ಅಡಕೆ ಬೆಳೆ ನಾಶ; ಪರಿಹಾರಕ್ಕೆ ಒತ್ತಾಯ

ಕೊಳೆರೋಗದಿಂದ ಬೆಳೆಗಾರರ ಸ್ಥಿತಿ ಅಧೋಗತಿ •ಉಪ ವಿಭಾಗಾಧಿಕಾರಿಗಳಿಂದ ಕ್ರಮದ ಭರವಸೆ

Team Udayavani, Aug 23, 2019, 12:50 PM IST

23-April-21

ಸಾಗರ: ಕೊಳೆರೋಗಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ವತಿಯಿಂದ ಎಸಿ ಮತ್ತು ಶಾಸಕರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಾಗರ: ಮಲೆನಾಡು ಭಾಗದಲ್ಲಿ ಅತಿವೃಷ್ಟಿಯಿಂದ ಅಡಕೆ ಬೆಳೆಗೆ ತೀವ್ರತರದ ಕೊಳೆರೋಗ ಬಾಧಿಸಿ ಶೇ. 50 ರಿಂದ 80ರಷ್ಟು ಬೆಳೆ ನಷ್ಟವಾಗಿದೆ. ಸರ್ಕಾರ ತಕ್ಷಣ ಕೊಳೆರೋಗಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಗುರುವಾರ ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ವತಿಯಿಂದ ಉಪ ವಿಭಾಗಾಧಿಕಾರಿಗಳು ಮತ್ತು ಶಾಸಕರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಿ.ಆರ್‌. ಜಯಂತ್‌, ಈ ಸಾಲಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಡಕೆ ಬೆಳೆಗಾರರು ಹೈರಾಣಾಗಿ ಹೋಗಿದ್ದಾರೆ. ಕೊಳೆರೋಗ ನಿಯಂತ್ರಣಕ್ಕೆ ಬಾರದೆ ಸಾಗರ, ಸೊರಬ, ಹೊಸನಗರ ತಾಲೂಕಿನ ಅಡಕೆ ತೋಟಗಳಲ್ಲಿ ಸಂಪೂರ್ಣ ಅಡಕೆ ಉದುರಿ, ಬೆಳೆಗಾರರ ಬದುಕೇ ನಾಶವಾಗುವ ಸ್ಥಿತಿ ನಿರ್ಮಾಣವಾಗಿದ್ದು, ಶೇ. 50ರಿಂದ 80ರಷ್ಟು ಅಡಕೆ ಉದುರಿ ಹೋಗಿದೆ ಎಂದರು.

ಮಲೆನಾಡು ಭಾಗದಲ್ಲಿ ಶೇ. 90ರಷ್ಟು ಸಣ್ಣ ಮತ್ತು ಅತಿ ಸಣ್ಣ ಸಾಂಪ್ರದಾಯಿಕ ಅಡಕೆ ಬೆಳೆಗಾರರು ಇದ್ದಾರೆ. ಅಡಕೆ ಉತ್ಪನ್ನದಿಂದಲೇ ಬದುಕು ಸಾಗಿಸುವ ಬೆಳೆಗಾರ ಕುಟುಂಬ ಈಗ ಸಂಕಷ್ಟಕ್ಕೆ ಸಿಲುಕಿದೆ. ಒಂದು ಎಕರೆ ಅಡಕೆ ತೋಟದಲ್ಲಿ ಪ್ರಸ್ತುತ ಅಡಕೆ ದರದಲ್ಲಿ ರೂಪಾಯಿ 1.40 ಲಕ್ಷದಿಂದ 2 ಲಕ್ಷ ರೂ.ಗಳವರೆಗೆ ಕೊಳೆಬಾಧೆಯಿಂದ ಬೆಳೆಹಾನಿಯಾಗಿದೆ. ಸರ್ಕಾರ ಎನ್‌ಡಿಆರ್‌ಎಫ್‌ ಮಾನದಂಡ ಆಧರಿಸಿ 2012-13ರಲ್ಲಿ ಅಡಕೆೆ ಬೆಳೆಗೆ ಪರಿಹಾರ ನೀಡಿದೆ. ಹಾಲಿ ರಾಜ್ಯ ಸರ್ಕಾರ ಎನ್‌ಡಿಆರ್‌ಎಫ್‌ ಮಾನದಂಡದ ಜೊತೆಗೆ ಹೆಚ್ಚುವರಿಯಾಗಿ ಒಂದು ಎಕರೆಗೆ ಗರಿಷ್ಟ ಪ್ರಮಾಣದ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಮಲೆನಾಡಿನ ಅನೇಕ ಗ್ರಾಮಗಳಲ್ಲಿ ಅತಿವೃಷ್ಟಿಯಿಂದ ಬೆಟ್ಟಗುಡ್ಡಗಳು ಕುಸಿದು ಅಡಕೆ ಮತ್ತು ಭತ್ತದ ಗದ್ದೆಗಳ ಮೇಲೆ ಭಾರೀ ಪ್ರಮಾಣದ ಮಣ್ಣು, ಮರಳು, ಹೂಳು ತುಂಬಿದೆ. ಕೃಷಿ ಭೂಮಿಯ ಮೇಲೆ ಹಳ್ಳಗಳು ಉಕ್ಕಿ ಹರಿದು ಕೃಷಿ ಭೂಮಿಯ ಮೇಲೆ ಹರಿವಿನ ಪಾತ್ರ ಬದಲಾಗಿ ಹೋಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ನಿಯಮಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಯಮಗಳಡಿ ಮೂರು ಇಂಚಿಗಿಂತಲೂ ಜಾಸ್ತಿ ಮರಳು, ಹೂಳು ತೆಗೆಯಲು ಒಂದು ಹೆಕ್ಟೇರ್‌ಗೆ 12,200 ರೂ. ಮತ್ತು ಭೂಕುಸಿತ ನದಿ ಹರಿವು ದಾರಿ ಬದಲಾವಣೆಯಾದಲ್ಲಿ ಪುನರ್‌ ನಿರ್ಮಾಣಕ್ಕೆ ಹೆಕ್ಟೇರ್‌ಗೆ 37,500 ರೂ. ಕೊಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮವಾರು ಪ್ರತಿಯೊಬ್ಬ ಹಿಡುವಳಿದಾರರು ಹೊಂದಿದ ನಷ್ಟವನ್ನು ದಾಖಲಿಸಿ ನಷ್ಟದ ವಿವರ ನೀಡಬೇಕು ಎಂದು ಆಗ್ರಹಿಸಿದರು.

ಹಿಂದಿನ ಸಾಲಿನಲ್ಲಿ ಅಡಕೆ ಬೆಳೆ ನಷ್ಟಕ್ಕೆ ತಾಲೂಕಿಗೆ ಕೋಟ್ಯಂತರ ರೂ. ಪರಿಹಾರ ಬಿಡುಗಡೆಯಾಗಿದೆ. ಆದರೆ ಪರಿಹಾರ ಹಣ ವಿತರಣೆಯಲ್ಲಿ ತಾರತಮ್ಯವಾಗಿದೆ. ಪರಿಹಾರ ವಿತರಣೆ ಪಾರದರ್ಶಕವಾಗಿಲ್ಲ ಎನ್ನುವ ದೂರುಗಳಿವೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಹಿಂದಿನ ಸಾಲಿನಲ್ಲಿ ಬಿಡುಗಡೆಯಾಗಿರುವ ಬೆಳೆ ಪರಿಹಾರವನ್ನು ಎಲ್ಲ ಬೆಳೆಗಾರರಿಗೆ ಮಾನದಂಡದ ಅನುಸಾರ ಬಿಡುಗಡೆ ಮಾಡಬೇಕು. ಈ ಸಾಲಿನಲ್ಲಿ ಗ್ರಾಮ ಲೆಕ್ಕಿಗರು ಬೆಳೆಗಾರರಿಂದ ಅರ್ಜಿಯನ್ನು ಪಡೆದು ಕಂಪ್ಯೂಟರ್‌ಗೆ ಅಪ್‌ಲೋಡ್‌ ಮಾಡಿ ನೊಂದ ಬೆಳೆಗಾರರಿಗೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ: ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಎಚ್.ಹಾಲಪ್ಪ, ಈಗಾಗಲೇ ಸಾಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಅಡಕೆ ತೋಟಗಳ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಜೊತೆಗೆ ಅಡಕೆ ಕೊಳೆರೋಗ ಸಂಬಂಧ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ. ಜಿಲ್ಲಾಕಾರಿಗಳ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಬೆಳೆಗಾರರಿಗೆ ಶೀಘ್ರ ಕೊಳೆರೋಗ ಸಂಬಂಧ ಪರಿಹಾರ ಕಲ್ಪಿಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದರು.

ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ: ಸಾಗರ ಉಪ ವಿಭಾಗದ ಸಹಾಯಕ ಆಯುಕ್ತ ದರ್ಶನ್‌ ಪಿ.ವಿ. ಮಾತನಾಡಿ, ಕೊಳೆರೋಗದಿಂದ ಅಡಕೆ ಹಾನಿಯಾಗಿರುವ ಕುರಿತು ನನಗೆ ಬೆಳೆಗಾರರಿಂದ ದೂರು ಬಂದಿದೆ. ಮೂರು ತಾಲೂಕುಗಳಲ್ಲಿ ಕೊಳೆರೋಗದಿಂದ ಹಾನಿಯಾಗಿರುವ ಅಡಕೆ ತೋಟಗಳಿಗೆ ಮತ್ತು ಧರೆ ಕುಸಿತದಿಂದ ತೋಟಗಳು ನಾಶವಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಸರ್ಕಾರದ ಗಮನ ಸೆಳೆದು ಬೆಳೆಗಾರರಿಗೆ ಸೂಕ್ತ ಪರಿಹಾರ ಕಲ್ಪಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಆಪ್ಸ್‌ಕೋಸ್‌ ಅಧ್ಯಕ್ಷ ಬಿ.ಎ. ಇಂದೂಧರ, ತೋಟಗಾರ್ ಅಧ್ಯಕ್ಷ ಕೆ.ಸಿ.ದೇವಪ್ಪ, ಎಪಿಎಂಸಿ ಅಧ್ಯಕ್ಷ ರವಿಕುಮಾರ್‌ ಎಚ್.ಎಂ., ಪ್ರಮುಖರಾದ ಎಚ್.ಎಸ್‌. ಮಂಜಪ್ಪ, ಕಟ್ಟಿನಕೆರೆ ಸೀತಾರಾಮಯ್ಯ, ವ.ಶಂ. ರಾಮಚಂದ್ರ ಭಟ್, ಸೂರ್ಯನಾರಾಯಣ ಖಂಡಿಕಾ, ತೀ.ನ. ಶ್ರೀನಿವಾಸ್‌, ರಘುಪತಿ ಭಟ್, ಸುಬ್ರಾವ್‌, ಖಂಡಿಕಾ ಪ್ರಭಾಕರ್‌, ಜಗದೀಶ ಗೌಡ, ಗುರುಪಾದ ಕೆರೆಕೊಪ್ಪ, ಸುಬ್ರಾವ್‌, ಹರೀಶ್‌ ಗಂಟೆ, ಮಹಾಬಲೇಶ್ವರ ಅರೆಹದ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.