ಮಿನಿ ಸಮರ; ಮತದಾನ ನೀರಸ

ಬಹುತೇಕ ಮತಗಟ್ಟೆಗಳ ಬಳಿ ಅಭ್ಯರ್ಥಿಗಳು- ಬೆಂಬಲಿಗರದ್ದೇ ಕಾರುಬಾರು •ಶಾಂತಿಯುತ ಮತದಾನ

Team Udayavani, May 30, 2019, 3:33 PM IST

30-May-38

ಸಾಗರ: ನಗರಸಭೆ ಚುನಾವಣೆಯ 9ನೇ ವಾರ್ಡ್‌ನಲ್ಲಿ 89 ವರ್ಷದ ವೃದ್ಧೆ ರಾಧಾ ಶೆಣೈ ಮತದಾನ ಮಾಡಿದ ಗುರುತನ್ನು ತೋರಿಸಿದರು.

ಸಾಗರ: ಬುಧವಾರ ನಡೆದ ನಗರಸಭೆ ಚುನಾವಣೆಗೆ ಬೆಳಗ್ಗೆಯಿಂದಲೇ ನೀರಸ ಮತದಾನ ನಡೆಯಿತು. ನಗರದ 31 ವಾರ್ಡ್‌ಗಳ ಪೈಕಿ ಒಂದೆರಡು ಮತಗಟ್ಟೆಗಳನ್ನು ಹೊರತುಪಡಿಸಿದರೆ ಯಾವುದೇ ಬೂತ್‌ನಲ್ಲಿ ಮತದಾರರ ಕ್ಯೂ ಕಂಡುಬರಲಿಲ್ಲ. ವಿಪರೀತ ಬಿಸಿಲಿನಿಂದಾಗಿ ಹಾಗೂ ವಾರ್ಡ್‌ಗಳ ಕುರಿತ ಗೊಂದಲದಿಂದ ಜನರು ಮನೆಯಿಂದ ಹೊರಗೆ ಬಂದು ಮತದಾನ ಮಾಡಲು ಹಿಂದೇಟು ಹಾಕಿದರು. ಸಂಜೆ ಐದಕ್ಕೆ ಮುಕ್ತಾಯವಾದ ಮತದಾನದ ಕುರಿತಾಗಿ ಪ್ರಾಥಮಿಕ ವರದಿಗಳು ಲಭ್ಯವಾಗಿದ್ದು, ಒಟಾರೆ ಶೇ. 63.55ರಷ್ಟು ಮತದಾನವಾಗಿದೆ ಎಂದು ತಿಳಿಸಲಾಗಿದೆ.

ನಗರದ ಬಹುತೇಕ ಮತಗಟ್ಟೆಯ ಹೊರಗೆ ಮತದಾರರಿಗಿಂತ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರೇ ಜಮಾಯಿಸಿಕೊಂಡಿದ್ದು ಕಂಡು ಬಂದಿತ್ತು. ಬರುವ ಮತದಾರರ ಬಳಿ ಅಭ್ಯರ್ಥಿಗಳು ಮತಗಟ್ಟೆ ಬಳಿಯೇ ನಿಂತು ಮತಯಾಚನೆ ಮಾಡುತ್ತಿರುವುದು ಸರ್ವೇಸಾಮಾನ್ಯವಾಗಿತ್ತು. ಚುನಾವಣಾ ಆಯೋಗದ ಅಧಿಕಾರಿಗಳು ಹಿಂದಿನ ದಿನಗಳಲ್ಲಿಯೇ ಮನೆಬಾಗಿಲಿಗೆ ಮತದಾನದ ಚೀಟಿ ವಿತರಿಸಬೇಕು ಎಂದು ಹೇಳಲಾಗಿದ್ದರೂ ಬಹುತೇಕ ಕಡೆ ಮತಗಟ್ಟೆಯ ಹೊರಭಾಗದಲ್ಲಿ ಚೀಟಿ ವಿತರಣೆ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದರೂ ಮತದಾರರು ಮಾತ್ರ ಅಭ್ಯರ್ಥಿಗಳು ನಿರೀಕ್ಷೆ ಮಾಡಿದ ಪ್ರಮಾಣದಲ್ಲಿ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿರಲಿಲ್ಲ. ಕೆಲವು ಅಭ್ಯರ್ಥಿಗಳು ಆಟೋ, ಓಮಿನಿ, ಬೈಕ್‌ಗಳ ಮೂಲಕ ಮತದಾರರ ಮನೆಮನೆಗೆ ತೆರಳಿ ಅವರನ್ನು ಮತಗಟ್ಟೆಗೆ ಕರೆದುಕೊಂಡು ಬರುತ್ತಿರುವ ದೃಶ್ಯ ಬಹುತೇಕ ವಾರ್ಡ್‌ಗಳಲ್ಲಿ ಕಂಡು ಬಂದಿತು. ಒಂದು ಬೂತ್‌ನಲ್ಲಿ ಅಭ್ಯರ್ಥಿಯೋರ್ವರ ಪತಿ ಪತ್ರಿಕೆಯೊಂದಿಗೆ ಮಾತನಾಡಿ, ಮನೆಗಳಲ್ಲಿರುವ ಮತದಾರರನ್ನು ತಲಾಷ್‌ ಮಾಡಿ ಮತ ಹಾಕಿಸಿದರೂ ಮತದಾನ ಶೇ. 50 ದಾಟುವುದು ಕಷ್ಟ ಎಂಬ ಸ್ಥಿತಿಯಿದೆ. ಇದು ಗೆಲ್ಲಬಲ್ಲ ಅಭ್ಯರ್ಥಿಗಳ ಆಯ್ಕೆಯಲ್ಲಿ ಪ್ರಭಾವ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ನಗರದ ಗಾಂಧಿನಗರ ಭಾಗದ ವಾರ್ಡ್‌ ನಂ. 18ರಲ್ಲಿ ಮತದಾನ ಆರಂಭಕ್ಕೂ ಮುನ್ನ ಮತಯಂತ್ರದಲ್ಲಿ ಸಣ್ಣ ಪ್ರಮಾಣದ ದೋಷ ಕಾಣಿಸಿಕೊಂಡಿದ್ದರೂ ಮತಗಟ್ಟೆ ಸಿಬ್ಬಂದಿ ತಕ್ಷಣ ಮತಯಂತ್ರ ಸರಿಪಡಿಸಿ ಸುಲಭ ಮತದಾನಕ್ಕೆ ಅನುವು ಮಾಡಿಕೊಟ್ಟರು. ಇನ್ಯಾವುದೇ ಮತಗಟ್ಟೆಯಲ್ಲಿ ಮತಯಂತ್ರ ದೋಷ ಕಂಡು ಬಂದಿಲ್ಲ.

ಮತಗಟ್ಟೆ ಸಿಬ್ಬಂದಿ ಮಾತ್ರ ವಿಪರೀತ ಬಿಸಿಲಿನಿಂದ ಬಸವಳಿದು ಹೋಗಿದ್ದು ಕಂಡು ಬಂದಿದೆ. ಇವರಿಗೆ ಚುನಾವಣೆ ಆಯೋಗ ಕುಡಿಯಲು ಸಮರ್ಪಕವಾಗಿ ನೀರು ಪೂರೈಕೆ ಮಾಡದೆ ಇರುವ ಬಗ್ಗೆ ಎಲ್ಲ ಮತಗಟ್ಟೆಗಳಲ್ಲೂ ಅಧಿಕಾರಿ, ಸಿಬ್ಬಂದಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇನ್ನು ಕೆಲವು ಮತದಾನ ಕೇಂದ್ರದಲ್ಲಿ ಸ್ವಚ್ಛತೆ ಮಾಡದೆ ಇದ್ದುದ್ದರಿಂದ ಮತಗಟ್ಟೆ ಸಿಬ್ಬಂದಿ, ಅಧಿಕಾರಿಗಳು ಮತದಾನ ಕೇಂದ್ರವನ್ನು ಪೊರಕೆ ಹಿಡಿದು ಸ್ವಚ್ಛಮಾಡಿಕೊಂಡು ಮತದಾನ ಪ್ರಕ್ರಿಯೆ ಪ್ರಾರಂಭಿಸಿದರು.

ಇನ್ನು ಕೆಲವು ಮತಗಟ್ಟೆಗಳಲ್ಲಿ ಅಂಗವಿಕಲ ಮತದಾರರು ಮತದಾನ ಮಾಡಲು ವೀಲ್ಚೇರ್‌ಗಳನ್ನು ಇರಿಸಲಾಗಿತ್ತಾದರೂ ಮತಗಟ್ಟೆ ಪ್ರವೇಶ ಮಾಡುವ ಮೆಟ್ಟಿಲುಗಳಿಗೆ ಸರಿಯಾದ ರ್‍ಯಾಂಪ್‌ ವ್ಯವಸ್ಥೆ ಮಾಡದೆ ಇರುವುದರಿಂದ ಅಂಗವಿಕಲ ಮತದಾರರನ್ನು ಮತದಾನಕ್ಕೆ ಕರೆದೊಯ್ಯಲು ಸಂಬಂಧಿಕರು ಸಮಸ್ಯೆ ಎದುರಿಸುವಂತೆ ಆಯಿತು. ವಾರ್ಡ್‌ ನಂ. 5ರಲ್ಲಿ ಅಂಗವಿಕಲರೊಬ್ಬರನ್ನು ರ್‍ಯಾಂಪ್‌ ಮೂಲಕ ವೀಲ್ಚೇರ್‌ನಲ್ಲಿ ಮೇಲೆ ಹತ್ತಿಸುವಾಗ ಬಿದ್ದಿರುವ ಘಟನೆ ಸಹ ನಡೆದಿದೆ.

31 ವಾರ್ಡ್‌ಗಳಲ್ಲಿ ಬಹುತೇಕ ಮತಗಟ್ಟೆಗಳಲ್ಲಿ ನಕಲಿ ಮತದಾರರನ್ನು ಪತ್ತೆ ಹಚ್ಚುವುದೇ ಅಭ್ಯರ್ಥಿಗಳಿಗೆ ಸವಾಲಿನ ಕೆಲಸವಾಗಿತ್ತು. ವಾರ್ಡ್‌ ನಂ. 17ರ ಬೆಳಲಮಕ್ಕಿ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆಯಲ್ಲಿ 100ಕ್ಕೂ ಹೆಚ್ಚು ಮತದಾರರನ್ನು ಅನಧಿಕೃತವಾಗಿ ಸೇರ್ಪಡೆ ಮಾಡಿರುವುದರ ಕುರಿತು ವ್ಯಾಪಕ ವಿರೋಧ ವ್ಯಕ್ತವಾಯಿತು.

ಈ ಭಾಗದ ಬಿಜೆಪಿ ಮುಖಂಡರು ಸುಮಾರು 50 ಜನರ ಪಟ್ಟಿ ಮಾಡಿ ಇವರು ನಮ್ಮ ವಾರ್ಡ್‌ನ ಮತದಾರರು ಅಲ್ಲ. ಜೊತೆಗೆ ಇವರು ಸಾಗರದಲ್ಲಿ ವಾಸವಿಲ್ಲದೆ ಶಿಕಾರಿಪುರ, ಶಿರಾಳಕೊಪ್ಪ ಇನ್ನಿತರ ತಾಲೂಕಿನಲ್ಲಿ ವಾಸವಿದ್ದಾರೆ. ಆದರೆ ಇವರ ಮತ ಈ ವಾರ್ಡ್‌ಗೆ ಸೇರಿಕೊಂಡಿದೆ. ಚುನಾವಣೆಯನ್ನು ವಾಮಮಾರ್ಗದಲ್ಲಿ ಗೆಲ್ಲಲು ಅನಧಿಕೃತವಾಗಿ ಕೆಲವರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ದೂರಿದರು. ಈ ಬಗ್ಗೆ ಚುನಾವಣೆ ಅಧಿಕಾರಿಗಳಿಗೆ ದೂರು ನೀಡಿದ್ದಾಗ್ಯೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರೌಡಿ ಶೀಟರ್‌ಗಳಿಂದ ಕಿರುಕುಳ: 30ನೇ ವಾರ್ಡಿನಲ್ಲಿ ರೌಡಿ ಶೀಟರ್‌ಗಳು ಪಕ್ಷದ ಅಭ್ಯರ್ಥಿಗಳಿಗೆ ತೊಂದರೆ ಕೊಡುತ್ತಿರುವುದು ಗಮನಕ್ಕೆ ಬಂದಿದ್ದು ಪೊಲೀಸ್‌ ರಕ್ಷಣೆ ಪಡೆಯಲಾಗಿದೆ. ಅವರ ಮೇಲೆ ಕ್ರಮಕ್ಕೂ ಒತ್ತಾಯಿಸಲಾಗಿದೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಪೂರಕವಾದ ವಾತಾವರಣವಿದೆ. ಪಕ್ಷವು 20ರಿಂದ 21 ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂದು ಅವರು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.