ರಾಜಧಾನಿಗೆ ಲಿಂಗನಮಕ್ಕಿ ನೀರು ಪ್ರಸ್ತಾಪ‌ ಕೈ ಬಿಡಿ

•ಮಲೆನಾಡಿಗರ ಹಿತರಕ್ಷಣೆಗೆ ಒತ್ತಾಯ•ಬೆಂಗಳೂರಿಗೆ ನೀರೊದಗಿಸಲು ಪರ್ಯಾಯ ಮಾರ್ಗ ಯೋಚಿಸಿ

Team Udayavani, Jun 26, 2019, 12:27 PM IST

26-June-19

ಸಾಗರ: ಲಿಂಗನಮಕ್ಕಿ ಆಣೆಕಟ್ಟಿನಿಂದ ಬೆಂಗಳೂರಿಗೆ ನೀರು ಒಯ್ಯುವ ಪ್ರಸ್ತಾವನೆ ಕೈಬಿಡುವಂತೆ ಒತ್ತಾಯಿಸಿ ಪತ್ರಕರ್ತರ ಸಂಘ ಎಸಿ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಸಾಗರ: ಲಿಂಗನಮಕ್ಕಿ ಅಣೆಕಟ್ಟಿನಿಂದ ಬೆಂಗಳೂರಿಗೆ ನೀರು ಒಯ್ಯುವ ಪ್ರಸ್ತಾವನೆಯನ್ನು ಕೈಬಿಡುವಂತೆ ಒತ್ತಾಯಿಸಿ ಮಂಗಳವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಪ ವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಜಿ.ನಾಗೇಶ್‌ ಮಾತನಾಡಿ, ಕಳೆದ ನಾಲ್ಕೈದು ವರ್ಷಗಳಿಂದ ಲಿಂಗನಮಕ್ಕಿ ಆಣೆಕಟ್ಟಿಗೆ ಹರಿದು ಬರುವ ಪ್ರದೇಶದಲ್ಲಿ ಮಳೆ ಪ್ರಮಾಣ ತೀರಾ ಕುಸಿದಿದೆ. ಶೇ. 40ರಷ್ಟು ಹೂಳು ತುಂಬಿದ್ದರಿಂದ ಡ್ಯಾಂನ ನೀರಿನ ಸಾಮರ್ಥ್ಯ ಸಹ ಕುಸಿದಿದೆ. ಇರುವ ನೀರು ವಿದ್ಯುತ್‌ ಉತ್ಪಾದನೆಗೆ ಸಾಕಾಗುವುದಿಲ್ಲವೇನೋ ಎನ್ನುವ ದುಃಸ್ಥಿತಿ ಇರುವಾಗ ರಾಜ್ಯ ಸರ್ಕಾರ ಇಲ್ಲದ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಅವೈಜ್ಞಾನಿಕ ಯೋಜನೆಗೆ ಡಿಪಿಆರ್‌ ತಯಾರಿಸಲು ಹೇಳಿರುವುದು ಹಾಸ್ಯಾಸ್ಪದ ಸಂಗತಿ. ಸರ್ಕಾರ ಬೆಂಗಳೂರಿಗೆ ನೀರು ಒದಗಿಸಲು ಪರ್ಯಾಯ ಮಾರ್ಗ ಯೋಚಿಸಬೇಕು. ಮಲೆನಾಡಿಗರ ಜೀವನಾಡಿಯಾಗಿರುವ ಶರಾವತಿ ನದಿ ನೀರು ಒಯ್ಯುವ ಆಲೋಚನೆಯಿಂದ ಹೊರಗೆ ಬರಬೇಕು ಎಂದು ಹೇಳಿದರು.

ಪತ್ರಕರ್ತ ಸಂತೋಷಕುಮಾರ್‌ ಕಾರ್ಗಲ್ ಮಾತನಾಡಿ, ಈಗಾಗಲೇ ಶರಾವತಿ ಕಣಿವೆ ಪ್ರದೇಶವಾದ ಹೆನ್ನಿ, ವಡನ್‌ಬೈಲ್ ಇನ್ನಿತರ ಕಡೆಗಳಲ್ಲಿ ಬಾವಿ ಬತ್ತಿ ಹೋಗಿದೆ. ಮಳೆ ಪ್ರಮಾಣ ತೀರ ಕುಸಿದಿದೆ. ಲಿಂಗನಮಕ್ಕಿ ಅಣೆಕಟ್ಟಿನಲ್ಲಿ ಇರುವ ನೀರನ್ನು ಶರಾವತಿ ಕಣಿವೆ ಪ್ರದೇಶದ ಕೊರತೆ ಇರುವ ಭಾಗಗಳಿಗೆ ಹರಿಸುವ ಯೋಜನೆ ಸರ್ಕಾರ ರೂಪಿಸಬೇಕು. ಲಿಂಗನಮಕ್ಕಿ ಡ್ಯಾಂನಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗಲು ಕಣಿವೆ ಪ್ರದೇಶದ ಜನರ ತೀವ್ರ ವಿರೋಧವಿದೆ ಎಂದರು.

ಪತ್ರಕರ್ತ ಎಸ್‌.ವಿ. ಹಿತಕರ ಜೈನ್‌ ಮಾತನಾಡಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್‌ ಮಧ್ಯಂತರ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ತುಮಕೂರು ಕ್ಷೇತ್ರವ್ಯಾಪ್ತಿಯಲ್ಲಿ ಜನರ ಮತ ಪಡೆಯಲು ಯೋಜನೆ ರೂಪಿಸಿದಂತೆ ಕಾಣುತ್ತಿದೆ. ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ತಯಾರು ಮಾಡುತ್ತಿರುವುದರ ಹಿಂದೆ ನೀರು ಹರಿಸುವುದಕ್ಕಿಂತ ಯಾರಧ್ದೋ ವೈಯಕ್ತಿಕ ಹಿತಾಸಕ್ತಿ ಅಡಗಿದಂತೆ ಕಾಣುತ್ತಿದೆ. ಸರ್ಕಾರ ತಕ್ಷಣ ಯೋಜನೆಗೆ ಡಿಪಿಆರ್‌ ತಯಾರಿಸುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷ ಎಚ್.ಬಿ. ರಾಘವೇಂದ್ರ, ಮಲೆನಾಡು ಭಾಗದಲ್ಲಿ ಮಳೆ ಕೊರತೆಯಿಂದಾಗಿ ಗ್ರಾಮಾಂತರ ಪ್ರದೇಶಗಳ ಜನರು ಕುಡಿಯುವ ನೀರಿನ ಸಮಸ್ಯೆ ಎದುರಿಸುವಂತೆ ಆಗಿದೆ. ಸರ್ಕಾರ ಮಲೆನಾಡು ಭಾಗದ ಜನರಿಗೆ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗೆ ಅಗತ್ಯವಾದ ನೀರು ಪೂರೈಕೆ ಮಾಡಲು ಯೋಜನೆ ರೂಪಿಸುವುದನ್ನು ಬಿಟ್ಟು, ಶರಾವತಿ ನದಿಯ ಲಿಂಗನಮಕ್ಕಿ ಆಣೆಕಟ್ಟಿನಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಅವೈಜ್ಞಾನಿಕವಾದ ಯೋಜನೆ ರೂಪಿಸಿರುವುದು ಖಂಡನೀಯ. ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ನೀರು ಹರಿಸುವ ಸಂಬಂಧ ಸಮಗ್ರ ಯೋಜನಾ ವರದಿ ತಯಾರು ಮಾಡಿ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಅಸಾಧ್ಯವಾದ ಯೋಜನೆಗೆ ಡಿಪಿಆರ್‌ ತಯಾರು ಮಾಡುವ ನೆಪದಲ್ಲಿ ಮಲೆನಾಡಿನ ಜಲಮೂಲಕ್ಕೆ ಕನ್ನ ಹಾಕಬೇಡಿ ಎಂದು ತಿಳಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ರವಿನಾಯ್ಡು, ಉಪಾಧ್ಯಕ್ಷ ಗಣಪತಿ ಶಿರಳಗಿ, ಖಜಾಂಚಿ ಎಂ.ಜಿ. ರಾಘವನ್‌, ಪತ್ರಕರ್ತರಾದ ಎ.ಡಿ. ರಾಮಚಂದ್ರ, ಎ.ಡಿ. ಸುಬ್ರಹ್ಮಣ್ಯ, ಎಂ. ರಾಘವೇಂದ್ರ, ಮೃತ್ಯುಂಜಯ ಚಿಲುಮೆಮಠ, ಕೆ.ಎನ್‌. ವೆಂಕಟಗಿರಿ, ಲೋಕೇಶಕುಮಾರ್‌, ಗಿರೀಶ್‌ ರಾಯ್ಕರ್‌, ರಮೇಶ್‌ ಗುಂಡೂಮನೆ, ರಾಜೇಶ್‌ ಬಡ್ತಿ, ಮಹೇಶ್‌ ಹೆಗಡೆ, ರಾಘವೇಂದ್ರ ಶರ್ಮ, ಆರ್‌. ಜಗನ್ನಾಥ್‌, ಬಿ.ಡಿ. ರವಿಕುಮಾರ್‌, ಮಲ್ಲಿಕಾರ್ಜುನ್‌, ಚಂದ್ರಶೇಖರ್‌, ವಸಂತ, ಉಮೇಶ್‌, ಇಮ್ರಾನ್‌, ನಾಗರಾಜ್‌, ಯೋಗೀಶ್‌ ಭಟ್ ಇನ್ನಿತರರು ಇದ್ದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.