ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದನೆ

ಪತ್ರಿಕಾ ವಿತರಕರು ಬಿಲ್ ಕೇಳಿದರೆ ಸತಾಯಿಸದಿರಿ: ಶಾಸಕ ಹಾಲಪ್ಪ

Team Udayavani, Sep 8, 2019, 6:13 PM IST

8-Sepctember-27

ಸಾಗರ: ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಲಾಯಿತು.

ಸಾಗರ: ಪತ್ರಿಕೆ ವಿತರಕರು ಸಂಕಷ್ಟದ ನಡುವೆಯೇ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾರೆ. ಇವರ ಎಂತಹದ್ದೇ ಸಮಸ್ಯೆ ಇದ್ದರೂ ನಾನು ಸ್ಪಂದಿಸುತ್ತೇನೆ ಎಂದು ಶಾಸಕ ಎಚ್. ಹಾಲಪ್ಪ ಭರವಸೆ ನೀಡಿದರು.

ನಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ನೌಕರರ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಪತ್ರಕರ್ತರು ದಿನದ 24 ಗಂಟೆಯೂ ಕೆಲಸ ಮಾಡುತ್ತಾರೆ. ತುರ್ತು ಸಂದರ್ಭದಲ್ಲಿ ಕೆಲವೊಮ್ಮೆ ಜನರು ಪತ್ರಕರ್ತರ ಸಹಕಾರವನ್ನು ಅಪೇಕ್ಷೆ ಪಡುತ್ತಾರೆ. ತಾವು ಸಂಗ್ರಹಿಸಿದ ಸುದ್ದಿ ಅಚ್ಚಾಗಿ ಬಂದಾಗ ಅದು ಪತ್ರಿಕೆಗಳ ಮೂಲಕ ಓದುಗರಿಗೆ ತಲುಪಿದಾಗ ಪತ್ರಕರ್ತರ ಕೆಲಸ ಸಾರ್ಥಕವಾಗುತ್ತದೆ. ಅಂತಹ ಕೆಲಸವನ್ನು ಪತ್ರಿಕಾ ವಿತರಕರು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಅಂತಹವರನ್ನು ಗುರುತಿಸಿ, ಗೌರವಿಸುವುದು ಶ್ರೇಷ್ಠ ಕೆಲಸ ಎಂದು ತಿಳಿಸಿದರು.

ತಿಂಗಳ ಪೂರ್ತಿ ನಿಮ್ಮ ಮನೆಗೆ ಪತ್ರಿಕೆ ಹಾಕಿ ತಿಂಗಳ ಕೊನೆಯಲ್ಲಿ ಬಿಲ್ ಕೇಳಲು ಬರುವ ಹುಡುಗರನ್ನು ನಾಳೆ, ನಾಡಿದ್ದು ಬಾ ಎಂದು ಸತಾಯಿಸಬೇಡಿ. ಪತ್ರಿಕೆ ಬಿಲ್ ಕೇಳುವ ಹುಡುಗ ಬಂದರೆ ವಾಪಸ್‌ ಕಳಿಸಬೇಡಿ. ತಕ್ಷಣ ಪಾವತಿ ಮಾಡಿ ಅವರನ್ನು ಅಲೆಸಬೇಡಿ ಎಂದು ನಾನು ಮನೆಯಲ್ಲಿ ಹೇಳಿದ್ದೇನೆ ಎಂದರು.

ಒಕ್ಕೂಟದ ಜಿಲ್ಲಾಧ್ಯಕ್ಷ ಮ.ಸ. ನಂಜುಂಡಸ್ವಾಮಿ ಮಾತನಾಡಿ, ನಾನು ಒಂದು ಕಾಲದಲ್ಲಿ ಬೇರೆಬೇರೆ ಪತ್ರಿಕೆಯನ್ನು ಮನೆಮನೆಗೆ ವಿತರಿಸಿದ್ದೇನೆ. ಪತ್ರಿಕೆ ವಿತರಕರ ಕಷ್ಟ ಏನೆಂದು ನನಗೆ ಗೊತ್ತಿದೆ. ಸರ್ಕಾರಿ ನೌಕರರಿಗೆ ತಿಂಗಳಿಗೆ ಸಂಬಳ, ಬೇರೆಬೇರೆ ರೀತಿಯ ಸವಲತ್ತುಗಳು ಇರುತ್ತದೆ. ಆದರೆ ಪತ್ರಿಕೆಯನ್ನು ಮನೆಮನೆಗೆ ಹಂಚುವ ಹುಡುಗರಿಗೆ ಯಾವುದೇ ಪ್ರತ್ಯೇಕ ಆದಾಯ ಇರುವುದಿಲ್ಲ. ಅಂತಹವರ ಕಷ್ಟವನ್ನು ಸಮಾಜ ಗುರುತಿಸಬೇಕು. ಈ ನಿಟ್ಟಿನಲ್ಲಿ ಒಕ್ಕೂಟ ಇಂತಹ ಸಾರ್ಥಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬಂದಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕರಾದ ಮಹೇಶ್‌ ಹೆಗಡೆ, ಗಣಪತಿ ಶಿರಳಗಿ, ರಮೇಶ್‌ ಎನ್‌., ಎಚ್.ಎಲ್. ರಾಘವೇಂದ್ರ, ಉದಯವಾಣಿ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು. ಒಕ್ಕೂಟದ ತಾಲೂಕು ಅಧ್ಯಕ್ಷ ವೈ. ಮೋಹನ್‌ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ. ನಾಗೇಶ್‌, ಸಿವಿಲ್ ಸರ್ಜನ್‌ ಡಾ| ಪ್ರಕಾಶ್‌ ಬೋಸ್ಲೆ, ಡಾ| ಸುರೇಶ್‌ ರಾವ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಮುನಿವೆಂಕಟ ರಾಜು, ನಗರಸಭೆ ಸದಸ್ಯ ಆರ್‌. ಶ್ರೀನಿವಾಸ್‌ ಇದ್ದರು. ರಮ್ಯ ಹೆಗಡೆ ಪ್ರಾರ್ಥಿಸಿದರು. ಜುಬೇದ ಎಂ. ಅಲಿ ಸ್ವಾಗತಿಸಿದರು. ದೀಪಕ್‌ ಸಾಗರ್‌ ಅಭಿನಂದನಾ ಭಾಷಣ ಮಾಡಿದರು. ಕೆ. ಗುರುಶಾಂತ ವಂದಿಸಿದರು.

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.