚಿಪ್ಳಿ ಕೆರೆಯ ದಡದಲ್ಲಿ ಆರು ವರ್ಷಗಳ ಹಿಂದೆ ನಿರ್ಮಿಸಲಾದ ಬಸ್‌ ಪ್ರಯಾಣಿಕರ ತಂಗುನಿಲ್ದಾಣದ ಪಕ್ಕದಲ್ಲಿ 2015ರಲ್ಲಿ ಅಂದಿನ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್‌ ಇನ್ನೊಂದು ತಂಗುದಾಣವನ್ನು ತಮ್ಮ ಸಂಸದ ನಿಧಿಯಿಂದ ಮಂಜೂರು ಮಾಡಿ ಕಟ್ಟಿಸಿದ್ದನ್ನೂ ಈ ಹಿಂದೆ ಕಂಡಿದ್ದೇವೆ ಎಂದು ಸಾಮಾಜಿಕ ಕಾರ್ಯಕರ್ತ ಜಯಪ್ರಕಾಶ್‌ ಗಮನ ಸೆಳೆಯುತ್ತಾರೆ. ಶಾಸಕ ನಿಧಿ ಅಥವಾ ಸಂಸದ ನಿಧಿಯಲ್ಲಿ ಬಸ್‌ ನಿಲ್ದಾಣಗಳ ನಿರ್ಮಾಣದಲ್ಲಿ ಜನಪ್ರತಿನಿಧಿಗಳು ಶಿಫಾರಸು ಮಾಡುವ ಅಧಿಕಾರವನ್ನು ಮಾತ್ರ ಹೊಂದಿರುತ್ತಾರೆ. ಈ ಶಿಫಾರಸಿನ ಆಧಾರದಲ್ಲಿ ಅಗತ್ಯ, ಅರ್ಹತೆಯನ್ನು ಆಧರಿಸಿ ಕಾಮಗಾರಿ ಮಂಜೂರಿಗೆ ಅಧಿಕಾರಿಗಳು ಮುಂದಾಗಬೇಕು. ವರದಪುರದ ಪ್ರಕರಣದಲ್ಲಿ ಒಂದರ ಪಕ್ಕದಲ್ಲಿ ಮತ್ತೂಂದು ಬಸ್‌ ನಿಲ್ದಾಣ ನಿರ್ಮಾಣ ಸ್ಪಷ್ಟವಾಗಿ ಸಾರ್ವಜನಿಕ ಹಣದ ದುರುಪಯೋಗ ಕಂಡುಬರುತ್ತದೆ. ಸಂಸದರ ನಿಧಿ ಜಿಲ್ಲಾಧಿಕಾರಿಗಳ ಖಜಾನೆಗೆ ಬರುತ್ತದೆ. ಅವರು ಕಾಮಗಾರಿಗೆ ಹಣ ಬಿಡುಗಡೆ ಮಾಡುತ್ತಾರೆ. ಈ ಪ್ರಕರಣದಲ್ಲಿ ಸರ್ಕಾರದ ಹಣ ಲೂಟಿಯಾಗಲು ಕಾರಣರಾದವರನ್ನು ಶಿಕ್ಷಿಸಬೇಕು ಎಂದು ಅವರು ಒತ್ತಾಯಿಸಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.