ಯಕ್ಷಗಾನದ ವ್ಯಾಪ್ತಿ ವಿಶೇಷವಾದದ್ದು: ಸುಬ್ರಹ್ಮಣ್ಯಧಾರೇಶ್ವರ

ಸಂಗತಿಗಳನ್ನು ಪೂರಕವಾಗಿ ಬಳಸಿಕೊಳ್ಳುವುದೇ ಯಕ್ಷಗಾನದ ವಿಶೇಷ

Team Udayavani, Sep 29, 2019, 7:23 PM IST

29-Sepctember-29

ಸಾಗರ: ಹೊರಗಿನ ಅನೇಕ ಸಂಗತಿಗಳನ್ನು ಸ್ವೀಕರಿಸಿ, ತನ್ನ ಒಟ್ಟಂದಕ್ಕೆ ಪೂರಕವಾಗಿ ಬಳಸಿಕೊಳ್ಳುವುದು ಯಕ್ಷಗಾನದ ವಿಶೇಷ ಎಂದು ಬಡಗು ತಿಟ್ಟಿನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ವಿಜಯ ಸೇವಾ ಟ್ರಸ್ಟ್‌ನ ಅಂಗಸಂಸ್ಥೆ ಯಕ್ಷಶ್ರೀ ಸಂಸ್ಥೆಯ ವತಿಯಿಂದ ಶನಿವಾರ ರೈಲ್ವೆ ಸ್ಟೇಷನ್‌ ರಸ್ತೆಯ ಶಾರದಾಂಬಾ ದೇವಸ್ಥಾನ ಸಭಾಗೃಹದಲ್ಲಿ 39ನೇ ಪ್ರಯೋಗವಾಗಿ ಯಕ್ಷ ನಾದ ಲಾಸ್ಯ ಯಕ್ಷಗಾನ ಮತ್ತು ಸುಗಮ ಸಂಗೀತ ಗಾಯನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯಕ್ಷಗಾನದ ಸಮೃದ್ಧಿ, ವ್ಯಾಪ್ತಿ ವಿಶೇಷವಾದುದು. ನರಕಾಸುರ ವಧೆ ಎಂಬ ಪ್ರಸಂಗವನ್ನು ಹೊಸ್ತೋಟ ಮಂಜುನಾಥ ಭಾಗವತರಿಂದ ಹಿಡಿದು ನಾಲ್ಕೈದು ಕವಿಗಳು ರಚಿಸಿದ್ದಾರೆ. ಪಾರಿಜಾತ, ನರಕಾಸುರ ವಧೆ, ಶ್ರೀಕೃಷ್ಣ ಪಾರಿಜಾತ ಎಂಬೆಲ್ಲಾ ಹೆಸರುಗಳಿವೆ.

ಇಡೀ ರಾತ್ರಿ ಸಮಯದಲ್ಲಿ ಆಡುವ ಕ್ರಮ ಸಹ ಇದೆ. ಬೆಳಗಿನ ಜಾವದಲ್ಲಿ 1ರಿಂದ 2 ತಾಸುಗಳಲ್ಲಿ ಪ್ರದರ್ಶಿಸುವ ಕ್ರಮ ಸಹ ಇದೆ. ವಿಸ್ತರಿಸಿ ಹಿಗ್ಗಿಸುವ, ಕುಗ್ಗಿಸುವ ಕಾರ್ಯಕ್ಕೆ ಪ್ರಸಂಗಗಳು ಒದಗುವುದು ವಿಶೇಷ ಎಂದರು. ಸಂಯೋಜಕ ಡಾ| ಎಚ್‌. ಎಸ್‌. ಮೋಹನ್‌ ಮಾತನಾಡಿ, ಯಕ್ಷಗಾನ ಮತ್ತು ಸುಗಮ ಸಂಗೀತವನ್ನು ಯಕ್ಷಶ್ರೀ ಸಂಸ್ಥೆಯಿಂದ 6ನೇ ಬಾರಿಗೆ ಒಂದೇ ವೇದಿಕೆಯಲ್ಲಿ ಪ್ರಸ್ತುತ ಪಡಿಸಲಾಗುತ್ತಿದೆ. ಪ್ರದರ್ಶನಗಳಲ್ಲಿ ಕಾಣಸಿಗದ ವೈವಿಧ್ಯತೆ, ಶೈಕ್ಷಣಿಕ ಸಂಗತಿ ಇಂಥ ಕಾರ್ಯಕ್ರಮಗಳಲ್ಲಿ ದೊರಕುತ್ತದೆ ಎಂದರು.

ನೆಬ್ಬೂರು ನಾರಾಯಣ ಭಾಗವತರ ಶಿಷ್ಯ ಶ್ರೀಧರ ಭಾಗವತ ಹಣಗಾರ ಹಾಗೂ ಸುಬ್ರಹ್ಮಣ್ಯ ಧಾರೇಶ್ವರ ಯಕ್ಷಗಾನ ಪದ್ಯ ಹಾಡಿದರು. ಮದ್ದಳೆಯಲ್ಲಿ ಎನ್‌.ಜಿ. ಹೆಗಡೆ, ರಾಘವೇಂದ್ರ ಹೆಗಡೆ, ಚೆಂಡೆಯಲ್ಲಿ ಕೃಷ್ಣ ಯಾಜಿ ಇಡಗುಂಜಿ ಸಾಥ್‌ ನೀಡಿದರು. ಶಿವಮೊಗ್ಗದ ಸುರೇಖಾ ಹೆಗಡೆ ಅವರು ಎಂ.ಎನ್‌. ವ್ಯಾಸ, ಜಿ.ಎಸ್‌. ಶಿವರುದ್ರಪ್ಪ, ಶಿಶುನಾಳ ಶರೀಫ್‌ರ ರಚನೆಯನ್ನು ಪ್ರಸ್ತುತಪಡಿಸಿದರು. ಕೀಪ್ಯಾಡ್‌ ನಲ್ಲಿ ಮೈಸೂರಿನ ಗಣೇಶ್‌ ಭಟ್‌, ತಬಲಾದಲ್ಲಿ ತುಕರಾಂ ರಂಗಧೋಳ್‌, ರಿದಂಪ್ಯಾಡ್‌ನ‌ಲ್ಲಿ ವಿಠ್ಠಲ್ ರಂಗಧೋಳ್‌ ಸಾಥ್‌ ನೀಡಿದರು. ಮನು ವಂದಿಸಿದರು.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.