ಆನೂರು ಬಿ ಸಮಸ್ಯೆಗಳ ಗ್ರಾಮ
ಶುದ್ಧ ನೀರಿನ ಘಟಕ ಒಂದೇ ವರ್ಷದಲ್ಲಿಸ್ಥಗಿತ ಚರಂಡಿ ಇಲ್ಲದೇ ರಸ್ತೆಯಲ್ಲಿ ನೀರು
Team Udayavani, Dec 16, 2019, 3:37 PM IST
ಭೀಮಣ್ಣ ಬಿ. ವಡವಟ್
ಸೈದಾಪುರ: ಬೆಳಗುಂದಿ ಗ್ರಾಪಂ ವ್ಯಾಪ್ತಿಯ ಆನೂರು ಬಿ ಗ್ರಾಮದಲ್ಲಿ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯ ದಿಂದಾಗಿ ಅನೇಕ ಸಮಸ್ಯೆಗಳು ಎದುರಾಗಿವೆ.
ಆನೂರು ಬಿ ಗ್ರಾಮದಲ್ಲಿ ಸುಮಾರು 700ರಿಂದ 800 ಜನಸಂಖ್ಯೆ ಇದೆ. ಮೂಲಭೂತ ಸೌಕರ್ಯ ಸೇರಿದಂತೆ ಹಲ ಸಮಸ್ಯೆಗಳು ಜನರನ್ನು ನಿದ್ದೆಗೆಡಿಸಿವೆ. 2018ರಲ್ಲಿ ನಿರ್ಮಾಣವಾದ ಶುದ್ಧ ನೀರಿನ ಘಟಕ ಪ್ರಾರಂಭವಾದ ಕೇವಲ ಒಂದು ವರ್ಷದಲ್ಲಿ ಸಾರ್ವಜನಿಕರಿಗೆ ಒದಗಿಸುವ ತನ್ನ ಸೇವೆ ಸ್ಥಗಿತಗೊಳಿಸಿದೆ.
ಅಸಮರ್ಪಕ ವಿದ್ಯುತ್ ಪೂರೈಕೆ ಮತ್ತು ಸೀಮಿತವಾದ ನೀರಿನ ಕೊಳವೆ ಬಾವಿ ಇಲ್ಲದಿರುವುದು ಇದಕ್ಕೆ ಕಾರಣ. ನೀರು ಶುದ್ಧೀಕರಣ ಯಂತ್ರೋಪಕರಣಗಳು ತುಂಬಾ ಕಳಪೆಯಾಗಿವೆ. ಒಂದು ವರ್ಷದಲ್ಲಿ ಹಾಳಾಗಿವೆ. ಇದರಿಂದ ಜನರು ನಿತ್ಯ ದೂರದ ಕೊಳವೆ ಬಾವಿ ನೀರು ಕುಡಿಯಲು ಮತ್ತು ಬಳಸಲು ಅವಲಂಬಿಸಿದ್ದಾರೆ.
ಗ್ರಾಮದ ಸರ್ಕಾರಿ ಶಾಲೆಯಲ್ಲಿ ಉತ್ತಮವಾದ ಮಕ್ಕಳ ಹಾಜರಾತಿ ಇದೆ. ಆದರೆ ಸರಿಯಾದ ಆಟದ ಮೈದಾನ, ತರಗತಿ ಕೋಣೆಗಳ ಕೊರತೆ ಕಾಡುತ್ತಿದೆ. ಗ್ರಾಮದ ಮಧ್ಯ ಮತ್ತು ರಸ್ತೆ ಪಕ್ಕದಲ್ಲಿ ಶಾಲೆ ಇದೆ. ವಾಹನಗಳ ಕಿರಿಕಿರಿಯಿಂದ ಮಕ್ಕಳಿಗೆ ಅಭ್ಯಾಸದ ಕಡೆ ಗಮನ ಕೇಂದ್ರಿಕರಿಸಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಉತ್ತಮವಾದ ವಾತಾವರಣ ನಿರ್ಮಿಸಬೇಕು ಎಂಬುದು ಇಲ್ಲಿನ ಶಿಕ್ಷಣ ಪ್ರೇಮಿಗಳ ಒತ್ತಾಯವಾಗಿದೆ.
ನೈರ್ಮಲ್ಯ ಸಮಸ್ಯೆಯಿಂದ ವಿವಿಧ ಸಾಂಕ್ರಾಮಿಕ ರೋಗ ಹರಡುವ ಭಯದಲ್ಲಿ ಜನರು ಜೀವಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಸರಿಯಾದ ಚರಂಡಿ ನಿರ್ಮಿಸದೇ ಇರುವುದರಿಂದ ಕೊಳಚೆ ನೀರು ರಸ್ತೆಯಲ್ಲಿ ಹರಿದು ಮನೆ ಮುಂದಿನ ಅಂಗಳದಲ್ಲಿ ನಿಂತು ಕೆಟ್ಟ ವಾಸನೆ ಬೀರುತ್ತಿದೆ. ಇದರಿಂದಾಗಿ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಗ್ರಾಮದಲ್ಲಿ ರಸ್ತೆಸಂಪೂರ್ಣ ಹದಗೆಟ್ಟಿದೆ. ರಸ್ತೆ ಸಂಚಾರಕ್ಕೆ
ಯೋಗ್ಯವಲ್ಲದಂತಾಗಿದೆ.
ಎಲ್ಲೆಂದರಲ್ಲಿ ಆಳವಾದ ತಗ್ಗುಗಳು, ಜಲ್ಲಿಕಲ್ಲುಗಳು ಬಿದ್ದಿವೆ. ಹಾಗಾಗಿ ಪ್ರಯಾಣಿಕರು, ವಾಹನ ಸವಾರರು ಹರಸಾಹಸಪಡುತ್ತ ಸಂಚರಿಸುವುದು ಸಾಮಾನ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?