ಗುರುವಿನಿಂದ ಜ್ಞಾನ ಮಾತ್ರ ಅಪೇಕ್ಷಿಸಿ
ಗುರು ನೀಡಿದ ಸಂದೇಶ ಅರಿತು-ಸತ್ಕಾರ್ಯ ಕೈಗೊಂಡು ಮನಃಶಾಂತಿ ಮಾಡಿಕೊಳ್ಳಿ
Team Udayavani, Jul 18, 2019, 11:20 AM IST
ಸೈದಾಪುರ: ಸಿದ್ಧಚೇತನಾಶ್ರಮ ಮಠದ ಪೀಠಾಧಿಪತಿ ಸೋಮೇಶ್ವರಾನಂದ ಶ್ರೀಗಳಿಗೆ ತುಲಾಭಾರ ಮಾಡಲಾಯಿತು.
ಸೈದಾಪುರ: ಶಿಷ್ಯರು ಗುರುವಿನಿಂದ ಜ್ಞಾನ ಮಾತ್ರ ಅಪೇಕ್ಷಿಸಿ. ಇದರಿಂದ ಗುರುವಿನ ಸ್ಥಾನ ಉನ್ನತ ಮಟ್ಟಕ್ಕೆ ಹೋಗಲು ಸಾಧ್ಯ ಎಂದು ಸೋಮೇಶ್ವರಾನಂದ ಶ್ರೀ ಹೇಳಿದರು.
ಪಟ್ಟಣದ ಸಿದ್ಧಚೇತನಾಶ್ರಮ ಸಿದ್ಧಾರೂಢ ಮಠದಲ್ಲಿ ಗುರು ಪೂರ್ಣಿಮ ನಿಮಿತ್ತ ಗುರುವಂದನಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಪರಮಾತ್ಮನ ಅವತಾರ ರೂಪ ಗುರು. ಆ ಸ್ಥಾನದಲ್ಲಿರುವ ಯಾವ ವ್ಯಕ್ತಿಯನ್ನಾದರು ಗೌರವದಿಂದ ಕಾಣಿ. ಸ್ಥಳ, ಸಮಯ ಹಾಗೂ ವ್ಯಕ್ತಿ ಬದಲಾದರು ಗುರುವಿನ ಸ್ಥಾನ ಬದಲಾಗದು. ಅಜ್ಞಾನದ ಕತ್ತಲನ್ನು ದೂರ ಮಾಡಿ, ವಿವೇಕದ ಬೆಳಕು ಹರಿಸಿ ವ್ಯಕ್ತಿಯನ್ನು ಸುಜ್ಞಾನದ ಕಡೆ ಕೊಂಡಯ್ಯುವ ಮಾಹನ್ ದೈವಿ ಗುರು ಎಂದು ತಿಳಿಸಿದರು.
ಗುರು ನೀಡಿದ ಸಂದೇಶಗಳನ್ನು ಅರಿತು ಸತ್ಕಾರ್ಯಗಳನ್ನು ಮಾಡುತ್ತಾ ಮನಃ ಶಾಂತಿಯನ್ನು ಪಡೆಯಬೇಕು. ಸನಾತನ ಧರ್ಮ ಸಂಸ್ಕೃತಿಯಲ್ಲಿ ತಂದೆ-ತಾಯಿ ನಂತರದ ಸ್ಥಾನವನ್ನು ಗುರುವಿಗೆ ನೀಡಲಾಗಿದೆ ಎಂದು ತಿಳಿಸಿದರು.
ನಂತರ ಸೈದಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರಿಂದ ಶ್ರೀ ಮಠದ ಪೀಠಾಧಿಪತಿ ಸೋಮೇಶ್ವರಾನಂದ ಶ್ರೀ ಸ್ವಾಮೀಜಿ ಅವರಿಗೆ ತುಲಾಭಾರ ಮತ್ತು ಪಾದ ಪೂಜೆಯ ಮೂಲಕ ಗುರುವಂದನಾ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ