ವಿಭಿನ್ನ ಕರಪತ್ರಗಳಿಂದ ಗಮನ ಸೆಳೆಯುತ್ತಿರುವ ಪಕ್ಷೇತರರು


Team Udayavani, May 25, 2019, 5:42 PM IST

25-May-31

ಸಾಗರ: 10ನೇ ವಾರ್ಡ್‌ನ ಸ್ವತಂತ್ರ ಅಭ್ಯರ್ಥಿ ಕೆ.ಕಿರಣ ಕರಪತ್ರದಲ್ಲಿ ತಮ್ಮ ಹೆಸರಿನ ಜೊತೆಗೆ ರಾವಣ ಎಂದು ಮುದ್ರಿಸಿರುವುದು.

ಸಾಗರ: ಮೇ 29ರಂದು ಮತದಾನ ನಡೆಯಲಿರುವ ಇಲ್ಲಿನ ನಗರಸಭೆ ಚುನಾವಣೆಯಲ್ಲಿ ಕಣಕ್ಕೆ ಇಳಿದ ಹಲವು ಅಭ್ಯರ್ಥಿಗಳು ಮತ ಬೇಟೆಗಾಗಿ ಕರಪತ್ರದಲ್ಲಿ ವೈವಿಧ್ಯತೆ ಪ್ರದರ್ಶಿಸಿ ತಾವು ಈಗು ನೀವು ನೋಡುತ್ತಿರುವ ರಾಜಕಾರಣಿಗಳಿಗಿಂತ ತಾವು ಭಿನ್ನ ಎಂದು ತೋರಿಸಲು ಮುಂದಾಗಿದ್ದಾರೆ. ಪ್ರಚಾರಕ್ಕೆ ಬಳಸುವ ಕರಪತ್ರದಲ್ಲಿ ಮತದಾರರನ್ನು ಸೆಳೆಯಲು ಸರ್ಕಸ್‌ ಮಾಡುತ್ತಿದ್ದಾರೆ.

18ನೇ ವಾರ್ಡ್‌ನಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿರುವ ಗಣೇಶ್‌ ಗಟ್ಟಿ, ತಮಗೆ ಬಿಜೆಪಿ ಟಿಕೆಟ್ ನೀಡಿಲ್ಲ ಎಂಬುದನ್ನು ಕರಪತ್ರದಲ್ಲಿ ನೇರವಾಗಿ ಆರೋಪಿಸಿದ್ದಾರೆ. ಕಸಗುಡಿಸುವ, ಬ್ಯಾನರ್‌ ಕಟ್ಟುವ ಕೆಲಸಗಳನ್ನು ಬಿಜೆಪಿಯಲ್ಲಿ ಮಾಡಿದ್ದೇನೆ, ವಿವಿಧ ಹುದ್ದೆ ನಿರ್ವಹಿಸಿದ್ದೇನೆ ಎಂದೆಲ್ಲ ನಮೂದಿಸಿದ ಗಣೇಶ್‌ ಗಟ್ಟಿ ತಮಗೆ ಕೊನೆಯ ಗಳಿಗೆಯಲ್ಲಿ ಟಿಕೆಟ್ ತಪ್ಪಿದ್ದರಿಂದ ಪಕ್ಷೇತರವಾಗಿ ಸರ್ಸಿದ್ದಾಗಿ ಕರಪತ್ರದಲ್ಲಿ ಹೇಳಿಕೊಂಡಿದ್ದಾರೆ.

ಬೇರೆ ವಾರ್ಡ್‌ನಿಂದ ವಲಸೆ ಬಂದವರಿಗೆ ಮಣೆ ಹಾಕದೆ ನಿರಂತರ ಸಂಪರ್ಕದಲ್ಲಿರುವ ಸ್ಥಳೀಯರಿಗೆ ಅವಕಾಶ ನೀಡಲು ಗಣೇಶ್‌ ಕರಪತ್ರದ ಮೂಲಕ ಕೋರಿದ್ದಾರೆ. ಮುಂದುವರಿದು ಕರಪತ್ರದ ಕೊನೆಯಲ್ಲಿ ‘ಉಳ್ಳವರು ಹಾಗೂ ಇಲ್ಲದವರ ನಡುವಿನ ಹೋರಾಟ’ ಎಂಬ ಘೋಷಣೆಯನ್ನು ಸಹ ಮಾಡಿಕೊಂಡಿದ್ದಾರೆ. ಬಿಜೆಪಿ ಟಿಕೆಟ್ ವಂಚಿತರು ಸಂಘಟಿತರಾಗಿ ಬಂಡಾಯದ ಬಾವುಟ ಹಾರಿಸಿದ್ದು, ಬಹುತೇಕ ಕರಪತ್ರಗಳಲ್ಲಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 23ನೇ ವಾರ್ಡ್‌ನ ಪಕ್ಷೇತರ ಅಭ್ಯರ್ಥಿ ಸಂತೋಷ್‌ ಸಹ ತಮ್ಮ ಕರಪತ್ರದಲ್ಲಿ ‘ಉಳ್ಳವರು ಹಾಗೂ ಇಲ್ಲದವರ ನಡುವಿನ ಹೋರಾಟ’ ಎಂಬ ವಾಕ್ಯವನ್ನು ಮುದ್ರಿಸಿದ್ದಾರೆ. 16ನೇ ವಾರ್ಡ್‌ನ ಪಕ್ಷೇತರ ಅಭ್ಯರ್ಥಿ ಎಸ್‌.ವಿ.ಕೃಷ್ಣಮೂರ್ತಿ ತಮ್ಮ ಕರಪತ್ರದಲ್ಲಿ ಸ್ವಚ್ಛ ಭಾರತ್‌, ಸ್ವಚ್ಛ ಬಿಜೆಪಿ ಎಂದು ಮದ್ರಿಸಿದ್ದಾರೆ.

10ನೇ ವಾರ್ಡ್‌ನ ಸ್ವತಂತ್ರ ಅಭ್ಯರ್ಥಿ ಕೆ.ಕಿರಣ ಕರಪತ್ರದಲ್ಲಿ ತಮ್ಮ ಹೆಸರಿನ ಜೊತೆಗೆ ರಾವಣ ಎಂದು ಮುದ್ರಿಸಿಕೊಂಡಿದ್ದಾರೆ. ಬಾಲ್ಯದಲ್ಲಿ ಭೂ ಕೈಲಾಸ ನಾಟಕದಲ್ಲಿ ರಾವಣನ ಪಾತ್ರ ಮಾಡಿದ್ದರಿಂದ ಬಹುತೇಕ ಎಲ್ಲರೂ ಅವರನ್ನು ರಾವಣ ಎಂದೇ ಕರೆಯುತ್ತಾರೆ. ಆದ್ದರಿಂದ ಕರಪತ್ರದಲ್ಲಿ ತಮ್ಮ ಹೆಸರಿನ ಜೊತೆಗೆ ರಾವಣ ಎಂದು ಅವರು ಮುದ್ರಿಸಿಕೊಂಡಿದ್ದಾರೆ.

11ನೇ ವಾರ್ಡ್‌ನ ಪಕ್ಷೇತರ ಅಭ್ಯರ್ಥಿ ಎಂ.ಷಣ್ಮುಖ ?ನಾನು ಕಂಡಂತೆ ನಮ್ಮ ವಾರ್ಡ್‌? ಎಂಬ ಶೀರ್ಷಿಕೆಯ ಅಡಿಯಲ್ಲಿ ಸ್ಥಳೀಯವಾದ 20 ಸಮಸ್ಯೆಗಳನ್ನು ಪಟ್ಟಿ ಮಾಡಿದ್ದಾರೆ. ಪ್ರತಿದಿನ ಮನೆಮನೆಗೆ ಸೈಕಲ್ಲಿನಲ್ಲಿ ಹಾಲು ವಿತರಣೆ ಕಾರ್ಯ ಮಾಡುವ ಷಣ್ಮುಖ ಅವರು ಬಿಎಸ್‌ಸಿ ಪದವಿಧರರಾಗಿದ್ದು, ದಿನ ಬೆಳಗಾಗುವುದರೊಳಗೆ ಎಲ್ಲ ಜನಸಾಮಾನ್ಯರ ಸಂಪರ್ಕಕ್ಕೆ ಸಿಗುವ ವ್ಯಕ್ತಿ ನಾನು ಎಂದು ಕರಪತ್ರದಲ್ಲಿ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.