ಆರೋಗ್ಯ ಶಿಬಿರಗಳ ಪ್ರಯೋಜನ ಅಪಾರ
ಆರೋಗ್ಯ ಇಲಾಖೆಯ ಜಾಗೃತಿ ಕಾರ್ಯ ಸ್ತುತ್ಯರ್ಹ: ಡಾ| ಮುನಿವೆಂಕಟರಾಜು ಅಭಿಮತ
Team Udayavani, Jul 22, 2019, 12:04 PM IST
ಸಾಗರ: ಎಡಜಿಗಳೇಮನೆಯ ಇಕ್ಕೇರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ನೇತ್ರ ತಪಾಸಣೆ ಶಿಬಿರವನ್ನು ಉಡುಪಿಯ ಪ್ರಸಾದ್ ನೇತ್ರಾಲಯದ ಡಾ| ಶರತ್ ಉದ್ಘಾಟಿಸಿದರು.
ಸಾಗರ: ನಗರಗಳಲ್ಲಿ ಆರೋಗ್ಯದ ಬಗ್ಗೆ ಜನರ ಮುಂಜಾಗ್ರತೆ ಹೆಚ್ಚುತ್ತಿದೆ. ಹೀಗಾಗಿ ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಬಹುಸಂಖ್ಯಾತರು ಮಾಡಿಸುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದಲ್ಲಿ ಈಗಲೂ ಆರೋಗ್ಯದ ಬಗ್ಗೆ ಎಚ್ಚರಿಕೆಗಳನ್ನು ತೆಗೆದುಕೊಳ್ಳುವಲ್ಲಿ ಆಲಸ್ಯ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಿಯಮಿತವಾಗಿ ಹಳ್ಳಿ ಪ್ರದೇಶದಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ|ಮುನಿವೆಂಕಟ ರಾಜು ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಎಡಜಿಗಳೇಮನೆಯ ಇಕ್ಕೇರಿ ಪ್ರೌಢಶಾಲೆಯಲ್ಲಿ ಭಾನುವಾರ ಉಡುಪಿಯ ಪ್ರಸಾದ್ ನೇತ್ರಾಲಯ, ನೇತ್ರಜ್ಯೋತಿ ಚಾರಿಟೆಬಲ್ ಟ್ರಸ್ಟ್, ಡಾ| ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೆಬಲ್ ಟ್ರಸ್ಟ್, ಸೆಂಚುರಿ ಗ್ರೂಪ್ಸ್, ಎಡಜಿಗಳೇಮನೆ ಗ್ರಾಪಂ ಮುಂತಾದ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಶಸ್ತ್ರ ಚಿಕಿತ್ಸೆ, ಮಸೂರ ಅಳವಡಿಕೆ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ಥಳೀಯ ಆಡಳಿತಗಳು ಆಸಕ್ತಿ ವಹಿಸಿದರೆ ಈ ರೀತಿಯ ಶಿಬಿರಗಳನ್ನು ಸುಲಭವಾಗಿ ಆಯೋಜಿಸಬಹುದು. ಎಡಜಿಗಳೇಮನೆಯ ಗ್ರಾಪಂ ಈ ನಿಟ್ಟಿನಲ್ಲಿ ಸ್ತುತ್ಯರ್ಹ ಕೆಲಸ ಮಾಡಿದೆ. ಆರೋಗ್ಯ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಬೆಂಬಲಿಸಲಿದೆ ಎಂದರು.
ಉಡುಪಿಯ ಪ್ರಸಾದ್ ನೇತ್ರಾಲಯದ ಡಾ|ಶರತ್ ಶಿಬಿರವನ್ನು ವಿಧ್ಯುಕ್ತವಾಗಿ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದಿಂದಲೇ ಬಂದ ನಮಗೆ ಈ ರೀತಿಯ ಶಿಬಿರಗಳು ಋಣಸಂದಾಯದ ಪ್ರಕ್ರಿಯೆಯಂತೆ. ಬಡತನದಲ್ಲಿದ್ದಾರೆ ಎಂಬ ಕಾರಣಕ್ಕಾಗಿ ನಾಗರಿಕರು ಆರೋಗ್ಯ ಚಿಕಿತ್ಸೆಯಿಂದ ವಿಮುಖರಾಗುವ ಪರಿಸ್ಥಿತಿ ನಿರ್ಮಾಣವಾಗಬಾರದು. ಈ ನಿಟ್ಟಿನಲ್ಲಿ ನಮ್ಮ ನೇತ್ರ ಜ್ಯೋತಿ ಟ್ರಸ್ಟ್ ಉಚಿತ ಶಿಬಿರಗಳ ಹೊರತಾಗಿಯೂ ಅರ್ಹರಿಗೆ ಖರ್ಚುವೆಚ್ಚವಿಲ್ಲದ ಚಿಕಿತ್ಸೆಯನ್ನು ವರ್ಷದ 365 ದಿನವೂ ಒದಗಿಸುವ ಮನಸ್ಸು ಮಾಡಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಆತಿಥೇಯ ಗ್ರಾಪಂನ ಅಧ್ಯಕ್ಷ ಎಂ.ಡಿ. ರಾಮಚಂದ್ರ ಮಾತನಾಡಿ, ಕಣ್ಣಿನ ದೃಷ್ಟಿದೋಷ ದೇಹದ ಇತರ ಕಾಯಿಲೆಗಳ ಪರಿಣಾಮದಿಂದಲೇ ಸಂಭವಿಸುತ್ತವೆ ಎಂದು ವೈದ್ಯ ಶಾಸ್ತ್ರ ಹೇಳುತ್ತದೆ. ಹಳ್ಳಿಯ ಜನ ಥೈರಾಯ್ಡ ಗ್ರಂಥಿ ಸಮಸ್ಯೆ, ಬಿಪಿ, ಸಕ್ಕರೆ ಕಾಯಿಲೆಗಳತ್ತ ಗಮನ ಹರಿಸುವುದಿಲ್ಲ. ರೋಗ ಉಲ್ಭಣವಾದ ಪರಿಸ್ಥಿತಿಯಲ್ಲಿ ಅವರು ವೈದ್ಯರನ್ನು ಕಾಣಲು ಬರುವ ಪರಿಸ್ಥಿತಿಯಿದೆ. ಇದರಿಂದ ಆರೋಗ್ಯ, ಹಣಕಾಸು ಎಲ್ಲದಕ್ಕೂ ಒತ್ತಡ ನಿರ್ಮಾಣವಾಗುತ್ತದೆ. ಗ್ರಾಪಂ ಜನರ ಆರೋಗ್ಯಕ್ಕಾಗಿ ವರ್ಷದಲ್ಲಿ ಎರಡು ಬಾರಿಯಾದರೂ ಆರೋಗ್ಯ ಶಿಬಿರ ಏರ್ಪಡಿಸುವ ಕುರಿತು ಚಿಂತನೆ ನಡೆಸಿದೆ ಎಂದರು.
ಪಂಚಾಯತ್ ಉಪಾಧ್ಯಕ್ಷೆ ಸುಭದ್ರಾ ಗಣಪತಿ, ಸದಸ್ಯರಾದ ಸಿ.ವಿ. ಗುರುಮೂರ್ತಿ, ಪದ್ಮಾವತಿ, ರಜನೀಶ್ ಹೆಗಡೆ ಟಿ.ಎನ್., ಪ್ರಕಾಶ್ ಎಸ್.ಜಿ., ಎಂ.ಡಿ.ಮಂಜಗೌಡ್ರು, ಪ್ರೌಢಶಾಲಾ ಮುಖ್ಯ ಶಿಕ್ಷಕ ರಜನೀಶ್ ಸಿ., ಡಾ| ಸುಧಾರಾಣಿ, ಡಾ| ನಂದಾ ಇನ್ನಿತರರು ಇದ್ದರು. ಅಮೃತಾ ಪ್ರಾರ್ಥಿಸಿದರು. ಸುಧಾಕರ ಸ್ವಾಗತಿಸಿದರು. ಪಂಚಾಯತ್ ಪಿಡಿಒ ಬಿ.ಎಸ್. ಧರ್ಮಪ್ಪ ವಂದಿಸಿದರು. ಆರೋಗ್ಯ ಇಲಾಖೆಯ ಸುರೇಶ್ ಬೆಳ್ಳಣ್ಣೆ ಕಾರ್ಯಕ್ರಮ ನಿರ್ವಹಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿವಮೊಗ್ಗ, ಜಿಲ್ಲಾ ಎನ್ಸಿಡಿ ಘಟಕಗಳ ನೇತೃತ್ವದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆ ನಡೆಸಲಾಯಿತು. ಗ್ರಾಪಂ ವ್ಯಾಪ್ತಿಯ 250ಕ್ಕೂ ಹೆಚ್ಚಿನ ಗ್ರಾಮಸ್ಥರು ಕಣ್ಣಿನ ತಪಾಸಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ