ಬಾಲಛೇಡದಲ್ಲಿ ನೈರ್ಮಲ್ಯ ಮರೀಚಿಕ
ಗ್ರಾಪಂ ಅಧ್ಯಕ್ಷೆ ರಾಮಲಿಂಗಮ್ಮ ತವರೂರುರಸ್ತೆ ಮೇಲೆಯೇ ಹರಿಯುತ್ತಿದೆ ನೀರು ಗ್ರಾಪಂ ನಿರ್ಲಕ್ಷ್ಯ
Team Udayavani, Nov 22, 2019, 5:46 PM IST
ಭೀಮಣ್ಣ ಬಿ. ವಡವಟ್
ಸೈದಾಪುರ: ಸೈದಾಪುರ ಗ್ರಾಪಂ ಅಧ್ಯಕ್ಷೆ ರಾಮಲಿಂಗಮ್ಮ ಅವರ ತವರೂರು ಬಾಲಛೇಡ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಸದಾ ಕೊಳಕು ತುಂಬಿದ ಚರಂಡಿಗಳ ಅವ್ಯವಸ್ಥೆಯಿಂದ ನೀರು ರಸ್ತೆಯಲ್ಲಿ ಸಂಗ್ರಹವಾಗಿ ಇಲ್ಲಿನ ನಿವಾಸಿಗಳು ಸಂಚರಿಸಲು ಹಿಂದೇಟು ಹಾಕುತ್ತಿದ್ದಾರೆ.
ಗ್ರಾಮದಲ್ಲಿ ಅವೈಜ್ಞಾನಿಕ ಚರಂಡಿ ಅವ್ಯವಸ್ಥೆಯಿಂದ ನೈರ್ಮಲ್ಯ ಸಮಸ್ಯೆ ತಾಂಡವಾಡುತ್ತಿದೆ. ನಿಯಮಿತವಾಗಿ ಚರಂಡಿ ಹೂಳೆತ್ತದ ಗ್ರಾಪಂ ನಿರ್ಲಕ್ಷ್ಯ
ವಹಿಸಿದೆ. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ತಗ್ಗು ಪ್ರದೇಶಗಳಲ್ಲಿ ಕೊಳಕು ನೀರು ಸಂಗ್ರಹವಾಗುತ್ತಿದೆ. ಕೊಳಕು ನೀರು ನಿಲ್ಲುವ ರಸ್ತೆಯಲ್ಲಿ ತಿರುಗಾಡುವ ಜನರು, ವಾಹನ ಸವಾರರು ಹಿಂದೇಟು ಹಾಕುತ್ತಿದ್ದಾರೆ. ಗ್ರಾಮದ ಜಾತ್ರೆ ಮುಗಿದ ನಂತರ ಕೆಲ ಪ್ರದೇಶಗಳಲ್ಲಿ ಸ್ವಚ್ಚ ಮಾಡಲಾಗಿದೆ. ಆದರೆ ಇನ್ನು ಅನೇಕ ಕಡೆಗಳಲ್ಲಿ ರಸ್ತೆ ಮೇಲೆಯೇ ನೀರು ಹರಿದು ಹೋಗುತ್ತಿದೆ.
ರಾತ್ರಿ ಸಮಯದಲ್ಲಿ ತಿರುಗಾಡಲು ವಯಸ್ಸಾದವರು, ಚಿಕ್ಕ ಮಕ್ಕಳು ಪ್ರಯಾಸ ಪಡುವಂತಾಗಿದೆ. ಅಲ್ಲದೆ ಸೊಳ್ಳೆ ಕಾಟ ತುಂಬಾ ಹೆಚ್ಚಾಗಿದೆ. ಇದರಿಂದ ರಾತ್ರಿ ನೆಮ್ಮದಿಯಿಂದ ನಿದ್ದೆ ಮಾಡಲು ಆಗುತ್ತಿಲ್ಲ. ಸಮಸ್ಯೆ ಕುರಿತು ಹಲವು ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲು ಪ್ರಯತ್ನಿಸಿದಾಗ ಸಂರ್ಪಕಕ್ಕೆ ಸಿಗುವುದಿಲ್ಲ ಎಂಬುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ