ರೈತರನ್ನು ಜೈಲಿಗೆ ಅಟ್ಟುವ ವ್ಯವಸ್ಥಿತ ಪ್ರಯತ್ನ:ಗಂಗಾಧರ್‌

ಇತ್ತೀಚಿನ ಸರ್ಕಾರಗಳಿಂದ ಕೃಷಿ ಸಂಸ್ಕೃತಿಗೆ ಧಕ್ಕೆ

Team Udayavani, Apr 20, 2019, 5:33 PM IST

Udayavani Kannada Newspaper

ಸಾಗರ: ಕೆಲವು ರೈತ ವಿರೋಧಿ ಕಾಯ್ದೆಗಳನ್ನು ಕಾನೂನು ಆಗಿ ರೂಪಿಸಿ ರೈತರನ್ನು ಜೈಲಿಗೆ ಕಳಿಸುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಇಂತಹ ರಾಜನೀತಿಯನ್ನು ರೈತಸಂಘ ಒಪ್ಪುವುದಿಲ್ಲ. 192- ಎ ಕಾಯ್ದೆಯಡಿ ಕೇಸ್‌ ದಾಖಲಿಸಿ ರೈತರನ್ನು ಜೈಲಿಗೆ ಕಳಿಸುವ ಪ್ರಯತ್ನ ಮಾಡಿದರೆ ರೈತ ಸಂಘ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ ಎಂದು ರೈತ ಮುಖಂಡ ಕೆ.ಟಿ. ಗಂಗಾಧರ್‌ ಎಚ್ಚರಿಕೆ ನೀಡಿದ್ದಾರೆ.

ನಗರದ ಸರ್ಕಾರಿ ನೌಕರರ ಭವನದಲ್ಲಿ ಡಾ| ಎಚ್‌.
ಗಣಪತಿಯಪ್ಪ ಸೇವಾ ಟ್ರಸ್ಟ್‌, ಕರ್ನಾಟಕ ಜಾನಪದ ಪರಿಷತ್‌ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಕಾಗೋಡು ಚಳುವಳಿ ನೆನಪು ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಭೂಮಿ ಇವತ್ತಿನ ಆತಂಕಗಳು’ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಮಲೆನಾಡಿನಲ್ಲಿ ಅಲ್ಪಸ್ವಲ್ಪ ಜಮೀನು ಬದುಕಿನ ಉದ್ದೇಶಕ್ಕಾಗಿ ಸಾಗುವಳಿ ಮಾಡಿಕೊಂಡು ಬಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಮಾರಕವಾಗಿರುವ 192- ಎ ಕಾಯ್ದೆಯನ್ನು ತಕ್ಷಣ
ತಿದ್ದುಪಡಿ ಮಾಡಬೇಕು. ಮುಖ್ಯಮಂತ್ರಿಗಳು, ಅರಣ್ಯ
ಸಚಿವರು ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಕ್ಷಣ ತಮ್ಮ ಕೈ ಕೆಳಗಿನ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಯಾವುದೇ ಕಾರಣಕ್ಕೂ ರೈತರಿಗೆ ನೋಟಿಸ್‌ ನೀಡಬಾರದು. 192- ಎ ಕಾಯ್ದೆಯನ್ನು ವ್ಯವಸಾಯ ಭೂಮಿಗೆ ಅನ್ವಯಿಸುವುದಿಲ್ಲ ಎನ್ನುವ ಸಣ್ಣ ತಿದ್ದುಪಡಿಯನ್ನು ಮಾಡದೆ ಇರುವುದೇ ರೈತರು ಜೈಲಿಗೆ ಹೋಗುವ ಆತಂಕದ ಸ್ಥಿತಿ ಎದುರಿಸಲು ಕಾರಣವಾಗಿದೆ ಎಂದು ಹೇಳಿದರು.

ರೈತ ಚಳುವಳಿ ಎಂದರೆ ನಿರಾಯುಧರು, ನಿಶ್ಯಕ್ತರು,
ಅಸಂಘಟಿತರು, ಆರ್ಥಿಕವಾಗಿ ಸಬಲರಲ್ಲದವರು ತಮ್ಮ ಹಕ್ಕಿಗೆ ಚ್ಯುತಿ ಬಂದಾಗ ಬೇರೆ ದಾರಿ ಇಲ್ಲದೆ ಹೋರಾಟದ ಹಾದಿ ಹಿಡಿಯುವಂತಹದ್ದಾಗಿದೆ. ಚಳುವಳಿಯಲ್ಲಿ ಪಾಲ್ಗೊಂಡ ರೈತರನ್ನು ಹತ್ತಿಕ್ಕಲು ಅವರನ್ನು ಜೈಲಿಗೆ ಕಳಿಸುವುದು. ಅವರ ಮೇಲೆ
ಕೇಸು ಹಾಕುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ದುರಂತವಾಗಿದೆ. ಇತ್ತೀಚಿನ ಸರ್ಕಾರಗಳು ಇದನ್ನು ಮಾಡುತ್ತಿದ್ದು, ಇದರಿಂದ ಕೃಷಿ ಸಂಸ್ಕೃತಿಗೆ ಧಕ್ಕೆ ಉಂಟಾಗುತ್ತದೆ ಎಂದು ವಿಶ್ಲೇಷಿಸಿದರು.

ಜಾಗತೀಕರಣ ಬಂದ ಮೇಲೆ ನಮ್ಮ ಭೂಮಿ, ಕೃಷಿ ಅದನ್ನು ಅವಲಂಬಿಸಿಕೊಂಡು ಬಂದ ರೈತರ ಸ್ಥಿತಿ ಆತಂಕದಲ್ಲಿದೆ. ನಮ್ಮ ಭೂಮಿಯನ್ನು ಬಹುರಾಷ್ಟ್ರೀಯ ಕಂಪನಿಗಳ ಕೈಗೆ ಕೊಡುವ ಹುನ್ನಾರ ನಡೆಯುತ್ತಿದೆ. ಭಾರತ್‌ ಮಾತಾಕೀ ಜೈ ಎಂದ ತಕ್ಷಣ ರೈತರ ಭೂಮಿ ರಕ್ಷಣೆಯಾಗುವುದಿಲ್ಲ. ಬದಲಾಗಿ ಭಾರತ್‌ ಮಾತಾ ಎಂದರೆ ಭೂಮಿ. ಅದರ ರಕ್ಷಣೆ ಆಗಬೇಕು. ಮೇಕ್‌ ಇನ್‌ ಇಂಡಿಯಾ ಪರಿಕಲ್ಪನೆಯನ್ನು ಆಡಳಿತ ನಡೆಸುವವರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಭೂಮಿಯಲ್ಲಿ ರೈತರು ಉತ್ಪಾದನೆ ಮಾಡಿದರೆ ಅದೆ ಮೇಕ್‌ ಇನ್‌ ಇಂಡಿಯಾ ಎಂದು ಅಭಿಪ್ರಾಯಿಸಿದರು.

ಭೂಮಿ, ಒಕ್ಕಲುತನಕ್ಕೆ ಸಂಬಂಧಪಟ್ಟಂತೆ ನಡೆದ ಕಾಗೋಡು ಚಳುವಳಿ ಅಂದಿನ ದಿನಗಳಲ್ಲಿ ಪ್ರಜಾಪ್ರಭುತ್ವ ಬಂದ ತಕ್ಷಣ ಪ್ರಭುತ್ವದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಸ್ವಾತಂತ್ರ್ಯಾ
ನಂತರ ನಡೆದ ಮೊದಲ ರೈತರ ಬಂಡಾಯ ಕಾಗೋಡು ಚಳುವಳಿಯಾಗಿದ್ದು, ಇದರಿಂದ ಲಕ್ಷಾಂತರ ಗೇಣಿ ರೈತರ ಬದುಕು ಹಸನಾಗಿದ್ದು ಇಂದು ಇತಿಹಾಸ. ಇಂತಹ ಚಳುವಳಿಯನ್ನು ಮೆಲಕು ಹಾಕುವ ಜೊತೆಗೆ ಯುವಪೀಳಿಗೆ ಚಳುವಳಿಯ ಮಹತ್ವ ಅರಿತುಕೊಳ್ಳಬೇಕಾಗಿದೆ ಎಂದು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ. ಮಂಜುನಾಥ್‌ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಪ್ರಕಾಶ್‌ ಆರ್‌. ಕಮ್ಮಾರ್‌ ಇದ್ದರು. ವಸಂತ ಕುಗ್ವೆ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಪರಮೇಶ್ವರ ಕರೂರು ಸ್ವಾಗತಿಸಿದರು. ಟ್ರಸ್ಟ್‌ ಅಧ್ಯಕ್ಷ ಉಮೇಶ್‌ ಹಿರೇನೆಲ್ಲೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್‌. ಬಸವರಾಜ್‌ ವಂದಿಸಿದರು. ಕಿರಣ್‌ ನಿರೂಪಿಸಿದರು.

ಟಾಪ್ ನ್ಯೂಸ್

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.