ತಿರಸ್ಕೃತ ಅರ್ಜಿ ಮರು ಪರಿಶೀಲಿಸಿ

ಕೃಷಿ ಚಟುವಟಿಕೆ ಬಗ್ಗೆ ಮಾಹಿತಿ ಸಂಗ್ರಹಿಸಿ •ಪಿಡಿಒಗಳಿಗೆ ಸೂಚನೆ

Team Udayavani, Jun 13, 2019, 11:53 AM IST

13-June-15

ಸಂಡೂರು: ರೈತರ, ಅರಣ್ಯ ಹಕ್ಕು ಸಮಿತಿ ಸದಸ್ಯರ, ಪಿಡಿಒಗಳ ಸಭೆಯಲ್ಲಿ ತಹಶೀಲ್ದಾರ್‌ ಮಾತನಾಡಿದರು.

ಸಂಡೂರು: ಅರಣ್ಯ ಹಕ್ಕು ಸಮಿತಿಯ ಅಡಿಯಲ್ಲಿ ಅರ್ಜಿ ಹಾಕಿದ ರೈತರ ಅರ್ಜಿಗಳು ತಿರಸ್ಕೃತಗೊಂಡಿದ್ದು, ಅವುಗಳನ್ನು ಪುನರ್‌ ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಆದೇಶದಂತೆ ತಾಲೂಕಿನ ಎಲ್ಲ ಪಿಡಿಒಗಳು, ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ ಉನ್ನತಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಹಶೀಲ್ದಾರ್‌ ಸಿದ್ದೇಶ್‌ ತಿಳಿಸಿದರು.

ಪಟ್ಟಣದ ತಾಪಂ ಅವರಣದಲ್ಲಿ ನಡೆದ ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಹಾಕಿದ ರೈತರು, ವಿವಿಧ ಸಂಘಟನೆಗಳು, ತಾಲೂಕಿನ ಎಲ್ಲ ಪಿಡಿಒಗಳು, ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರೈತರು ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದಾರೆ. ಅವರಿಗೆ ನ್ಯಾಯ ಕೊಡುವ ರೀತಿಯಲ್ಲಿ ಕಡ್ಡಾಯವಾಗಿ ಪ್ರತಿಯೊಬ್ಬ ಪಿಡಿಒಗಳು ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಸ್ಥಳಕ್ಕೆ ಭೇಟಿ ನೀಡಿ ಪುನರ್‌ ಪರಿಶೀಲಿಸಿ ಸೂಕ್ತ ದಾಖಲೆ, ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಬೇಕು. ಕಾರಣ ಅವರು ಆ ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಿದ ಬಗ್ಗೆ ಮತ್ತು ಎಷ್ಟು ದಿನಗಳಿಂದ ನಡೆಸಿದ್ದಾರೆ ಎಂಬ ಬಗ್ಗೆಯೂ ಸಹ ಸೂಕ್ತ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ತಕ್ಷಣ ಮಾಡಬೇಕು ಎಂದು ತಿಳಿಸಿದರು.

ಇಒ ಜೆ.ಎಂ. ಅನ್ನದಾನಯ್ಯ ಸ್ವಾಮಿ ಮಾತನಾಡಿ, ರೈತರು ತಮ್ಮಲ್ಲಿರುವ ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಒದಗಿಸಬೇಕು. ಅಲ್ಲದೆ ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ವಿಶೇಷ ಸಮಿತಿಗಳನ್ನು ಸಹ ರಚಿಸಲಾಗಿದೆ. ಅವುಗಳ ಮೂಲಕ ಸಂಬಂಧಪಟ್ಟ ಅಧಿಕಾರಿಗಳಿಗೆ ದಾಖಲೆಗಳೊಂದಿಗೆ ಸಲ್ಲಿಸಿದ್ದು, ಅವುಗಳಲ್ಲಿ ದಾಖಲೆಗಳ ಕೊರತೆ ಮತ್ತು ಇತರ ಕಾರಣಗಳಿಂದ ತಿರಸ್ಕೃತಗೊಳಿಸಲಾಗಿತ್ತು. ಅದರೆ ಈಗ ಕೋರ್ಟ್‌ ಆದೇಶದಂತೆ ಮತ್ತೂಮ್ಮೆ ಪರಿಶೀಲಿಸಲಾಗುತ್ತಿದ್ದು, ರೈತರು ಸೂಕ್ತ ಅಂಶ ನೀಡಬೇಕು. ಅದರಂತೆ ಪರಿಶೀಲಿಸಿ ವರದಿ ನೀಡಬೇಕು ಎಂದು ಪಿಡಿಒಗಳಿಗೆ ತಿಳಿಸಿದರು.

ವಲಯ ಅರಣ್ಯಾಧಿಕಾರಿ ದಾದಾ ಖಲಂದರ ಮಾತನಾಡಿ, ಇಲಾಖೆಗೆ ಸಲ್ಲಿಸಲಾದ ದಾಖಲೆ ಪರಿಶೀಲಿಸಿ ನಿಯಮಾನುಸಾರವೇ ವರದಿ ಸಲ್ಲಿಸಲಾಗುವುದು. ಯಾವುದೇ ಕಾರಣಕ್ಕೂ ತಾರತಮ್ಯವಾಗಲಿ, ಅಕ್ರಮವಾಗಲಿ, ರೈತರಿಗೆ ಮೋಸವಾಗಲಿ ಮಾಡುತ್ತಿಲ್ಲ. ಸರ್ಕಾರದ ನಿಯಮದ ಪ್ರಕಾರವೇ ವರದಿ ನೀಡಲಾಗುವುದು. ದಾಖಲಾತಿಗಳನ್ನು ಪರಿಶೀಲನೆ ಸಹ ಮಾಡಲಾಗುವುದು ಎಂದರು. ಜೂ.6ರಂದು ಕರ್ನಾಟಕ ಪ್ರಾಂತ ರೈತ ಸಂಘ, ಸಂಡೂರು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದ ಎಲ್ಲ ರೈತ ಮುಖಂಡರಾದ ಜಿಲ್ಲಾಧ್ಯಕ್ಷ ವಿ.ಎಸ್‌. ಶಿವಶಂಕರ, ಯು.ತಿಪ್ಪೇಸ್ವಾಮಿ, ಎ.ಸ್ವಾಮಿ ಇತರ ರೈತರು ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ರೈತರಿಗೆ ಉಂಟಾಗಿರುವ ಸಮಸ್ಯೆಗಳು, ಅರಣ್ಯ ಹಕ್ಕು ಸಮಿತಿಯಲ್ಲಿ ಕೈಗೊಳ್ಳಬೇಕಾದ ನಿಯಮಗಳು ಮತ್ತು ಅಧಿಕಾರಿಗಳು ತೆಗೆದುಕೊಂಡ ತಪ್ಪು ನಿರ್ಧಾರಗಳಿಂದ ರೈತರಿಗೆ ಉಂಟಾಗಿರುವ ಸಂಕಷ್ಟ ಸಹ ತಿಳಿಸಿದರು. ಅಂತಿಮವಾಗಿ ಮತ್ತೂಮ್ಮೆ ಪರಿಶೀಲಿಸಿ ರೈತರಿಗೆ ನ್ಯಾಯ ಕೊಡಬೇಕು ಎಂದು ಮನವಿ ಮಾಡಿಕೊಂಡರು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.