ಮಹಿಳೆಯರ ಪಾತ್ರ ಹಿರಿದು: ರಾಘವೇಂದ್ರ
ಮಹಿಳೆಯರಿಗೆ ಆತ್ಮಸ್ಥೈರ್ಯ ನೀಡಿ
Team Udayavani, Jul 22, 2019, 11:01 AM IST
ಸೈದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕೇಂದ್ರದಿಂದ ನಡೆದ ಮಹಿಳಾ ಒಕ್ಕೂಟಗಳ ನಾಯಕತ್ವದ ತರಬೇತಿ ಕಾರ್ಯಕ್ರಮವನ್ನು ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಉದ್ಘಾಟಿಸಿದರು.
ಸೈದಾಪುರ: ಮಹಿಳೆಯರು ಪುರಷರಕ್ಕಿಂತ ಯಾವುದರಲ್ಲಿಯೂ ಕಡಿಮೆ ಇಲ್ಲದಂತೆ ಇರುವ ಈ ಕಾಲದಲ್ಲಿ ಗ್ರಾಮೀಣ ಭಾಗದ ಮಹಿಳೆಯರಿಗೆ ಆರ್ಥಿಕವಾಗಿ ಸಭಲರಾಗಲು ವಿವಿಧ ರೀತಿಯ ಒಕ್ಕೂಟಗಳ ನಾಯಕತ್ವದ ಅಭಿವೃದ್ಧಿ ಪಡಿಸುವುದರಿಂದ ಆ ಗ್ರಾಮದ ಮಹಿಳೆಯರು ಸದೃಢವಾಗಲು ಸಾಧ್ಯವಿದೆ ಎಂದು ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಹೇಳಿದರು.
ಪಟ್ಟಣದ ಎಪಿಎಂಸಿ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಕೇಂದ್ರದಿಂದ ಏರ್ಪಡಿಸಿದ್ದ ಮಹಿಳಾ ಒಕ್ಕೂಟಗಳ ನಾಯಕತ್ವದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಂದು ಕುಟುಂಬವನ್ನು ಉತ್ತಮವಾಗಿ ನಿರ್ವಹಿಸಿಕೊಂಡು ಹೊಗುವಲ್ಲಿ ಮಹಿಳೆಯರ ಪಾತ್ರ ಹಿರಿದು. ಈ ದಿಸೆಯಲ್ಲಿ ಧರ್ಮಸ್ಥಳ ಗ್ರಾಮಭಿವೃದ್ಧಿ ಸಂಸ್ಥೆಯು ಅನೇಕ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ನಿರ್ಮಾಣ ಮಾಡಿ ಅವರಿಗೆ ವಿವಿಧ ಕೌಶಲ್ಯಗಳನ್ನು ತರಬೇತಿ, ಮಾರ್ಗದರ್ಶನ, ನಾಯಕತ್ವ ತರಬೇತಿ ಹಾಗೂ ಆರ್ಥಿಕವಾಗಿ ಸಹಾಯ ಮಾಡುವುದರ ಮೂಲಕ ಮಹಿಳೆಯರಿಗೆ ಆತ್ಮಸ್ಥೈರ್ಯವನ್ನು ನೀಡಿ ಆರ್ಥಿಕವಾಗಿ ಸದೃಢವಾಗಲು ಸಹಾಯ ನೀಡುತ್ತಿದೆ. ಅದೆ ರೀತಿಯಾಗಿ ಈ ತರಬೇತಿಯಲ್ಲಿ ಒಕ್ಕೂಟಗಳ ನಿರ್ವಹಣೆ ಮತ್ತು ಸಭೆಗಳ ಮಾರ್ಗಸೂಚಿಗಳ ಬಗ್ಗೆ ಅರಿತು. ನಿಮ್ಮ ಒಕ್ಕೂಟಗಳನ್ನು ಆರ್ಥಿಕವಾಗಿ ಸದೃಢವಾಗಲು ಪ್ರತಿಯೊಬ್ಬ ಸದಸ್ಯರು ಸಹಕರಿಸಬೇಕು ಎಂದು ತಿಳಿಸಿದರು.
ನಂತರ ಮಾತನಾಡಿದ ಯೋಜನೆಯ ಜಿಲ್ಲಾ ಪ್ರಬಂಧಕ ಪುನೀತ ಮಾತನಾಡಿದರು.
ಸೈದಾಪುರ ವಲಯ ಮೇಲ್ವಚಾರಕ ದಾದಾಖಲಂದರ್, ಸೇವಾ ಪ್ರತಿನಿಧಿ ಶರಣು ನಾಚವರ್, ರಡ್ಡೆಪ್ಪ, ಭಾಗ್ಯಶ್ರೀ ಸಜ್ಜನ್, ರೇಣುಕಾ, ಲಕ್ಷೀ, ಪಾರ್ವತಿ ಸೇರಿದಂತೆ ಸೈದಾಪುರ, ಬಾಡಿಯಾಲ, ಕಡೇಚೂರ, ದುಪ್ಪಲ್ಲಿ, ಮಾಧ್ವಾರ, ಕಣೇಕಲ್, ನೀಲಹಳ್ಳಿ, ಕೂಡಲೂರ, ಗ್ರಾಮದ ಸ್ವ-ಸಹಾಯ ಗುಂಪುಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್