ಆಧಾರ್ ನೋಂದಣಿಗೆ ಪರದಾಟ
ಹಣ ವಸೂಲಿ ಆರೋಪ•ಕ್ರಮಕ್ಕೆ ಆಗ್ರಹಿಸಿ ಉಪ ತಹಶೀಲ್ದಾರ್ಗೆ ಮನವಿ
Team Udayavani, Jun 14, 2019, 11:22 AM IST
ಸೈದಾಪುರ: ಪಟ್ಟಣದ ಆಧಾರ್ ನೋಂದಣಿ ಕೇಂದ್ರ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಪ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಸೈದಾಪುರ: ಸರಕಾರದ ನಿಯಮಗಳನ್ನು ಗಾಳಿಗೆ ತೂರಿದ ಆಧಾರ್ ನೋಂದಣಿ ಸಿಬ್ಬಂದಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪಟ್ಟಣದ ಅಟಲ್ ಜೀ ಜನ ಸ್ನೇಹಿ ಕೇಂದ್ರದ ಆಧಾರ ನೋಂದಣಿ ಸಿಬ್ಬಂದಿ ಸರಿಯಾದ ಸಮಯಕ್ಕೆ ಬಾರದೆ ಇರುವುದು ಮತ್ತು ಒಂದು ಆಧಾರ್ ನೋಂದಣಿಗೆ ಬೆಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾರೆ. ಈ ವಿಚಾರವಾಗಿ ಅನೇಕ ಬಾರಿ ಮೌಖೀಕವಾಗಿ ಮತ್ತು ಲಿಖೀತವಾಗಿ ಅಧಿಕಾರಿಗಳಿಗೆ ತಿಳಿಸಿದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜನರು ದೂರಿದ್ದಾರೆ.
ಈಚೆಗೆ ಪಡಿತರ ಚೀಟಿಗೆ ಆಧಾರ್ ಜೋಡಣೆ ಮಾಡಿಸಬೇಕು ಎಂದು ಸರಕಾರ ಆದೇಶಿಸಿದ ಹಿನ್ನೆಲೆಯಲ್ಲಿ ದಿನನಿತ್ಯ ನೂರಾರು ಜನರು ಆಧಾರ್ ನೋಂದಣಿಗೆ ಆಗಮಿಸುತ್ತಿದ್ದಾರೆ. ಆದರೆ ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ನೋಂದಣಿ ಸಿಬ್ಬಂದಿಯ ಬೇಜವಾಬ್ದಾರಿಯಿಂದ ಜನರು ದಿನನಿತ್ಯ ಅಲೆದಾಡುವ ಪರಿಸ್ಥಿತಿ ಉಂಟಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಪಟ್ಟಣದ ಉಪ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು. ಮಲ್ಲಿಕಾರ್ಜುನ ಸಂಗ್ವಾರ್, ನಾಗರಾಜ, ಹಣಮಂತ ಗೂಡೂರ, ಶಾಹಿದ್ ಕೂಡಲೂರ ಸೇರಿದಂತೆ ರಾಂಪೂರ, ಕೊಂಡಪೂರ, ಸಂಗ್ವಾರ್, ಮುನಗಲ್ ಸೇರಿದಂತೆ ವಿವಿಧ ಗ್ರಾಮಸ್ಥರು ನೂರಾರೂ ಸಂಖ್ಯೆಯಲ್ಲಿ ಆಗಮಿಸಿದ್ದರು.
ನಾನು ವಾರದಿಂದ ಆಧಾರ್ ತಿದ್ದುಪಡಿಗೆ ಬೆಳಗ್ಗೆ 5:00 ಗಂಟೆಗೆ ಬರುತ್ತಿದ್ದೇನೆ. ಆದರೆ ಇಲ್ಲಿನ ಕಂಪ್ಯೂಟರ್ ಆಪರೇಟರ್ ಹನ್ನೊಂದು ಗಂಟೆಗೆ ಆಗಮಿಸುತ್ತಾರೆ. ಇಂತಹ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು.
•ಸಾಬರೆಡ್ಡಿ ನಾಯಕ,
ಸೈದಾಪುರ ನಿವಾಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು