ಗಾರ್ಗಿ ಜಿಲ್ಲಾ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ

ಬಹುಮುಖ ಪ್ರತಿಭೆಯ ಕುಟುಂಬಕ್ಕೆ ಸಂದ ಗೌರವ •23ರಂದು ಸಮ್ಮೇಳನ

Team Udayavani, Sep 15, 2019, 12:45 PM IST

15-Sepctember-12

ಸಾಗರ: ತಂದೆ ಶೈಲೇಂದ್ರ, ತಾಯಿ ಸರಸ್ವತಿ ಅವರ ಜೊತೆ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಗಾರ್ಗಿ ಸೃಷ್ಟೀಂದ್ರ.

ಸಾಗರ: ಸೆ. 23ರಂದು ತಾಲೂಕಿನ ಹೊಸಗುಂದದ ಉಮಾಮಹೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಲಿರುವ ಜಿಲ್ಲಾ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ತಾಲೂಕಿನ ಬಂದಗದ್ದೆ ಗ್ರಾಮದ ಗಾರ್ಗಿ ಸೃಷ್ಟೀಂದ್ರ ಆಯ್ಕೆಯಾಗಿದ್ದಾರೆ. ಈ ಮುನ್ನ ಗಾರ್ಗಿ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ನಗರದ ನಿರ್ಮಲಾ ಬಾಲಿಕಾ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ಗಾರ್ಗಿ ಸಾಹಿತ್ಯದ ಜೊತೆಗೆ ವಿವಿಧ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ.

ಗಾರ್ಗಿ ತಂದೆ ಕೃಷಿಕ, ಚಿಂತಕ ಶೈಲೇಂದ್ರ ಬಂದಗದ್ದೆ ಹೆಗ್ಗೋಡಿನ ನೀನಾಸಂ, ಸಾಗರ್‌ ಫೋಟೋಗ್ರಾಫಿಕ್‌ ಸೊಸೈಟಿ, ಬಳಕೆದಾರರ ವೇದಿಕೆ, ಅಡಕೆ ಬೆಳೆಗಾರರ ಸಂಘ, ಕವನ, ಲೇಖನ ಮೊದಲಾದೆಡೆ ತಮ್ಮನ್ನು ಗುರುತಿಸಿಕೊಂಡವರು. ತಾಯಿ ಸರಸ್ವತಿ ಹೆಗಡೆ ಯಕ್ಷಗಾನದ ಹಿನ್ನೆಲೆಯವರು. ಅವರ ತಂದೆ ಪ್ರಸಿದ್ಧ ಯಕ್ಷಗಾನ ಪಾತ್ರಧಾರಿಯಾಗಿ ಹೆಸರು ಮಾಡಿದ್ದರು.

ಸತತ ಮೂರು ವರ್ಷ ಪ್ರಾಥಮಿಕ ಶಾಲಾ ಮಟ್ಟದ ಪ್ರತಿಭಾ ಕಾರಂಜಿಯ ‘ಕಥೆ ಹೇಳುವ ಸ್ಪರ್ಧೆ’ಯಲ್ಲಿ ಶಿವಮೊಗ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುವ ಗಾರ್ಗಿ 8ನೇ ವಯಸ್ಸಿನಲ್ಲಿಯೇ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಲ್ಲಿ ಭಾಗವಹಿಸಿ, ಪ್ರಸ್ತುತಪಡಿಸಿದ ‘ಅಮ್ಮ’ ಮತ್ತು ‘ಅಕ್ಕ’ ಕವಿತೆಗಳು ಜನಮೆಚ್ಚುಗೆ ಗಳಿಸಿತು. ಶಿವಮೊಗ್ಗದಲ್ಲಿ ನಡೆದ ‘ಚಿಣ್ಣರ ಸಾಹಿತ್ಯ ಚಿಲುಮೆ’ ಕಾರ್ಯಾಗಾರದಲ್ಲಿ ಭಾಗವಹಿಸಿ, ‘ಕನಸು’ ಆಶುಕವನಕ್ಕೆ ಪ್ರಥಮ ಸ್ಥಾನ ಲಭಿಸಿದೆ.

2013 ಮತ್ತು 2014ರಲ್ಲಿ ಸತತ ಎರಡು ವರ್ಷ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಕಥಾ ಗೋಷ್ಠಿಯಲ್ಲಿ ಹೇಳಿದ ಸ್ವರಚಿತ ಕಥೆ ‘ದೇವರು’ ಹಾಗೂ ಕವಿಗೋಷ್ಠಿಯಲ್ಲಿ ಹೇಳಿದ ‘ವಿಸ್ಮಯ’ ಕವನ ಹಂಸಲೇಖ ಹಾಗೂ ಬಿ.ಆರ್‌. ಲಕ್ಷ್ಮಣ ರಾವ್‌ ಅವರ ಪ್ರಶಂಸೆಗೆ ಪಾತ್ರವಾಗಿತ್ತು.

ಗಾರ್ಗಿ ಅವರು ಕರಿಬೇವು ಎಂಬ ನಾಟಕ ಬರೆದಿದ್ದಾರೆ. ದೇವರು, ಕೇಕಿನ ಗೃಹದತ್ತ ನನ್ನ ಚಿತ್ತ, ವಿವಿಧತೆಯಲ್ಲಿ ಏಕತೆ ಎಂಬ ತಲೆಬರಹದ ಕಥೆ ಬರೆದಿದ್ದಾರೆ. ಅಕ್ಕ, ಅಮ್ಮ, ಅಪ್ಪ, ನಮ್ಮ ಶಾಲೆ, ಮಳೆ, ಗುಲಾಬಿ, ಕನಸು, ವಿಸ್ಮಯ, ಪರಿಸರ, ಗಣಪ, ನಮ್ಮ ದೇಶ ಎಂಬ ಕವಿತೆಗಳನ್ನು ಹೆಣೆದಿದ್ದಾರೆ. ಇತೀಚೆಗೆ ನಡೆದ ಪ್ರೌಢಶಾಲಾ ಮಟ್ಟದ ‘ರಾಬಿಯಾ ಕ್ವಿಜ್‌ ಕಾಂಟೆಸ್ಟ್‌’ನಲ್ಲಿ ಇವರ ಶಾಲಾ ತಂಡ ಪ್ರಥಮ ಸ್ಥಾನ ಗಳಿಸಿತ್ತು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.