ಬಿರುಗಾಳಿ ಮಳೆಯಿಂದ ಅನಾಹುತ; ಸಂಚಾರ ವ್ಯತ್ಯಯ


Team Udayavani, Jun 7, 2019, 12:41 PM IST

07-Jun-19

ಸಾಗರ: ಭೀಮನಕೋಣೆಯಲ್ಲಿ ರಸ್ತೆಯ ಮೇಲೆ ಬೃಹತ್‌ ಮರ, ಲೈನ್‌ ಕಂಬಗಳು ಬಿದ್ದಿದ್ದ ಹಿನ್ನೆಲೆಯಲ್ಲಿ ಸಂಚಾರ ವ್ಯತ್ಯಯವಾಗಿತ್ತು.

ಸಾಗರ: ತಾಲೂಕಿನಾದ್ಯಂತ ವಿವಿಧ ಭಾಗಗಳಲ್ಲಿ ಬುಧವಾರ ತಡ ರಾತ್ರಿ ಬಿರುಗಾಳಿ, ಮಳೆಯ ಕಾರಣದಿಂದ ಅನಾಹುತಗಳ ಸರಮಾಲೆಯೇ ಸೃಷ್ಟಿಯಾಗಿದ್ದು ಬಹುತೇಕ ಭಾಗಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ತಾಲೂಕಿನಾದ್ಯಂತ ಗ್ರಾಮೀಣ ಭಾಗದಲ್ಲಿ ಹಲವಾರು ಮರಗಳು ಉರುಳಿದ್ದು, 25ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ.

ತಾಲೂಕಿನ ಮತ್ತಿಕೊಪ್ಪ, ಮಂಕಳಲೆ ಭಾಗಗಳಲ್ಲಿ ಮನೆಗಳ ಮೇಲೆ ಮರಗಳು ಉರುಳಿ, ನಿವಾಸಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಳಿಗೆ ಮನೆಯ ಹೆಂಚು ಹಾರಿಹೋಗಿರುವುದು ಸಾಮಾನ್ಯವಾಗಿದೆ. ವರದಹಳ್ಳಿಯಲ್ಲಿ ಕೊಟ್ಟಿಗೆ ಮನೆಯೊಂದರ ಮಾಡು ಕುಸಿದು ಬಿದ್ದಿದ್ದು, ಸಕಾಲದಲ್ಲಿ ಕೊರಳ ಪಟ್ಟಿ ಬಿಚ್ಚಿದ್ದರಿಂದ ಜಾನುವಾರುಗಳು ಬಚಾವಾಗಿವೆ.

ಭೀಮನಕೋಣೆ, ಮುಂಗರವಳ್ಳಿ, ಗಿಣಿವಾರ, ಶೆಡ್ತಿಕೆರೆ, ಜಂಬೂರುಮನೆ ವ್ಯಾಪ್ತಿಯಲ್ಲಿ ಹೆಚ್ಚು ಪ್ರಮಾಣದಲ್ಲಿ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಭೀಮನಕೋಣೆ, ಮುಂಗರವಳ್ಳಿ ಭಾಗದಲ್ಲಿ ರಸ್ತೆಯಲ್ಲಿ ಮರಗಳು ಉರುಳಿದ ಹಿನ್ನೆಲೆಯಲ್ಲಿ ಗುರುವಾರ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಂಚಾರದ ಸಮಸ್ಯೆ ಅನುಭವಿಸಿದರು. ಬೆಳಗಿನ ಸಮಯದಲ್ಲಿ ಅಮಟೆಕೊಪ್ಪದ ಮೂಲಕ ಹೊಸನಗರ ಸಾಗರ ಪ್ರಯಾಣಿಕರು ಪರ್ಯಾಯ ಮಾರ್ಗ ಬಳಸಿದರು. ಆದರೆ ಸರ್ಕಾರಿ ಅಧಿಕಾರಿಗಳು, ಇಲಾಖಾ ನೌಕರರ ಆಗಮನವನ್ನು ಕಾಯದೆ ಭೀಮನಕೋಣೆಯ ಗ್ರಾಮಸ್ಥರು ಮರ ತೆರವು ಕಾರ್ಯಾಚಾರಣೆ ನಡೆಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಮುಂಗರವಳ್ಳಿ ಬಳಿ ಗುರುವಾರ ಬೆಳಗ್ಗೆ ಧರೆಗುರುಳಿದ ವಿದ್ಯುತ್‌ ತಂತಿಗಳ ಮೇಲೆ ಆಕಸ್ಮಿಕವಾಗಿ ಸಂಚರಿಸಿದ ಆಟೋರಿಕ್ಷಾವೊಂದು ಪಲ್ಟಿಯಾಗಿದ್ದು, ಆಟೋದಲ್ಲಿದ್ದ ಹಾಲು ಪ್ಯಾಕೇಟ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಚಾಲಕ ಸಾಗರದ ಭಾಷಾ ಅವರಿಗೆ ಸಣ್ಣಪುಟ್ಟ ಪೆಟ್ಟುಗಳಾಗಿವೆ. ನಗರದಲ್ಲಿ ಒಳ್ಳೆಯ ಮಳೆ ಸುರಿದಿದ್ದರೂ ಗಾಳಿಯ ಪ್ರತಾಪ ಕಾಣಿಸಿಲ್ಲವಾದ್ದರಿಂದ ಯಾವುದೇ ಅನಾಹುತದ ಮಾಹಿತಿ ಲಭ್ಯವಾಗಿಲ್ಲ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.