ಮೊಸಳೆ ಹಿಡಿಯದೆ ಅರಣ್ಯ ಸಿಬ್ಬಂದಿ ವಾಪಸ್‌

ಗೂಡೂರು ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ•30ಕ್ಕೂ ಹೆಚ್ಚು ಮೊಸಳೆ ಇರುವ ಶಂಕೆ

Team Udayavani, May 12, 2019, 11:45 AM IST

11-March-12

ಸೈದಾಪುರ: ಗೂಡೂರು ಸಮೀಪದ ಭೀಮಾ ನದಿ ಹೊಂಡದಲ್ಲಿ ಮೊಸಳೆಗಳಿರುವ ಸ್ಥಳ.

ಸೈದಾಪುರ: ಭೀಮಾ ನದಿ ತಗ್ಗು ಪ್ರದೇಶ ನೀರಿನಲ್ಲಿ ಬಿಡು ಬಿಟ್ಟಿರುವ ಮೊಸಳೆಗಳನ್ನು ಹಿಡಿಯದೇ ಅರಣ್ಯ ಇಲಾಖೆ ಸಿಬ್ಬಂದಿ ವಾಪಾಸ್ಸಾದ ಹಿನ್ನೆಲೆಯಲ್ಲಿ ಗೂಡೂರು ಸೇರಿದಂತೆ ನದಿ ದಡದ ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ.

ಕಳೆದ ಏ. 28ರಂದು ಗೂಡೂರು ಗ್ರಾಮದ ಬಸವಲಿಂಗಪ್ಪ (55) ಎಂಬ ವ್ಯಕ್ತಿ ಮೊಸಳೆ ಬಾಯಿಗೆ ಸಿಲುಕಿ ಸಾವನಪ್ಪಿದ್ದ. ಈ ಹಿನ್ನೆಲೆಯಲ್ಲಿ ಶುಕ್ರವಾರ ತಾಲೂಕು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್. ಬಾವಿಕಟ್ಟಿ ನೇತೃತ್ವದಲ್ಲಿ ಎಂಟು ಜನ ಪರಿಣಿತರ ತಂಡ ಮೊಸಳೆ ಹಿಡಿಯಲು ಆಗಮಿಸಿತ್ತು. ಕೆಲ ಗಂಟೆ ಹೊತ್ತು ವೀಕ್ಷಿಸಿ ಮೊಸಳೆಗಳನ್ನು ನೀರಿನಲ್ಲಿ ಹಿಡಿಯುವುದು ಕಷ್ಟ. ಅದರಲ್ಲಿಯೂ ಈ ಪ್ರದೇಶದಲ್ಲಿ ತಗ್ಗುಗಳಲ್ಲಿ ಹೆಚ್ಚಿನ ನೀರಿನ ಸಂಗ್ರಹವಾಗಿದೆ. ಇದರಿಂದ ಮೊಸಳೆ ಹಿಡಿಯಲು ಸಾಧ್ಯವಿಲ್ಲ. ಮೊಸಳೆಗಳು ಹೊಂಡಗಳಲ್ಲಿ ಅವಿತುಕೊಂಡಿದ್ದು, ಸ್ವಲ್ಪ ನೀರು ಖಾಲಿ ಮಾಡಿದ ನಂತರ ಅವುಗಳನ್ನು ಹಿಡಿಯಬಹುದು ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದರಿಂದಾಗಿ ಗ್ರಾಮಸ್ಥರಲ್ಲಿ ತೀವ್ರ ಆತಂಕ ಎದುರಾಗಿದೆ.

30ಕ್ಕೂ ಹೆಚ್ಚು ಮೊಸಳೆಗಳಿರುವ ಶಂಕೆ: ಗೂಡೂರು ಸಮೀಪದ ಭೀಮಾ ನದಿಯಲ್ಲಿ ಅನೇಕ ಹೊಂಡಗಳಿವೆ. ಹೆಚ್ಚಿನ ನೀರು ಸಂಗ್ರಹವಾಗಿರುವುದರಿಂದ ಈ ಪ್ರದೇಶದಲ್ಲಿ 30ಕ್ಕೂ ಹೆಚ್ಚು ಮೊಸಳೆಗಳಿವೆ ಎಂದು ಪರಿಣಿತರು ಶಂಕೆ ವ್ಯಕ್ತಪಡಿಸದ್ದಾರೆ.

ನಾವು ಒಂದೆರಡು ಮೊಸಳೆ ಇದ್ದರೆ ಹಿಡಿದು ಸ್ಥಳಾಂತರ ಮಾಡಬಹುದು. ಆದರೆ ಇಲ್ಲಿ ಇಷ್ಟೊಂದು ಮೊಸಳೆಗಳು ಇವೆ ಎಂದು ಊಹಿಸಿಕೊಂಡಿರಲ್ಲಿಲ್ಲ. ಅವುಗಳನ್ನು ಸ್ಥಳಾಂತರ ಮಾಡುವುದು ಕಷ್ಟ ಸಾಧ್ಯ ಎಂದು ಅರಣ್ಯ ಸಿಬ್ಬಂದಿ ತಿಳಿಸಿದರು.

ನಿರಾಸೆಯಿಂದ ಮನೆಗೆ ತೆರಳಿದ ಗ್ರಾಮಸ್ಥರು: ಭೀಮಾ ತೀರಕ್ಕೆ ಮೊಸಳೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬರುತ್ತಾರೆ ಎಂದು ಸುದ್ದಿ ತಿಳಿದು ಕೂತಹಲದಿಂದ ಗ್ರಾಮಸ್ಥರು ಆಗಮಿಸಿದ್ದರು. ಕೆಲ ಹೊತ್ತು ಕಾಯ್ದ ನಂತರ ಸಿಬ್ಬಂದಿ ಹಿಡಿಯಲು ಕಷ್ಟ ಸಾಧ್ಯ ಎಂದು ಹಿಂದಿರುಗಿದ ನಂತರ ಗ್ರಾಮಸ್ಥರು ಆತಂಕದಿಂದ ಮತ್ತು ನಿರಾಸೆಯಿಂದ ಮನೆಗೆ ತೆರಳಿದರು.

ಗೂಡೂರು ಸಮೀಪದ ಭೀಮಾ ನದಿಯಲ್ಲಿರುವ ಮೊಸಳೆಗಳನ್ನು ಹಿಡಿಯಲು ಪರಿಣಿತರನ್ನು ಕಳುಹಿಸಲಾಗಿತ್ತು. ಆದರೆ ಆ ಪ್ರದೇಶದಲ್ಲಿ 30ಕ್ಕೂ ಹೆಚ್ಚು ಮೊಸಳೆಗಳು ಇವೆ. ಅಲ್ಲದೇ ಹೊಂಡಗಳಲ್ಲಿ ಹೆಚ್ಚು ನೀರು ಸಂಗ್ರಹವಾಗಿರುವ ಹಿನ್ನ್ನೆಲೆಯಲ್ಲಿ ಅವುಗಳನ್ನು ಹಿಡಿದು ಸ್ಥಳಾಂತರಿಸುವುದು ಕಷ್ಟ ಸಾಧ್ಯ. ನದಿ ದಡದಲ್ಲಿ ಸೂಚನಾ ಫಲಕ ಮತ್ತು ಗ್ರಾಮಗಳಲ್ಲಿ ಡೊಂಗುರ ಹಾಕಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗುವುದು. ಗ್ರಾಮಸ್ಥರು ಜಾಗೃತಿಯಿಂದ ಈ ಕಡೆ ಬರದಂತೆ ಎಚ್ಚರಕ್ಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಬಸವರಾಜ,
ವಲಯ ಅರಣ್ಯ ಅಧಿಕಾರಿ ಯಾದಗಿರಿ

ಗೂಡೂರು ಗ್ರಾಮದ ಸಮೀಪ ಭೀಮಾ ನದಿ ದಡದಲ್ಲಿ ಇಂದಿಗೂ ನಾಲ್ಕರಿಂದ ಐದು ಮೊಸಳೆಗಳು ಇವೆ ಎಂದು ತಿಳಿದಿದ್ದೇವು. ಆದರೆ ಹಿಡಿಯಲು ಬಂದ ಅರಣ್ಯ ಸಿಬ್ಬಂದಿ ತಿಳಿಸಿರುವ ಹಾಗೆ 30ಕ್ಕೂ ಹೆಚ್ಚು ಮೊಸಳೆಗಳು ಇರುವುದರಿಂದ ನದಿ ತಟದಲ್ಲಿಯೇ ಗ್ರಾಮದ ನೂರಾರು ಜನರು ಮತ್ತು ದನಕರುಗಳು ನೀರಿಗಾಗಿ ನದಿಗೆ ಹೋಗಬೇಕಾಗುತ್ತದೆ. ಅಲ್ಲದೇ ನದಿ ಪಾತ್ರದ ಗ್ರಾಮಗಳಲ್ಲಿ ಜೀವನ ಸಾಗಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಆರಣ್ಯಾಧಿಕಾರಿಗಳು ಪುನರಾಲೋಚಿಸಿ ಮೊಸಳೆಗಳನ್ನು ಸ್ಥಳಾಂತರಿಸುವಂತೆ ಮನವಿ ಮಾಡಿಕೊಳ್ಳುತ್ತೇವೆ.
ಆಂಜನೇಯ ರಾಂಪುರ,
ಮೃತ ವ್ಯಕ್ತಿ ಸಂಬಂಧಿ

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.