ಗೂಡರ ಬ್ಯಾರೇಜ್ ಭರ್ತಿ
ಭೀಮಾ ನದಿಗೆ ಹೆಚ್ಚಿನ ನೀರು-ಗ್ರಾಮಸ್ಥರ ಆತಂಕ
Team Udayavani, Aug 9, 2019, 11:45 AM IST
ಸೈದಾಪುರ: ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಗುರುಮಠಕಲ್ ವೃತ್ತ ನಿರೀಕ್ಷಕ ಶ್ರೀನಿವಾಸ ಅಲಾಪುರ ನೀರು ಹರಿವು ವೀಕ್ಷಿಸಿದರು.
ಸೈದಾಪುರ: ಸನ್ನತಿ ಬ್ಯಾರೇಜ್ನಿಂದ ಭೀಮಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಗೂಡೂರು-ಜೋಳದಡಗಿ ಬ್ರೀಜ್ ಕಂ ಬ್ಯಾರೇಜ್ ಭರ್ತಿಯಾಗಿದೆ. ಇದರಿಂದ ನದಿ ತೀರದ ಗ್ರಾಮಸ್ಥರಿಗೆ ಆತಂಕ ಎದುರಾಗಿದೆ.
ಗೂಡೂರು ಸಮೀಪದ ಬ್ಯಾರೇಜ್ಗೆ ಗುರುವಾರ ಮಧ್ಯಾಹ್ನದ ವೇಳೆಗೆ ನೀರು ಬಂದಿದೆ. ಬ್ಯಾರೇಜ್ 0.946 ಟಿಎಂಸಿ ಅಡಿ ನೀರಿನ ಸಾಮರ್ಥ್ಯ ಹೊಂದಿದೆ. ಈಗಾಗಲೇ ಭರ್ತಿಯಾಗಿ ಉಳಿದ ನೀರನ್ನು ನದಿಗೆ ಹರಿಸಲಾಗುತ್ತದೆ.
ತಾಲೂಕು ಮತ್ತು ಜಿಲ್ಲಾಡಳಿತದ ವತಿಯಿಂದ ಮುಂಜಾಗೃತ ಕ್ರಮವಾಗಿ ಬುಧವಾರ ಗ್ರಾಮಗಳಲ್ಲಿ ಡಂಗುರು ಹಾಕಿ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಮಿನುಗಾರರನ್ನು ಸ್ಥಳಾಂತರಿಸಲಾಗಿದೆ. ಕಂದಾಯ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಗ್ರಾಮಸ್ಥರಿಗೆ ಸಲಹೆ ಸೂಚನೆ ನೀಡುತ್ತಿದ್ದಾರೆ.
ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಗುರುಮಠಕಲ್ ವೃತ್ತ ನಿರೀಕ್ಷಕ ಶ್ರೀನಿವಾಸ ಅಲಾಪುರ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಸೈದಾಪುರ ಪಿಎಸ್ಐ ಎನ್.ವೈ. ಗುಂಡುರಾವ್, ಗುರುಸ್ವಾಮಿ ಸೇರಿದಂತೆ ಕಂದಾಯ, ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್