ಸಾಗರ ತಾಲೂಕಿನಲ್ಲಿ ಅಡಕೆಗೆ ವ್ಯಾಪಕ ಕೊಳೆಬಾಧೆ

ಬೆಳೆ ಕೈಗೆ ಸಿಗದ ಆತಂಕದಲ್ಲಿ ಅಡಕೆ ಕೃಷಿಕರು

Team Udayavani, Aug 17, 2019, 11:36 AM IST

17-Agust-16

ಸಾಗರ: ಕೊಳೆರೋಗದಿಂದ ಉದುರಿರುವ ಅಡಕೆ ನೋಡಿ ಚಿಂತಾಕ್ರಾಂತರಾದ ಅಡಕೆ ಬೆಳೆಗಾರ ಸುಳ್ಮನೆಯ ಗುರುಮೂರ್ತಿ.

ಸಾಗರ: ಒಂದೆಡೆ ಆಗಸ್ಟ್‌ ಮೂರರಿಂದ ವಾರ ಕಾಲ ಸುರಿದ ಆಶ್ಲೇಷಾ ಮಳೆಯಿಂದ ನೀರು ನುಗ್ಗಿ, ಧರೆ ಉರುಳಿ ಅಡಕೆ ತೋಟಗಳು ತೀವ್ರ ಹಾನಿಯಾಗುವುದನ್ನು ಕಂಡು ತತ್ತರಿಸಿದ್ದ ತಾಲೂಕಿನ ಅಡಕೆ ಬೆಳೆಗಾರ, ಮಳೆಯ ರಭಸ ಕಡಿಮೆಯಾಗುತ್ತಿದ್ದುದನ್ನು ನೋಡಿ ನಿಟ್ಟುಸಿರು ಬಿಡುವ ವೇಳೆಯಲ್ಲಿಯೇ ಕೊಳೆ ರೋಗ ಆವರಿಸಿದ್ದು ಅಡಕೆ ದೊಡ್ಡ ಪ್ರಮಾಣದಲ್ಲಿ ನೆಲಕಚ್ಚುತ್ತಿರುವುದು ರೈತರಿಗೆ ಗಾಯದ ಮೇಲೆ ಉಪ್ಪು ಸುರಿದಂತಾಗಿದೆ.

ತಾಲೂಕಿನ ತಾಳಗುಪ್ಪ ಹೋಬಳಿಯ ಹೊಸಳ್ಳಿ, ಹಂಸಗಾರು ಭಾಗದಲ್ಲಿ ಈ ವರ್ಷ ಬಂದಿರುವ ಕೊಳೆ ರೋಗ ಕಳೆದೆರಡು ದಶಕಗಳಲ್ಲಿಯೂ ಬಂದಿರಲಿಲ್ಲ. ಹೊಸಳ್ಳಿಯ ಬಿ.ಎನ್‌. ರಾಜಾರಾಮ, ಎಚ್.ಎನ್‌. ಅಶೋಕ, ಗೋಟಗಾರಿನ ಅರುಣ ಜಿ.ಜಿ., ಅರೆಹದದ ಮಂಜುನಾಥ್‌, ಹೊಸಳ್ಳಿಯ ಜಗದೀಶ್‌ ಬಿ.ಆರ್‌. ಮೊದಲಾದವರ ತೋಟದಲ್ಲಿ ಅಡಕೆ ಮರದ ಮೇಲೆ ಇರಬೇಕಾದ ಅಡಕೆಯಷ್ಟೂ ನೆಲದಲ್ಲಿದೆ. ಅಡಕೆ ಮರದಲ್ಲಿ ಒಂದಡಿಕೆ ಉಳಿಯದಂತೆ ನೆಲಕ್ಕೆ ಬೀಳುತ್ತಿದೆ ಎಂದು ರೈತರು ಅಲವತ್ತುಕೊಳ್ಳುತ್ತಿದ್ದಾರೆ. ಇದೇ ಪರಿಸ್ಥಿತಿ ಇಕ್ಕೇರಿ ಸಮೀಪದ ಸುಳ್ಮನೆ, ಮಾವಿನಸರ ಮೊದಲಾದ ಕಡೆಗಳಲ್ಲಿಯೂ ಕಾಣಿಸಿದೆ. ಸುಳ್ಮನೆಯ ಗುರುಮೂರ್ತಿ, ಚಿಪಿÛ ಲಿಂಗದಹಳ್ಳಿಯ ವರದಭಟ್, ವರದಾಮೂಲದ ವಿ.ಟಿ. ನಾಗರಾಜ, ಶೆಡ್ತಿಕೆರೆಯ ಎಸ್‌.ಕೆ. ಚಂದ್ರಶೇಖರ್‌, ವಿದ್ಯಾಧರ, ಎಸ್‌.ಎಸ್‌. ಶ್ರೀಕಾಂತ್‌ ಮೊದಲಾದವರ ತೋಟದಲ್ಲಿಯೂ ಇದೇ ಕಥೆ. ತಾಲೂಕಿನ ಬಹುಪಾಲು ಅಡಕೆ ತೋಟಗಳಲ್ಲಿ ತುಸು ಕಡಿಮೆ ಅಥವಾ ಅದಕ್ಕಿಂತ ಹೆಚ್ಚು ಅಡಕೆ ಉದುರುವ ದೃಶ್ಯ ಕಾಣುತ್ತಿದೆ.

ಈಗಾಗಲೇ ವಿಷಯ ಶಾಸಕ ಹಾಲಪ್ಪ ಅವರ ಗಮನಕ್ಕೂ ಬಂದಿದೆ. ನಾವು ತಾಲೂಕಿನ ಸಂಪೂರ್ಣ ಬೆಳೆಹಾನಿ ಪರಿಸ್ಥಿತಿಯ ಕುರಿತು ವಿಡಿಯೋ ಮಾಡಿ ಮುಖ್ಯಮಂತ್ರಿಗಳಿಗೆ ನೀಡಿದ್ದೇವೆ. ಕೊಳೆ ರೋಗ ಹಾನಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪ್ರಕೃತಿ ವಿಕೋಪದ ನಿಧಿಯಿಂದ ಸಹಾಯ ಒದಗಿಸಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು.

ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ಕಳೆದ ವರ್ಷ ಕೂಡ ನಾಲ್ಕಾರು ಸಭೆ, ಒತ್ತಡ ತಂತ್ರಗಳನ್ನು ರೂಪಿಸಿ 18 ಕೋಟಿ ರೂ.ಗಳನ್ನು ಕೊಳೆ ಹಾನಿಯ ಪರಿಹಾರಕ್ಕೆ ಮಂಜೂರು ಮಾಡಿಸಲಾಗಿತ್ತು. ಆ ಮೊತ್ತದಲ್ಲಿಯೇ ಬಾಕಿ ಇರುವ 8.01 ಕೋಟಿ ರೂ. ಬಿಡುಗಡೆ ಮಾಡಲು ಒತ್ತಾಯಿಸುವ ಕೆಲಸವನ್ನು ತಾಪಂ ಮಾಡಿದ್ದು, ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಗಿದೆ. ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್‌. ಜಯಂತ್‌ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರಕ್ಕೆ ಆಗ್ರಹ ಮಂಡಿಸುವ ಕೆಲಸ ಮಾಡಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅಡಕೆ ಕೊಳೆ ರೋಗ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ರೈತರು 30 ದಿನಗಳ ಅವಧಿಯಲ್ಲಿ ಎರಡೆರಡು ಬಾರಿ ಬೋರ್ಡೊ ಸಿಂಪಡನೆ ಮಾಡಿಯೂ ಕೊಳೆ ಬಂದಿದೆ. ಅಡಕೆ ಸಂಶೋಧನಾ ಕೇಂದ್ರ ಕೊಳೆ ರೋಗವನ್ನು ಗಂಭೀರವಾಗಿಯೇ ಪರಿಗಣಿಸಿಲ್ಲ. ಮಳೆಗಾಲದ ಸಂದರ್ಭದಲ್ಲಿ ಮಣ್ಣಿನಲ್ಲಿ ಅಗತ್ಯ ಪೋಷಕಾಂಶಗಳ ಕೊರತೆಯಾಗಿ ಕೊಳೆ ರೋಗ ಬರುತ್ತದೆಯೇ ಎಂಬುದು ಕೂಡ ಸಂಶೋಧನೆಯಾಗಬೇಕು. ಈ ಕೃಷಿ ವಿಜ್ಞಾನಿಗಳು ತೋಟಗಳಲ್ಲಿ ಪರಿಶೀಲನೆ ಮಾಡಿ, ಮಣ್ಣು ಪರೀಕ್ಷೆ ವರದಿ ಮೊದಲಾದ ಆಧಾರಗಳ ಮೂಲಕ ಪರಿಣಾಮಕಾರಿ ಸಲಹೆ ನೀಡಬೇಕಾಗಿದೆ ಎಂದು ಕೃಷಿಕ ಜಯಪ್ರಕಾಶ್‌ ಗೋಳಿಕೊಪ್ಪ ಪ್ರತಿಪಾದಿಸಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.