ಜೋತು ಬಿದ್ದ ವಿದ್ಯುತ್‌ ತಂತಿ

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಸೋರಿಕೆ ತಡೆಗಟ್ಟುವ ತಂತಿಗಳು ನಿರುಪಯುಕ್ತ

Team Udayavani, Nov 29, 2019, 2:40 PM IST

29-November-16

„ಭೀಮಣ್ಣ ಬಿ. ವಡವಟ್‌

ಸೈದಾಪುರ: ವಿದ್ಯುತ್‌ ಅವಶ್ಯಕತೆ ಇರುವಷ್ಟೇ ಅಪಾಯ ಕೂಡ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಸಮರ್ಪಕ ವಿದ್ಯುತ್‌ ಪೂರೈಕೆ ಮಾಡುವ ಜತೆಗೆ ಸುರಕ್ಷತೆಗೆ ಒತ್ತು ನೀಡಬೇಕಾದ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ಜನರು ಜೀವ ಕೈಯಲ್ಲಿ ಹಿಡಿದು ಕಾಲ ಕಳೆಯುತ್ತಿರುವ ಸನ್ನಿವೇಶ ಗ್ರಾಮದಲ್ಲಿ ಎದುರಾಗಿದೆ.

ಪಟ್ಟಣದಲ್ಲಿನ ಪೊಲೀಸ್‌ ಕಾಲೋನಿ ಹಾಗೂ ತಾಯಿ ಕಾಲೋನಿ ಸೇರಿದಂತೆ ಇತರ ಪ್ರದೇಶಗಳಲ್ಲಿ ವಿದ್ಯುತ್‌ ತಂತಿಗಳು ಜೋತು ಬಿದ್ದಿವೆ. ಅಲ್ಲದೇ ಪೊಲೀಸ್‌ ವಸತಿ ಗೃಹಗಳಿಗೆ ಹತ್ತಿರದಲ್ಲಿಯೇ ತಂತಿಗಳಿವೆ. ಜೆಸ್ಕಾಂ ಅಧಿಕಾರಿಗಳು ಮಾತ್ರ ತಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂಬಂತೆ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಟ್ಟಣದಲ್ಲಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ದಶಕಗಳ ಹಿಂದಿನ ಶಿಥಿಲ ವಿದ್ಯುತ್‌ ಕಂಬ ಹಾಗೂ ತಂತಿ ಬದಲಿಸಬೇಕು ಎಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ. ಆದರೆ ಜೆಸ್ಕಾಂ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಜನರ ಸಮಸ್ಯೆಗಳಿಗೆ ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ವಿದ್ಯುತ್‌ ಉಳಿತಾಯದ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಾದ ಗ್ರಾಪಂನಿಂದಲೇ ವಿದ್ಯುತ್‌ ಪೋಲಾಗುತ್ತಿದೆ ಎಂಬುದಕ್ಕೆ ಸೈದಾಪುರ ಪಟ್ಟಣದಲ್ಲಿ ದಿನವಿಡಿ ಉರಿಯುವ ಬೀದಿ ದೀಪಗಳೇ ಉತ್ತಮ ಉದಾಹರಣೆಯಾಗಿವೆ. ಇಲ್ಲಿನ ವಿದ್ಯುತ್‌ ಕಂಬಗಳಿಗೆ ಹಾಕಲಾದ ಬಲ್ಬ್ಗಳು ಕರೆಂಟ್‌ ಬಂದ ಕೂಡಲೇ ಬೆಳಗಿ ಮತ್ತೆ ಕರೆಂಟ್‌ ಹೋದಾಗಲೇ ಆರುತ್ತವೆ. ವಿದ್ಯುತ್‌ ಬಲ್ಬ್ ಗಳನ್ನು ನಿಯಂತ್ರಿಸಲು ಜೆಸ್ಕಾಂ ಅಧಿಕಾರಿಗಳು ಹಾಗೂ ಗ್ರಾಪಂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಪರಿಣಾಮ ಅನಾವಶ್ಯಕವಾಗಿ ವಿದ್ಯುತ್‌ ಪೋಲಾಗುತ್ತಿದೆ.

ವಿದ್ಯುತ್‌ ಸೋರಿಕೆ ತಡೆಗಟ್ಟುವ ತಂತಿಗಳು ನಿರುಪಯುಕ್ತವಾಗಿವೆ. ವಿದ್ಯುತ್‌ ಸೋರಿಕೆ ಮತ್ತು ಅಪಘಾತ ತಡೆಗಟ್ಟಲು ಪಟ್ಟಣದ ಅನೇಕ ಕಡೆ ನೂತನ ತಂತಿ ಹಾಕಲಾಗಿದೆ. ಆದರೆ ಹಾಕಿರುವ ಗುತ್ತಿಗೆದಾರರ ಕಳಪೆ ಕಾರ್ಯ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವುಗಳು ನಿರುಪಯುಕ್ತವಾಗಿದೆ.ಸೈದಾಪುರದಲ್ಲಿ ವಿದ್ಯುತ್‌ ತಂತಿಗಳು ಜೋತು ಬಿದ್ದಿವೆ.

ಸ್ವಲ್ಪ ಗಾಳಿ ಬೀಸಿದರೂ ಬೆಂಕಿ ಕಾಣಿಸಿಕೊಳ್ಳುತ್ತದೆ. ಅದರಲ್ಲಿಯೂ ಪೊಲೀಸ್‌ ಕಾಲೋನಿಯಲ್ಲಿರುವ ತಂತಿಗಳು ಅನೇಕ ಬಾರಿ ಕಡಿದು ಬಿದ್ದಿವೆ. ಇದರ ಬಗ್ಗೆ ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಇನ್ನೂ ಕೂಡ ಬಗೆಹರಿಸಿಲ್ಲ. ಇನ್ನು ಮುಂದಾದರು ಜೋತು ಬಿದ್ದಿರುವ ತಂತಿಗಳನ್ನು ಬಿಗಿಗೊಳಿಸಬೇಕು.
ಭೀಮಣ್ಣ ಮಡಿವಾಳಕರ್‌
ಸ್ಥಳೀಯ ನಿವಾಸಿ

ಸೈದಾಪುರ ಪೊಲೀಸ್‌ ಕಾಲೋನಿಗೆ ಜೆಸ್ಕಾಂ ಸಿಬ್ಬಂದಿ ಕಳುಹಿಸಿ ಅಲ್ಲಿರುವ ಸಮಸ್ಯೆ ಪರಿಹರಿಸಲು ಸೂಚಿಸುತ್ತೇನೆ. ಸಮಯಕ್ಕೆ ತಕ್ಕಂತೆ ಬೀದಿ ದೀಪಗಳನ್ನು ನಿಯಂತ್ರಿಸುವುದು ಗ್ರಾಪಂ ಜವಾಬ್ದಾರಿ. ಆದರೂ ಈ ಬಗ್ಗೆ ಗ್ರಾಪಂ ಅಧ್ಯಕ್ಷರು ಮತ್ತು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುತ್ತೇನೆ.
ವಿಶ್ವನಾಥರೆಡ್ಡಿ
ಜೆಸ್ಕಾಂ ಎಇಇ ಯಾದಗಿರಿ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.