7ರಿಂದ ಬೇಸೂರು ಈಶ್ವರ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ


Team Udayavani, May 6, 2019, 4:44 PM IST

6–May-29

ಸಾಗರ: ಬೇಸೂರು ಗ್ರಾಮದ ಕಾನುಗೋಡು ಈಶ್ವರ ದೇವಾಲಯ ಪುನರ್‌ ಪ್ರತಿಷ್ಠಾಪನೆಗೆ ಸಿದ್ಧಗೊಂಡಿದ್ದು, ಕಾರ್ಯಕ್ರಮದ ತಯಾರಿ ನಡೆದಿದೆ.

ಸಾಗರ: ತಾಲೂಕಿನ ಬೇಸೂರು ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ಕಾನುಗೋಡು ಈಶ್ವರ ದೇವಾಲಯದ ಪುನರ್‌ ಪ್ರತಿಷ್ಠಾಪನಾ ಮಹೋತ್ಸವ ಇದೇ ಮೇ 7ರಿಂದ 9 ರವರೆಗೆ ನಡೆಯಲಿದೆ. ಈ ನಿಮಿತ್ತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಮೂಲತಃ ಶರಾವತಿ ಯೋಜನೆಯ ಮುಳುಗಡೆ ಪ್ರದೇಶದಲ್ಲಿದ್ದ ಈ ದೇವಾಲಯ ಅಲ್ಲಿನ ಕುಟುಂಬಗಳು ಸ್ಥಳಾಂತರಗೊಂಡಾಗ ಸುಮಾರು 50 ವರ್ಷಗಳ ಹಿಂದೆ ದೇವರ ಮೂರ್ತಿಯನ್ನು ಸಹ ತಂದು ಬೇಸೂರು ಗ್ರಾಮದಲ್ಲಿ ಚಿಕ್ಕ ಗುಡಿ ನಿರ್ಮಿಸಿ ಪ್ರತಿಷ್ಠಾಪಿಸಲಾಗಿತ್ತು. ಮನೆ ದೇವರೆಂದು ಆರಾಧಿಸುವ ಹಲವು ಕುಟುಂಬಗಳು ಈ ದೇವರ ಪೂಜೆ ನಡೆಸುತ್ತಿದ್ದು. ಕ್ರಮೇಣ ದೇಗುಲ ಜೀರ್ಣಗೊಂಡಿತ್ತು. ಈಗ ಗ್ರಾಮಸ್ಥರು ಮತ್ತು ದೇವರ ಒಕ್ಕಲಿನವರೆಲ್ಲ ಸೇರಿ ಆಲಯ ನಿರ್ಮಿಸಿದ್ದಾರೆ.

ಸೊರಬದ ಕ್ಯಾಸನೂರು ಸಂಸ್ಥಾನ ಮಠದ ಗುರುಬಸವ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ವೇದಮೂರ್ತಿ ಪುಟ್ಟಯ್ಯ ಆಲಳ್ಳಿಮಠ ಶಾಸ್ತ್ರಿಗಳ ಪೌರೋಹಿತ್ಯದ ನೇತೃತ್ವದಲ್ಲಿ ವಿವಿಧ ವಾಸ್ತು ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. 7ರಂದು ಸಂಜೆ ಆಲಯ ಪ್ರವೇಶ, ಆಲಯ ಪ್ರತಿಷ್ಠೆ, ಆಲಯ ಶುದ್ಧಿ, ವಾಸ್ತುರಕ್ಷೋಘ್ನ ಹೋಮ, ವಾಸ್ತು ಬಲಿ, ಭೂತ ಬಲಿ ಇತ್ಯಾದಿ ನಡೆಯಲಿದೆ. 8ರಂದು ಬೆಳಗ್ಗೆ ಯಾಗಶಾಲಾ ಪ್ರವೇಶ, ಋತ್ವಿಗ್ವರಣ, ಶೈವಪುಣ್ಯಾಹ, ಪಂಚಗವ್ಯ ಮಂಟಪ ಪ್ರತಿಷ್ಠಾಪನೆ, ಕಲಶ ಸ್ಥಾಪನೆ, ಅಗ್ನಿ ಜನನ, ಶಯವಾಗ್ನಿ ಪ್ರತಿಷ್ಠೆ, ವಿಗ್ರಹ ಸಂಸ್ಕಾರ ನಡೆಯಲಿದೆ. ಅದೇ ದಿನ ಸಂಜೆ ಪ್ರತಿಷ್ಠಾಂಗ ಹೋಮ, ತತ್ವ ಹೋಮ, ನಿಕುಂಭ ಸ್ಥಾಪನೆ, ವಿಗ್ರಹ ಸ್ಥಾಪನೆ ನಡೆಯಲಿದೆ. 9ರಂದು ಮಂತ್ರೋಪದೇಶ, ದೇವತಾ ಆಹ್ವಾಹನೆ, ಪ್ರಾಣಪ್ರತಿಷ್ಠೆ, ಶಿಖರ ಪ್ರತಿಷ್ಠೆ, ಪೂರ್ಣಾಹುತಿ, ಕುಂಭಾಭಿಷೇಕ, ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 9-30ಕ್ಕೆ ನಿಲಿಯೂರಿನ ಶನೇಶ್ವರ ಸಂಗೀತ ಯಕ್ಷಗಾನ ಮೇಳದಿಂದ ರಾಜಾವಿಕ್ರಮ ಎಂಬ ಪೌರಾಣಿಕ ಕಥಾನಕ ಪ್ರದರ್ಶನ ನಡೆಯಲಿದೆ.

9ರಂದು ಅಪರಾಹ್ನ ಧಾರ್ಮಿಕ ಸಭೆ ನಡೆಯಲಿದೆ. ಕ್ಯಾಸನೂರು ಸಂಸ್ಥಾನ ಮಠದ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಶ್ರೀ ಕ್ಷೇತ್ರ ಸಿಗಂದೂರಿನ ಧರ್ಮದರ್ಶಿ ರಾಮಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದೇವಾಲಯ ಸೇವಾ ಟ್ರಸ್ಟಿನ ಅಧ್ಯಕ್ಷ ಕೆ.ಎಸ್‌. ದಿನೇಶ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಸಿ ಜಿಲ್ಲಾ ನಿರ್ದೇಶಕ ಶೇಖರ ಗೌಡ, ಪ್ರಧಾನ ಅರ್ಚಕ ವೀರಪ್ಪ ಗೌಡ ತಿರಗಳಲೆ ಇನ್ನಿತರ ಪ್ರಮುಖರು ಉಪಸ್ಥಿತರಿರುವರು.

ಟಾಪ್ ನ್ಯೂಸ್

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.