20ರಂದು ಹಡಪದ ಅಪ್ಪಣ್ಣನವರ ಜಯಂತ್ಯುತ್ಸವ ಆಚರಣೆ
ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷ ಎಚ್. ದೊಡ್ಡಬಸಪ್ಪ ಮಾಹಿತಿ
Team Udayavani, Jul 14, 2019, 4:23 PM IST
ಸಂಡೂರು: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅಧ್ಯಕ್ಷ ಎಚ್. ದೊಡ್ಡಬಸಪ್ಪ ಮಾತನಾಡಿದರು.
ಸಂಡೂರು: ಹಡಪದ ಅಪ್ಪಣ್ಣನವರ ಜಯಂತ್ಯುತ್ಸವವನ್ನು ಜುಲೈ 20ರಂದು ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಆಚರಿಸಲಾಗುವುದು ಎಂದು ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷ ಎಚ್. ದೊಡ್ಡಬಸಪ್ಪ ತಿಳಿಸಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಡಪದ ಅಪ್ಪಣ್ಣ ಜಯಂತ್ಯುತ್ಸವದ ಅಂಗವಾಗಿ ತಾಲೂಕು ಹಡಪದ ಸಮಾಜದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿ, ಅನ್ನದಾನ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಯಂತ್ಯುತ್ಸವ ಆಚರಿಸಲಾಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಸಂಡೂರು ವಿರಕ್ತಮಠದ ಪ್ರಭು ಮಹಾಸ್ವಾಮಿಗಳು, ಯಶವಂತನಗರದ ಶ್ರೀ ಗುರುಸಿದ್ದೇಶ್ವರ ಸಂಸ್ಥಾನ ವಿರಕ್ತಮಠದ ಗಂಗಾಧರ ದೇವರು ವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಈ. ತುಕರಾಮ ವಹಿಸುವರು. ಉದ್ಘಾಟನೆಯನ್ನು ಎಸ್ಪಿಎಸ್ ಬ್ಯಾಂಕ್ ಅಧ್ಯಕ್ಷ, ವೆಸ್ಕೋ ಕಂಪನಿ ಮಾಲೀಕ ಕೆ.ಎಸ್. ನಾಗರಾಜ ನೆರವೇರಿಸುವರು. ಮೆರವಣಿಗೆಯಲ್ಲಿ ವೆಂಕಟರಾವ್ ಘೋರ್ಪಡೆ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಎಂ. ಸಿದ್ದೇಶ್ ಹಾಗೂ ತಾಲೂಕಿನ ಎಲ್ಲ ಕಚೇರಿ ಮುಖ್ಯಸ್ಥರು, ಬಿ.ನಾಗನಗೌಡ, ಗುಡೇಕೋಟೆ ನಾಗರಾಜ, ನಾಡೋಜ ವಿ.ಟಿ. ಕಾಳೇ, ಕಲಾವಿದರಾದ ಡಾ. ವೃಷಭೇಂದ್ರ ಆಚಾರ್ ಇತರ ಗಣ್ಯರು ಅಗಮಿಸುವರು.
ವಡ್ಡಿನಕಟ್ಟೆ ವಸತಿ ಶಾಲೆ ಪ್ರಾಚಾರ್ಯ ಎಚ್.ಕೃಷ್ಣಪ್ಪ ಬೈರಾಪುರ ಉಪನ್ಯಾಸ ನೀಡುವರು. ಸಂಗೀತ ಸೇವೆಯನ್ನು ಕಲಾವಿದರಾದ ಎಚ್.ಕುಮಾರಸ್ವಾಮಿ ಸಂಗಡಿಗರು ನೇರವೇರಿಸುವರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜದ ಸಲಹೆಗಾರರಾದ ಎಚ್. ಕುಮಾರಸ್ವಾಮಿ ಮಾತನಾಡಿ, ಕಾರ್ಯಕ್ರಮವನ್ನು ಅದ್ಧೂರಿಯಾಗಿ ನೇರವೇರಿಸಲಾಗುವುದು. ಬೆಳಿಗ್ಗೆ 9 ಗಂಟೆ ಹಡಪದ ಆಪ್ಪಣ್ಣನವರ ಭಾವಚಿತ್ರದ ಮೆರವಣಿಗೆ ವಿಶೇಷ ಕಲಾತಂಡಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ನಡೆಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ಎಚ್.ದೊಡ್ಡಬಸಪ್ಪ, ಪಂಪಾಪತಿ, ಎಸ್.ಎಚ್.ಗಣೇಶ್, ಕುಮಾರಸ್ವಾಮಿ ಭುಜಂಗನಗರ, ಎಚ್.ಕಾರ್ತಿಕ, ಬಸವರಾಜ, ಮಲ್ಲಿಕಾರ್ಜುನ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ