ಪ್ರತಿಭೆಗೆ ಪ್ರೋತ್ಸಾಹ ಸಿಗಲಿ

ಸುಪ್ತ ಪ್ರತಿಭೆ ಹೊರ ತರಲು ಉತ್ತಮ ಶಿಕ್ಷಣ ನೀಡುವುದು ಅಗತ್ಯ: ಗಾರ್ಗಿ

Team Udayavani, Jul 21, 2019, 1:10 PM IST

21-July-28

ಸಾಗರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜು. 25ರಂದು ನಡೆಯಲಿರುವ ಮಕ್ಕಳ ಸಮ್ಮೇಳನದ ನಿಯೋಜಿತ ಅಧ್ಯಕ್ಷೆ ಗಾರ್ಗಿ ಸೃಷ್ಟೀಂದ್ರ ಅವರ ಸ್ವಗ್ರಾಮ ಬಂದಗದ್ದೆಯಲ್ಲಿ ಕಸಾಪ ಅಭಿನಂದಿಸಿತು.

ಸಾಗರ: ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಸುಪ್ತವಾಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ವಾತಾವರಣ ಬೇಕು ಎಂದು 5ನೇ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷೆ ಗಾರ್ಗಿ ಸೃಷ್ಟೀಂದ್ರ ಬಂದಗದ್ದೆ ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜು. 25ರಂದು ಬ್ರಾಸಂ ಸಭಾಭವನದಲ್ಲಿ ನಡೆಯಲಿರುವ ಸಮ್ಮೇಳನದ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಗಾರ್ಗಿ ಅವರ ಸ್ವಗ್ರಾಮ ಬಂದಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಷತ್ತಿನ ಆಹ್ವಾನ ಸ್ವೀಕರಿಸಿ ಮಾತನಾಡಿದ ಅವರು, ಎಲ್ಲ ಪೋಷಕರೂ ತಮ್ಮ ಮಕ್ಕಳಿಗೆ ಮೊದಲು ಶಿಕ್ಷಣ ಕಲಿಸಲು ಆದ್ಯತೆ ನೀಡಬೇಕು. ಶಿಕ್ಷಣ ಆತ್ಮವಿಶ್ವಾಸವನ್ನು ಹುಟ್ಟುಹಾಕುತ್ತದೆ. ಅದೇ ಶಿಕ್ಷಣ ನಮ್ಮ ಅಭಿರುಚಿಯನ್ನು ಬೆಳೆಸುತ್ತದೆ. ನನಗೆ ಮನೆಯಲ್ಲಿ ಹಾಗೂ ಶಾಲೆಯಲ್ಲಿ ಉತ್ತಮ ಪ್ರೋತ್ಸಾಹ ಸಿಗುತ್ತಿದೆ ಎಂದರು.

ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷ ತಿರುಮಲ ಮಾವಿನಕುಳಿ ಮಾತನಾಡಿ, ಗಾರ್ಗಿ ಅವರ ಕುಟುಂಬ ಉದಾತ್ತ ಸಂಸ್ಕೃತಿಯನ್ನು ಹೊಂದಿದೆ. ಸಮಾಜವಾದಿ ಚಿಂತಕರಾಗಿ ಹೆಸರು ಮಾಡಿದ್ದ ಬಂದಗದ್ದೆ ರಮೇಶ್‌ ಈ ಮನೆತನದ ಆದರ್ಶದ ಕುರುಹನ್ನು ಬಿಟ್ಟುಹೋಗಿದ್ದಾರೆ. ಇಂಥ ಕುಟುಂಬದಲ್ಲಿ ಗಾರ್ಗಿ ಬೆಳೆದಿದ್ದಾಳೆ. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಹೆಚ್ಚಿನ ಸಾಧನೆ ಮಾಡಿ ಮುಂದಿನ ತಲೆಮಾರಿಗೆ ಆದರ್ಶಪ್ರಾಯರಾಗಲಿ ಎಂದು ಶುಭ ಕೋರಿದರು.

ಪರಿಷತ್ತಿನ ಜಿಲ್ಲಾ ಕಾರ್ಯಾಧ್ಯಕ್ಷ ಮ.ಸ.ನಂಜುಂಡಸ್ವಾಮಿ ಮಾತನಾಡಿ, ಬಹಳಷ್ಟು ಮಕ್ಕಳು ಅವಕಾಶ ಸಿಗುವುದಿಲ್ಲ ಎಂದು ದೂರುತ್ತಾರೆ. ಪರಿಷತ್ತು ಈ ಕಾರಣಕ್ಕಾಗಿ ಮಕ್ಕಳಿಗಾಗಿ ಇಂಥ ಸಮ್ಮೇಳನ ನಡೆಸುತ್ತಿದೆ. ಗಾರ್ಗಿ ಅವರು ಮಧ್ಯಮ ವರ್ಗದ ಅಪ್ಪಟ ಗ್ರಾಮೀಣ ಪ್ರತಿಭೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸಂಸ್ಕೃತಿ ವಿಚಾರ ಹೆಚ್ಚು ಗೊತ್ತಿರುತ್ತದೆ. ಆಧುನಿಕತೆ ಬಂದಂತೆ ಮಕ್ಕಳು ಸಾಮಾಜಿಕ ಪ್ರಜ್ಞೆ ಮತ್ತು ಕರ್ತವ್ಯ ಮರೆಯುತ್ತಿದ್ದಾರೆ. ಗಾರ್ಗಿ ಅವರಿಗೆ ಹೊಸದನ್ನು ತಿಳಿದುಕೊಳ್ಳುವ ಕುತೂಹಲದ ಮನಸ್ಸಿದೆ. ಅವರ ಅಭಿರುಚಿಯನ್ನು ಪ್ರೋತ್ಸಾಹಿಸಬೇಕು ಎಂದರು.

ನಿರ್ಮಲಾ ಬಾಲಿಕಾ ಪ್ರೌಢಶಾಲೆ ಪ್ರಬಾರ ಮುಖ್ಯ ಶಿಕ್ಷಕ ಶಂಕರ್‌ ಸಿ.ಎ. ಮಾತನಾಡಿ, ಗಾರ್ಗಿ ಅವರ ಪ್ರತಿಭೆ ನಮಗೆ ಪರಿಚಯವಿದೆ. ಶಾಲಾ ಸ್ಪರ್ಧೆಗಳಲ್ಲಿ ಬಹುಮಾನ ತಂದುಕೊಡುವ ಮೂಲಕ ಶಾಲೆಗೆ ಕೀರ್ತಿ, ಗೌರವ ತಂದುಕೊಟ್ಟಿದ್ದಾಳೆ. ತಾಲೂಕಿನಲ್ಲೇ ಮೊದಲ ಸ್ಥಾನ ಎಂದು ಗುರುತಿಸುವಂಥ ಪ್ರತಿಭೆಯನ್ನು ಪರಿಷತ್ತು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಪರಿಷತ್ತಿನ ಅಧ್ಯಕ್ಷ ಎಸ್‌.ವಿ. ಹಿತಕರ ಜೈನ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮ್ಮೇಳನದ ಸರ್ವಾಧ್ಯಕ್ಷತೆಗೆ ಪಾರದರ್ಶಕವಾಗಿ ಸಂದರ್ಶನ ಮಾಡಿ ಗಾರ್ಗಿ ಅವರನ್ನು ಆಯ್ಕೆ ಮಾಡಿದ್ದೇವೆ. ದೊಡ್ಡ ಸಮ್ಮೇಳನದಲ್ಲಿ ಮಕ್ಕಳಿಗೆ ಅವಕಾಶ ಸಿಗುವುದಿಲ್ಲ ಎಂಬ ಉದ್ದೇಶದಿಂದ ಮಕ್ಕಳಿಗಾಗಿಯೇ ಸಮ್ಮೇಳನ ಮಾಡುತ್ತಿದ್ದೇವೆ. ಸಮ್ಮೇಳನ ಮಕ್ಕಳ ಸಾಹಿತ್ಯ ಸ್ಪರ್ಶಕ್ಕೆ ಸ್ಫೂರ್ತಿ ತುಂಬುತ್ತದೆ. ಕೆಳದಿ ಅರಸರು ಆಳಿದ ಈ ಪುಣ್ಯ ನೆಲದಲ್ಲಿ ಗಾರ್ಗಿಯ ಪ್ರತಿಭೆ ಅನಾವರಣಗೊಂಡಿದೆ. ಪರಿಷತ್ತು ನಿಜವಾದ ಪ್ರತಿಭೆಯನ್ನು ಗುರುತಿಸಿ ಆಯ್ಕೆ ಮಾಡಿದೆ ಎಂಬ ಸಂತೋಷವಿದೆ ಎಂದರು.

ಗ್ರಾಮಸ್ಥರ ಪರವಾಗಿ ಕೃಷಿಕ ರಾಧಾಕೃಷ್ಣ ಬಂದಗದ್ದೆ, ಉದ್ಯಮಿ ಉಮೇಶ್‌ ಬಂದಗದ್ದೆ ಮಾತನಾಡಿದರು. ಗಾರ್ಗಿ ಅವರ ತಂದೆ ಶೈಲೇಂದ್ರ ಬಂದಗದ್ದೆ, ತಾಯಿ ಸರಸ್ವತಿ ಹೆಗಡೆ, ಪರಿಷತ್ತಿನ ನಿರ್ದೇಶಕರಾದ ಪರಶುರಾಮಪ್ಪ, ಶಿವಾನಂದ ಮಾಸೂರು, ಗಣಪತಿ ಶಿರಳಗಿ, ಹೆಲ್ತ್ ಹನುಮಂತಪ್ಪ, ವಸಂತ ಶೇಟ್, ಜಿ.ಆರ್‌. ಶಿವಶಂಕರ್‌, ಹಿರಿಯ ಪತ್ರಕರ್ತ ಎಚ್.ವಿ. ರಾಮಚಂದ್ರ ರಾವ್‌, ಮೃತ್ಯುಂಜಯ ಚಿಲುಮೆಮಠ, ಗ್ರಾಮದ ನವೀನಕುಮಾರ್‌, ವಿಜಯಶ್ರೀ, ಸಂಧ್ಯಾ, ಅನುರಾಧಾ, ಕಾಂತಿಮತಿ, ಶ್ರೀಮತಿ, ಸಹನಾ, ನಾಗರತ್ನ ಮತ್ತಿತರರು ಇದ್ದರು. ಪರಿಷತ್ತಿನ ಕಾರ್ಯದರ್ಶಿ ಮೇಜರ್‌ ಎಂ. ನಾಗರಾಜ್‌ ಸ್ವಾಗತಿಸಿದರು. ನಿರ್ದೇಶಕಿ ಗಂಗಮ್ಮ ವಂದಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.