ಶಾಲೆಯಲ್ಲೇ ಮಕ್ಕಳಿಗೆ ಪ್ರಜಾತಂತ್ರದ ಅನುಭವ!

ಮಕ್ಕಳಿಗೆ ಭ್ರಷ್ಟಾಚಾರ ರಹಿತ ಚುನಾವಣೆಯ ಪಾಠ ಅಧಿಕಾರ ಪ್ರಮಾಣ ವಚನ ಸ್ವೀಕಾರ

Team Udayavani, Jun 23, 2019, 4:41 PM IST

23–June-39

ಸಾಗರ: ಹೊಂಗಿರಣ ಶಾಲೆಯಲ್ಲಿ ಶನಿವಾರ ಮತದಾನಕ್ಕೆ ಮುಂದಾದ ವಿದ್ಯಾರ್ಥಿಗಳ ಸಾಲು.

ಸಾಗರ: ಇತ್ತೀಚಿನ ದಿನಗಳಲ್ಲಿ ಸಾಗರ ತಾಲೂಕು ಪದೇ ಪದೇ ಚುನಾವಣೆಗಳನ್ನು ಕಾಣುತ್ತಿದೆಯಾದರೂ, ಮಕ್ಕಳಿಗೆ ಚುನಾವಣೆಯ ಮತದಾನದ ದಿನ ರಜೆ ಪಡೆಯುವ ಅನುಭವ ಮಾತ್ರವಿತ್ತು. ಆದರೆ ತಾಲೂಕಿನ ಅಮಟೆಕೊಪ್ಪದ ಹೊಂಗಿರಣ ಸ್ಕೂಲ್ ಆಫ್‌ ಎಕ್ಸಲೆನ್ಸ್‌ನಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಮಕ್ಕಳೇ ಮತದಾರರಾಗಿದ್ದರು, ಅಭ್ಯರ್ಥಿಗಳಾಗಿದ್ದರು ಮತ್ತು ಮತ ಎಣಿಕೆ ನಡೆದು ವಿಜೇತರ ಘೋಷಣೆಯಾಯಿತು. ಇದು ಯಾವುದೇ ರೀತಿಯ ಅಣಕು ಚುನಾವಣೆಯಾಗಿರದೆ ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲಾ ನಾಯಕರನ್ನು ಆರಿಸಿಕೊಳ್ಳಲು ನಡೆಸಿದ ಅಪ್ಪಟ ಜನತಾಂತ್ರಿಕತೆಯಾಗಿತ್ತು!

ಜೂ. 10ರಂದು ಚುನಾವಣೆ ಅಧಿಸೂಚನೆ ಹೊರಡಿಸುವುದರೊಂದಿಗೆ ಚುನಾವಣೆ ಪ್ರಕ್ರಿಯೆ ಆರಂಭವಾಗಿತ್ತು. 11ಕ್ಕೆ ನಾಮಪತ್ರ ಸಲ್ಲಿಸಿದ ವಿದ್ಯಾರ್ಥಿಗಳು ಕೆಲವು ನಿಬಂಧನೆಗಳನ್ನು ದಾಟಿದರೆ ಮಾತ್ರ ನಾಮಪತ್ರ ಸಿಂಧು ಆಗುವ ನಿಯಮ ರೂಪಿಸಲಾಗಿತ್ತು ಎಂದು ಮಾಹಿತಿ ನೀಡುವ ಶಾಲೆಯ ಶಿಕ್ಷಕ, ಮುಖ್ಯ ಚುನಾವಣಾಧಿಕಾರಿ ಸಂದೀಪ್‌ ಶೆಟ್ಟಿ, ಈ ವರ್ಷದ ಚುನಾವಣೆಯಲ್ಲಿ 10ನೇ ತರಗತಿ ಓದುತ್ತಿರುವವರಿಗೆ ಮಾತ್ರ ಅರ್ಹತೆ ಕೊಡಲಾಗಿತ್ತು. ಅವರಲ್ಲೂ 9ರಲ್ಲಿ ಶೇ. 75ಕ್ಕಿಂತ ಹೆಚ್ಚು ಅಂಕ ಪಡೆದವರು, ಕನಿಷ್ಟ ತಾಲೂಕು ಮಟ್ಟದ ಕ್ರೀಡೆ ಅಥವಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವರು, ಶಾಲೆಯ ಪ್ರಾರ್ಥನೆ ಹಾಗೂ ಸಂವಿಧಾನದ ಮೂಲ ಆಶಯಗಳ ಅರಿವಿದ್ದವರು ಮಾತ್ರ ಸ್ಪರ್ಧಿಸುವ ಅರ್ಹತೆ ಪಡೆಯುತ್ತಾರೆ. ಈ ಬಾರಿ ನಾಮಪತ್ರ ಸಲ್ಲಿಸಿದ ಮೂವರು ಮಕ್ಕಳು ಜೂ. 15ರಂದು ನಡೆದ ಪರಿಶೀಲನೆ ಸಂದರ್ಭದಲ್ಲಿ ಷರತ್ತುಗಳನ್ನು ಸಮರ್ಥವಾಗಿ ಪೂರೈಸಿದರು ಎಂದರು.

ಜೂನ್‌ 17ರಿಂದ ಸ್ಪರ್ಧೆಯಲ್ಲಿದ್ದ ಅಕ್ಷಯಕುಮಾರ್‌, ನೀಲೇಂದ್ರ ಹಾಗೂ ಆತ್ಮಶ್ರೀ ಬಹಿರಂಗ ಪ್ರಚಾರಕ್ಕಿಳಿದರು. ಶುಕ್ರವಾರಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯಲಾಯಿತು. ಶನಿವಾರ 10ರಿಂದ 11-30ರವರೆಗೆ ಮತದಾನ ನಡೆದರೆ 11-45ಕ್ಕೆ ಮತ ಎಣಿಕೆ ನಡೆಸಿ 12-30ಕ್ಕೆ ಫಲಿತಾಂಶ ಘೋಷಿಸಲಾಯಿತು. ಎಲ್ಲ ಚುನಾವಣಾ ಪ್ರಕ್ರಿಯೆಯಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ಶಿಕ್ಷಕರಾದ ನವೀನ್‌, ರಾಜೀವ್‌, ಶ್ರೀಧರ್‌ ಭಟ್, ಉಮೇಶ್‌, ಗೌತಮಿ, ಸುನಿಲ್, ಕಾವ್ಯ ಮೊದಲಾದವರು ಚುನಾವಣಾ ಕಾರ್ಯ ನಿರ್ವಹಿಸಿದರು.

ಚುನಾವಣಾ ವೀಕ್ಷಕರಾಗಿ ಪಾಲ್ಗೊಂಡ ಉಪ ಪ್ರಾಚಾರ್ಯ ಅರವಿಂದ್‌ ಗುರ್ಜರ್‌, ಮಕ್ಕಳಿಗೆ ಮತ ಹಾಕಲು ಮತಪತ್ರಗಳನ್ನು ಒದಗಿಸಲಾಗಿತ್ತು. ಅದರಲ್ಲಿ ಅಭ್ಯರ್ಥಿಗಳ ಕ್ರಮಸಂಖ್ಯೆ ಹಾಗೂ ಹೆಸರು ಮಾತ್ರ ನಮೂದಾಗಿತ್ತು. ಮತದಾನ ಮಾಡಿದ ಮಕ್ಕಳ ಬೆರಳಿಗೆ ಶಾಹಿ ಕೂಡ ಹಾಕಲಾಗಿತ್ತು. ಮತದಾನದ ನಂತರ ಮತ ಪೆಟ್ಟಿಗೆಯನ್ನು ಸ್ಟ್ರಾಂಗ್‌ ರೂಂಗೆ ತೆಗೆದುಕೊಂಡು ಹೋಗಲಾಗಿತ್ತು. ಈ ನಡುವಿನ ಸಮಯದಲ್ಲಿ ನಾನು ಮಕ್ಕಳಿಗೆ ಬೇರೆ ಬೇರೆ ದೇಶಗಳ ಚುನಾವಣಾ ವ್ಯವಸ್ಥೆ, ಜನಪ್ರತಿನಿಧಿಗಳಾಗುವವರ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದೆ ಎಂದರು.

ಚುನಾವಣೆಯಲ್ಲಿ ಚಲಾವಣೆಯಾದ 460 ಮತಗಳಲ್ಲಿ ಅಕ್ಷಯಕುಮಾರ್‌ 253 ಮತಗಳನ್ನು ಪಡೆದು ಶಾಲಾ ನಾಯಕರಾಗಿ ಚುನಾಯಿತರಾದರು. ನೀಲೇಂದ್ರ 186 ಮತಗಳನ್ನು ಹಾಗೂ 15 ಮತಗಳನ್ನು ಆತ್ಮಶ್ರೀ ಪಡೆದರು. ಆರು ಮತಗಳು ತಿರಸ್ಕೃತವಾದವು. ಮತಪತ್ರದಲ್ಲಿ ನೋಟಾ ಆಯ್ಕೆ ಇರಲಿಲ್ಲ. ಸಂದೀಪ್‌ ಶೆಟ್ಟಿ ಶಾಲೆಯ ಚುನಾವಣೆಯ ಗಂಭೀರತೆಯ ಬಗ್ಗೆ ಮಾತನಾಡಿ, ಆಯ್ಕೆಯಾದ ಶಾಲಾ ನಾಯಕ ಶಾಲೆಯ ಶಿಸ್ತು, ಹೊಸದರ ಅಳವಡಿಕೆ ಮೊದಲಾದ ಪ್ರಮುಖ ವಿಚಾರಗಳಲ್ಲಿ ತಮ್ಮ ಅಭಿಪ್ರಾಯ ಅಥವಾ ವಿರೋಧ ಮಂಡಿಸಲು ಅವಕಾಶವಿದೆ. ಅವರು ಶಾಲೆಗೆ ಸಂಬಂಧಿಸಿದಂತೆ ಸಲಹೆಗಳನ್ನು ಕೂಡ ನೀಡಬಹುದು. ಅಧಿಕಾರಾವಧಿಯ ಒಂದು ವರ್ಷದಲ್ಲಿ ಶಾಲೆಯ ಎಲ್ಲ ಚಟುವಟಿಕೆಯಲ್ಲಿ ವಿದ್ಯಾರ್ಥಿ ಸಮೂಹವನ್ನು ಅವರು ಪ್ರತಿನಿಧಿಸುತ್ತಾರೆ. ಮುಂದಿನ ಒಂದು ವಾರದಲ್ಲಿ ಪ್ರತಿ ತರಗತಿಯ ನಾಯಕರನ್ನು ಆರಿಸಿ ಶಾಲಾ ಸಂಸತ್ತು ರೂಪಿಸಲಾಗುತ್ತದೆ. ಮುಂದಿನ ಶನಿವಾರ ಅವರೆಲ್ಲರೂ ಅಧಿಕಾರದ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ತಿಳಿಸಿದರು.

ಚುನಾವಣೆ ಭ್ರಷ್ಟಾಚಾರ ರಹಿತವಾಗಿತ್ತು. ಹಣವಲ್ಲದಿದ್ದರೂ ಮಕ್ಕಳಿಗೆ ಚಾಕಲೇಟ್, ಜ್ಯೂಸ್‌, ಐಸ್‌ಕ್ರೀಮ್‌ ತರಹದ ಹಂಚಿಕೆ ಇರಲಿಲ್ಲ. ಅಷ್ಟಕ್ಕೂ ವಿದ್ಯಾರ್ಥಿಗಳ ಚಟುವಟಿಕೆಗಳನ್ನು ಪರೀಕ್ಷೆಯಲ್ಲಿಡುವ ವಿಜಿಲೆನ್ಸ್‌ ಕೂಡ ಈ ಚುನಾವಣೆಯಲ್ಲಿತ್ತು!

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.