ನೆರೆ ಸಮೀಕ್ಷೆಯಲ್ಲಿ ವಿಳಂಬವಾದ್ರೆ ಸಹಿಸಲ್ಲ

ಮಳೆಹಾನಿಗೆ ತಕ್ಷಣ ಪರಿಹಾರ ಒದಗಿಸಿ: ಅಧಿಕಾರಿಗಳಿಗೆ ಶಾಸಕ ಹಾಲಪ್ಪ ಸೂಚನೆ

Team Udayavani, Aug 11, 2019, 2:59 PM IST

11-Agust-30

ಸಾಗರ: ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ನೆರೆಹಾನಿ ಸಂಬಂಧ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಶಾಸಕ ಹಾಲಪ್ಪ ಅಧಿಕಾರಿಗಳ ಜೊತೆ ಚರ್ಚಿಸಿದರು.

ಸಾಗರ: ಮಳೆಹಾನಿಯಾಗಿರುವ ಕಡೆ ತಕ್ಷಣ ಇದಕ್ಕೆ ನಿಯೋಜಿಸಿರುವ ತಂಡಗಳು ಭೇಟಿ ನೀಡಿ ತಕ್ಷಣ ಪರಿಹಾರ ಕೆಲಸ ಕೈಗೊಳ್ಳುವಂತೆ ಆಗಬೇಕು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಸೂಚನೆ ನೀಡಿದರು.

ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಶನಿವಾರ ನೆರೆಹಾನಿ ಸಂಬಂಧ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ ಅವರು, ಮಳೆಹಾನಿಗೆ ಸಂಬಂಧಪಟ್ಟಂತೆ ತಂಡಗಳನ್ನು ರಚನೆ ಮಾಡಲಾಗಿದೆ. ಯಾವ ಇಲಾಖೆಯ ಮುಖ್ಯಸ್ಥರ ಬಳಿ ವಾಹನ ಇದೆಯೋ ಅಂತಹವರನ್ನು ತಂಡದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ನೆರೆಹಾನಿ ವೀಕ್ಷಣೆ ಮತ್ತು ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ವಿಳಂಬ ಧೋರಣೆ ಸಹಿಸುವುದಿಲ್ಲ. ಜನರಿಗೆ ಈ ಸಂದರ್ಭದಲ್ಲಿ ನಮ್ಮ ನೆರವಿನ ಅಗತ್ಯವಿದೆ. ಇದನ್ನು ಅತ್ಯಂತ ಕಳಕಳಿ ಮತ್ತು ಶ್ರದ್ಧೆಯಿಂದ ಮಾಡಬೇಕು. ತಾಲೂಕಿನಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಜನರಿಗೆ ತಕ್ಷಣ ಪರಿಹಾರ ಕಲ್ಪಿಸುವುದು ಮತ್ತು ಶಾಶ್ವತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸುವ ಅಗತ್ಯವಿದೆ ಎಂದು ತಿಳಿಸಿದರು.

ಎಲ್ಲ ಅಧಿಕಾರಿಗಳು ಮತ್ತು ನೌಕರ ವರ್ಗವನ್ನು ಒಳಗೊಂಡಂತೆ ಸಮೀಕ್ಷಾ ಮತ್ತು ಪರಿಹಾರ ಕಾರ್ಯ ಕೈಗೊಳ್ಳುವ ತಂಡವನ್ನು ರಚನೆ ಮಾಡಲಾಗಿದೆ. ನೀವು ನಿಮಗೆ ನಿಗದಿಪಡಿಸಿದ ಭಾಗಗಳಲ್ಲಿ ನಿಮ್ಮ ಕೆಲಸ ಮಾಡಿ. ಅದನ್ನು ಬಿಟ್ಟು ಜನಪ್ರತಿನಿಧಿಗಳು ಒಬ್ಬೊಬ್ಬರು ಒಂದೊಂದು ಕಡೆ ಕರೆಯುತ್ತಾರೆ ಎಂದು ಅವರ ಹಿಂದೆ ತಿರುಗಬೇಡಿ. ನಾನು ಕರೆದರೂ ನನ್ನ ಹಿಂದೆ ಬರಬೇಡಿ. ನನಗೆ ಅಗತ್ಯವಿದ್ದರೆ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್‌ ಮೂಲಕ ತಿಳಿಸುತ್ತೇನೆ. ಕೆಲವು ಜನಪ್ರತಿನಿಧಿಗಳು ತಮ್ಮ ಜೊತೆ ಬನ್ನಿ ಎಂದು ನೋಟಿಸ್‌ ನೀಡುತ್ತಿದ್ದಾರೆ. ಇಂತಹ ಹೊತ್ತಿನಲ್ಲಿ ಅಧಿಕಾರಿಗಳು ಮತ್ತು ನೌಕರರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡಬೇಕು ಎಂದು ಹೇಳಿದರು.

ಸಹಾಯಕ ಆಯುಕ್ತ ದರ್ಶನ್‌ ಪಿ.ವಿ. ಮಾತನಾಡಿ, ಇದು ತುರ್ತು ಸಂದರ್ಭ. ನಮ್ಮ ಹೊಣೆಗಾರಿಕೆ ತುಂಬಾ ಇದೆ. ನೆರೆಯನ್ನು ಸಮರ್ಥವಾಗಿ ಎದುರಿಸಲು ರಚನೆ ಮಾಡಿರುವ ತಂಡ ಜವಾಬ್ದಾರಿಯಿಂದ ನಿಮಗೆ ನಿಗದಿಪಡಿಸಿದ ಸ್ಥಳದಲ್ಲಿಯೇ ಕೆಲಸ ಮಾಡಬೇಕು. ಸಬೂಬು ಹೇಳುವುದು, ಇನ್ಯಾರೋ ಕರೆದರು ಎಂದು ಮತ್ತೂಂದು ಕಡೆ ಹೋಗುವುದು ಮಾಡಬೇಡಿ ಎಂದರು. ಸಭೆಯಲ್ಲಿ ತಹಶೀಲ್ದಾರ್‌ ಚಂದ್ರಶೇಖರ್‌, ತಾಪಂ ಕಾರ್ಯ ನಿರ್ವಾಹಣಾಧಿಕಾರಿ ಮಂಜುನಾಥ ಸ್ವಾಮಿ, ಪೌರಾಯುಕ್ತ ಎಸ್‌. ರಾಜು, ಕ್ಷೇತ್ರ ಶಿಕ್ಷಣಾದಿಕಾರಿ ಬಿಂಬ ಕೆ.ಆರ್‌. ಇನ್ನಿತರರು ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.