ನಕಲಿ ವೈದ್ಯರ ತಡೆಗೆ ಕ್ರಮ ವಹಿಸಿ

ಕಳ್ಳತನ ಪತ್ತೆ ಹಚ್ಚುವಲ್ಲಿ ಪೊಲೀಸ್‌ ಇಲಾಖೆ ವಿಫಲ: ತಾಪಂ ಅಧ್ಯಕ್ಷ್ಯ ಮಲ್ಲಿಕಾರ್ಜುನ ಆರೋಪ

Team Udayavani, Nov 9, 2019, 6:15 PM IST

9-November-26

ಸಾಗರ: ತಾಲೂಕಿನಲ್ಲಿ 42 ಜನ ಎಂಬಿಬಿಎಸ್‌ ಆಗದೆ ಇರುವ ನಕಲಿ ವೈದ್ಯರನ್ನು ಆರೋಗ್ಯ ಇಲಾಖೆ ಪತ್ತೆ ಹಚ್ಚಿದೆ. ನಕಲಿ ವೈದ್ಯರಿಂದ ಜನರ ಆರೋಗ್ಯಕ್ಕೆ ಅಪಾಯವಿದೆ. ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಪಂ ಅಧ್ಯಕ್ಷ ಬಿ.ಎಚ್‌. ಮಲ್ಲಿಕಾರ್ಜುನ ಹಕ್ರೆ ಸ್ಪಷ್ಟ ಸೂಚನೆ ನೀಡಿದರು.

ನಗರದ ಸಾಮರ್ಥ್ಯ ಸೌಧದಲ್ಲಿ ಶುಕ್ರವಾರ ತಾಪಂ ವ್ಯಾಪ್ತಿಯ ವಿವಿಧ ಇಲಾಖೆ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂತಹ ವೈದ್ಯರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ದೂರು ನೀಡಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ 35 ಗ್ರಾಪಂನಲ್ಲೂ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಸಿ. ಪ್ರಸ್ತುತ ರಕ್ತದ ಕೊರತೆ ವಿಪರೀತವಾಗಿದೆ. ಗ್ರಾಪಂ ಹಂತದಲ್ಲಿ ರಕ್ತದಾನ ಶಿಬಿರ ನಡೆಸಿದರೆ ಪ್ರತಿ ಪಂಚಾಯತ್‌ನಿಂದ ಕನಿಷ್ಟ 150 ಯೂನಿಟ್‌ ರಕ್ತ ಸಂಗ್ರಹಿಸಲು ಸಾಧ್ಯವಿದೆ. ಸಾಗರದ ರೋಟರಿ ರಕ್ತನಿಧಿ  ಕೇಂದ್ರ ನಿಮಗೆ ಅಗತ್ಯ ನೆರವು ನೀಡುತ್ತದೆ ಎಂದರು.

ನಗರವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಜಾಸ್ತಿಯಾಗುತ್ತಿದೆ. ಅತಿಮುಖ್ಯವಾಗಿ ಪ್ರೌಢಶಾಲೆಗೆ ಹೋಗುವ 8ರಿಂದ 10ನೇ ತರಗತಿಯೊಳಗಿನ ಮಕ್ಕಳು ಗಾಂಜಾ ಸೇವನೆಯಲ್ಲಿ ತೊಡಗಿರುವ ಮಾಹಿತಿ ಇದೆ. ಶಾಲಾ- ಕಾಲೇಜು ಅಕ್ಕಪಕ್ಕ ಇಂತಹ ಕೃತ್ಯ ನಡೆಯುತ್ತಿದ್ದರೂ ಪೊಲೀಸ್‌ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪೊಲೀಸ್‌ ಇಲಾಖೆಯ ವೈಫಲ್ಯದ ಕುರಿತು ಡಿಐಜಿ, ಐಜಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆಯಲಾಗುತ್ತದೆ ಎಂದರು.

ತಾಲೂಕಿನಾದ್ಯಂತ ಕಳ್ಳತನ ಪ್ರಕರಣ ಜಾಸ್ತಿಯಾಗುತ್ತಿದೆ. ಪೊಲೀಸರು ಕಳ್ಳರನ್ನು ಹಿಡಿದು ಕಳ್ಳತನವಾಗಿರುವ ವಸ್ತುಗಳನ್ನು ವಿಲೇವಾರಿ ಮಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಕಳ್ಳತನ ಪ್ರಕರಣ ಹೆಚ್ಚುತ್ತಿರುವುದು ಮತ್ತು ಕಳ್ಳರನ್ನು ಹಿಡಿಯುವಲ್ಲಿ ಪೊಲೀಸ್‌ ಇಲಾಖೆ ವೈಫಲ್ಯ ಅನುಭವಿಸಿರುವ ಕುರಿತು ಈಗಾಗಲೆ ನಾನು ಮುಖ್ಯಮಂತ್ರಿಗಳಿಗೆ, ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

ತಾಲೂಕಿನ ಅಕ್ಷರ ದಾಸೋಹ ಕೊಠಡಿಯಲ್ಲಿ 2005ರಿಂದ ಈತನಕ 35 ಕಳ್ಳತನ ಪ್ರಕರಣ ದಾಖಲಾಗಿದೆ. 60ಕ್ಕೂ ಹೆಚ್ಚು ಸಿಲಿಂಡರ್‌ ಕಳ್ಳತನ ನಡೆದಿದೆ. ಅಕ್ಷರ ದಾಸೋಹ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಕೆಲವು ಸರ್ಕಾರಿ ಕಚೇರಿಯಲ್ಲಿ ಸಹ ಕಳ್ಳತನ ನಡೆದಿದೆ. ಪದೇಪದೇ ಘಟನೆಗಳು ನಡೆಯುತ್ತಿರುವುದನ್ನು ನೋಡಿದರೆ ಪೊಲೀಸರೇ ಇದರಲ್ಲಿ ಶಾಮೀಲಾಗಿದ್ದಾರಾ ಎನ್ನುವ ಅನುಮಾನ ಸಹ ಮೂಡುತ್ತಿದೆ. ಈ ಬಗ್ಗೆ ರಾಜ್ಯ ಗೃಹ ಸಚಿವರಿಗೆ ಪತ್ರ ಬರೆಯುವಂತೆ ತಾಪಂ ಕಾರ್ಯ ನಿರ್ವಾಹಣಾಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ 122 ಹಿರಿಯ ಪ್ರಾಥಮಿಕ ಹಾಗೂ 6 ಪ್ರೌಢಶಾಲೆಗಳ ಮೇಲ್ಚಾವಣಿ ದುರಸ್ತಿಗಾಗಿ ತಲಾ 3 ಲಕ್ಷ ರೂ. ಸರ್ಕಾರ ಮಂಜೂರು ಮಾಡಿದೆ. ಜಿಪಂ ಇಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳು ಮೇಲ್ಚಾವಣಿಗೆ ಬಿಡುಗಡೆಯಾದ ಹಣವನ್ನು ಬೇರೆ ಕಾಮಗಾರಿಗೆ ಉಪಯೋಗಿಸಿಕೊಳ್ಳಬಾರದು. ಶಿಕ್ಷಣ ಇಲಾಖೆ ಖಾಸಗಿ ಶಾಲೆ ತೆರೆಯಲು ಅನುಮತಿ ನೀಡುವಾಗ ಅಕ್ಕಪಕ್ಕ ಸರ್ಕಾರಿ ಶಾಲೆಗಳಿದ್ದರೆ ಕೊಡಬಾರದು ಎಂದು ಸೂಚಿಸಿದರು.

ತಾಪಂ ಉಪಾಧ್ಯಕ್ಷ ಅಶೋಕ ಬರದವಳ್ಳಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ, ಕಾರ್ಯನಿರ್ವಾಹಣಾ ಧಿಕಾರಿ ಮಂಜುನಾಥಸ್ವಾಮಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.