ಸೈನಿಕ ಪರೀಕ್ಷೆ ಅಭ್ಯರ್ಥಿಗಳ ಹೋರಾಟಕ್ಕೆ ಹಾಲಪ್ಪ ಸಾಥ್‌

ಸಾಗರ: ಸೈನಿಕ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕಾದ ಅಭ್ಯರ್ಥಿಗಳ ದಾಖಲೆ ಸಮಸ್ಯೆ ವಿಚಾರದಲ್ಲಿ ಶಾಸಕ ಹಾಲಪ್ಪ ಎಸಿ ದರ್ಶನ್‌ ಜೊತೆ ಮಾತುಕತೆ ನಡೆಸಿದರು.

Team Udayavani, May 31, 2019, 4:38 PM IST

1-June-34

ಸಾಗರ: ಸೈನಿಕ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕಾದ ಅಭ್ಯರ್ಥಿಗಳ ದಾಖಲೆ ಸಮಸ್ಯೆ ವಿಚಾರದಲ್ಲಿ ಶಾಸಕ ಹಾಲಪ್ಪ ಎಸಿ ದರ್ಶನ್‌ ಜೊತೆ ಮಾತುಕತೆ ನಡೆಸಿದರು.

ಸಾಗರ: ಮೇ 31ರಂದು ಗದಗದಲ್ಲಿ ನಡೆಯಲಿರುವ ಸೈನಿಕ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ತಾಲೂಕಿನ ಯುವ ಅಭ್ಯರ್ಥಿಗಳಿಗೆ ಅಗತ್ಯ ಪೂರಕ ದಾಖಲೆ ಸಿಗದೇ ಹತಾಶರಾಗಿ ದಿಕ್ಕೆಟ್ಟು ಕುಳಿತ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಎಚ್.ಹಾಲಪ್ಪ ಗುರುವಾರ ಮಧ್ಯ ಪ್ರವೇಶಿಸಿದ್ದಾರೆ. ಸಹಾಯಕ ಆಯುಕ್ತ ದರ್ಶನ್‌ ಮತ್ತು ನಿವೃತ್ತ ನೌಕರ ಪರಶುರಾಮಪ್ಪ ಮುಂತಾದವರು ಸಕಾಲದಲ್ಲಿ ಗಮನಿಸಿ ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೊಳಗೆ ಅವಶ್ಯ ದಾಖಲೆಗಳು ಸಿಕ್ಕಬಹುದು ಎಂಬ ಭರವಸೆ ಅಭ್ಯರ್ಥಿಗಳಿಗೆ ಸಿಕ್ಕಿದೆ.

ಒಂದೊಮ್ಮೆ ಈ ಪ್ರಯತ್ನಗಳ ನಂತರವೂ ಮುಂದಿನ ಕೆಲವು ಗಂಟೆಗಳಲ್ಲಿ ದಾಖಲೆ ಲಭಿಸದಿದ್ದರೆ ಈ ಬಾರಿ ಗದಗದಲ್ಲಿ ಸೈನಿಕ ಆಯ್ಕೆಯಲ್ಲಿ ಪಾಲ್ಗೊಳ್ಳುವ ತಾಲೂಕಿನ ಯುವಕರ ಕನಸು ಭಗ್ನಗೊಳ್ಳಲಿದೆ.

ತಾಲೂಕಿನ ಯುವಕರು ಸೈನ್ಯಕ್ಕೆ ಸೇರುವ ಹಂಬಲದಿಂದ ಮೇ 5ರಂದು ಇಲ್ಲಿನ ತಾಲೂಕು ಕಚೇರಿಯಲ್ಲಿ ವಾಸ ದೃಢೀಕರಣ ಪತ್ರ, ಆದಾಯ ಪ್ರಮಾಣ ಪತ್ರ ಮುಂತಾದ ಪೂರಕ ದಾಖಲೆಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಹ ಆನ್‌ಲೈನ್‌ ಅರ್ಜಿ ಸಲ್ಲಿಸುವ ನಿಯಮದ ಸಲುವಾಗಿ ಖಾಸಗಿ ಕಂಪ್ಯೂಟರ್‌ ಸಂಸ್ಥೆಗಳ ಮೂಲಕ ಅರ್ಜಿ ಸಲ್ಲಿಸುವಂತೆ ತಾಲೂಕು ಕಚೇರಿ ಸಿಬ್ಬಂದಿಗಳು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸುಮಾರು 10ಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು.

ಆ ನಂತರ ಕಳೆದ ಒಂದು ವಾರದಿಂದ ಪ್ರತಿದಿನ ಯುವಕರು ತಾಲೂಕು ಕಚೇರಿಗೆ ಬಂದು ಅಗತ್ಯ ದಾಖಲೆ ನೀಡುವಂತೆ ಕೋರಿದ್ದಾರೆ. ಆದರೆ ಸರ್ವರ್‌ ಸಮಸ್ಯೆ ಎಂದು ಹೇಳಿ ಇದುವರೆಗೂ ಯುವಕರಿಗೆ ದಾಖಲೆ ನೀಡಲಾಗಿಲ್ಲ. ಅಲ್ಲದೆ ಈ ಬಾರಿ ಈ ಯುವಕರು ಆನಂದಪುರ ಮುರುಘಾಮಠದ ಆವರಣದಲ್ಲಿ ಮಾಜಿ ಸೈನಿಕ ಭೈರಾಪುರದ ಶಿವಕುಮಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಸಹ ಭಾಗವಹಿಸಿದ್ದರಿಂದ ಆಯ್ಕೆಯಾಗುವ ಹೆಚ್ಚಿನ ಸಾಧ್ಯತೆಗಳನ್ನು ಅವರು ಹೊಂದಿದ್ದರು. ಆದರೆ ನಾಳೆಯೇ ಆಯ್ಕೆ ಕ್ಯಾಂಪ್‌ ನಡೆಯುವ ಹಿನ್ನೆಲೆಯಲ್ಲಿ ಯುವಕರು ಅಗತ್ಯ ದಾಖಲೆ ಸಿಗದೇ ಹತಾಶರಾಗಿದ್ದರು.

ಈ ನಡುವೆ ನಿವೃತ್ತ ನೌಕರ ಪರಶುರಾಮಪ್ಪ ಸಹ ತಾಲೂಕು ಕಚೇರಿಗೆ ಭೇಟಿ ನೀಡಿ, ದಾಖಲೆ ನೀಡುವಂತೆ ಸಿಬ್ಬಂದಿಗಳಿಗೆ ಮನವಿ ಮಾಡಿದ್ದರು. ಕಚೇರಿಯ ಕೆಲವು ನೌಕರರು ಸಹ ಸಂಬಂಧಪಟ್ಟ ಸಿಬ್ಬಂದಿಗಳಿಗೆ ಸಲಹೆ ನೀಡಿದ್ದರು. ಆದರೆ ಸರ್ವರ್‌ ಸಮಸ್ಯೆ ಎಂದು ಹೇಳಿ ತಾಲೂಕು ಕಚೇರಿ ಸಿಬ್ಬಂದಿಗಳು 25 ದಿನ ಕಳೆದರೂ ಯುವಕರಿಗೆ ತುರ್ತು ಬೇಕಾದ ದಾಖಲೆ ನೀಡಲಿಲ್ಲ.

ಈ ಹಿನ್ನೆಲೆಯಲ್ಲಿ ಮಾಹಿತಿ ತಿಳಿದ ಶಾಸಕ ಎಚ್. ಹಾಲಪ್ಪ ಖುದ್ದು ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ, ಅಗತ್ಯ ದಾಖಲೆ ಕೊಡುವಂತೆ ಸೂಚಿಸಿದ್ದಾರೆ. ಅಲ್ಲದೆ ರಾಜ್ಯ ಮಟ್ಟದ ನೋಡೆಲ್ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ತಾಂತ್ರಿಕ ಸಮಸ್ಯೆ ವಿವರಿಸಿದರು. ಆ ನಂತರ ಎಸಿ ದರ್ಶನ್‌ ಕೂಡ ತಾಲೂಕು ಕಚೇರಿಗೆ ಬಂದು ಯುವಕರ ಅಹವಾಲನ್ನು ಆಲಿಸಿದರು. ದಾಖಲೆ ಅಗತ್ಯವಾದ ಯುವಕರ ಹೆಸರು ಮತ್ತು ದೂರವಾಣಿ ಸಂಖ್ಯೆಗಳನ್ನು ಪಡೆದುಕೊಂಡು, ರಾತ್ರಿಯೊಳಗೆ ದಾಖಲೆ ನೀಡಿ, ಮೇ 31ರಂದು ಗದಗದಲ್ಲಿ ನಡೆಯುವ ಆಯ್ಕೆ ಶಿಬಿರದಲ್ಲಿ ಭಾಗವಹಿಸಲು ಅನುವು ಮಾಡಿಕೊಡುವ ಭರವಸೆ ನೀಡಿದರು.

ಕೃಷ್ಣಮೂರ್ತಿ ಜಂಬಾನೆ, ಪ್ರಶಾಂತ ಕೊರ್ಲಿಕೊಪ್ಪ, ಶಶಾಂಕ ಜಂಬೂರುಮನೆ, ಪ್ರಜ್ವಲ್ ಸಾಗರ, ಪ್ರತೀಕ ಸಾಗರ, ಪ್ರವೀಣ ಚೆನ್ನಶೆಟ್ಟಿಕೊಪ್ಪ, ಪ್ರವೀಣ ಗೌತಮಪುರ ಮುಂತಾದ ಯುವಕರು ಹಾಜರಿದ್ದು, ತಮ್ಮ ಸಮಸ್ಯೆ ವಿವರಿಸಿದರು. ತಹಶೀಲ್ದಾರ್‌ ನಾಗರಾಜ, ನಿವೃತ್ತ ನೌಕರ ಪರಶುರಾಮಪ್ಪ, ಪೋಷಕರಾದ ಗಣಪತಿ ಜಂಬಾನೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.