ಸ್ಥಳೀಯ ಚುನಾವಣೆ: ವಿವಿಧೆಡೆ ಕೈಕೊಟ್ಟ ಮತಯಂತ್ರ, ಪರದಾಟ

ಬೇರೆ ಮತ ಯಂತ್ರ ಅಳವಡಿಸಿ ಮತ್ತೆ ಮತದಾನ ಆರಂಭ ,ಮಳೆ ನೀರಿನಿಂದ ತುಂಬಿಕೊಂಡಿದ್ದ 2ನೇ ವಾರ್ಡಿನ ಮತಗಟ್ಟೆ ಆವರಣ

Team Udayavani, May 30, 2019, 11:55 AM IST

30-May-19

ಯಳಂದೂರು ಪಟ್ಟಣದ ಗೌತಮ್‌ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 4 ನೇ ವಾರ್ಡಿನ ಮತಗಟ್ಟೆಯಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಇದನ್ನು ದುರಸ್ತಿ ಪಡಿಸಲು ಯತ್ನಿಸುತ್ತಿರುವ ಚುನಾವಣಾ ಸಿಬ್ಬಂದಿ

ಸಂತೆಮರಹಳ್ಳಿ: ಯಳಂದೂರು ಪಟ್ಟಣ ಪಂಚಾಯಿತಿಗೆ ಬುಧವಾರ ನಡೆದ ಚುನಾವಣೆಯು ಶಾಂತಿಯುತವಾಗಿ ನೆರವೇರಿತು. ಪಟ್ಟಣದ 4ನೇ ವಾರ್ಡಿನಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಮತದಾನದಲ್ಲಿ 1 ಗಂಟೆ ವಿಳಂಬವಾದ ಪ್ರಸಂಗವೂ ಜರುಗಿತು.

ಕೈ ಕೊಟ್ಟ ಮತಯಂತ್ರ: ಪಟ್ಟಣದ ಗೌತಮ್‌ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ವಾರ್ಡಿನ ಮತಗಟ್ಟೆಯಲ್ಲಿ 80 ಮತಗಳು ಹಾಕಿದ್ದ ವೇಳೆ ಮತಯಂತ್ರ ಕೈಕೊಟ್ಟಿತು. ಇದನ್ನು ದುರಸ್ತಿಪಡಿಸಲು ತಜ್ಞರ ತಂಡ ಸ್ಥಳಕ್ಕೆ ದೌಡಾಯಿಸಿದರೂ ಇದು ಸಾಧ್ಯವಾಗಲಿಲ್ಲ. ನಂತರ ಚುನಾವಣಾ ಸಿಬ್ಬಂದಿ ಬೇರೆ ಮತ ಯಂತ್ರ ವನ್ನು ಅಳವಡಿಸುವ ಮೂಲಕ ಮತ್ತೆ ಚುನಾವಣೆ ಆರಂಭಿಸಲು ನೆರವಾದರು. ಅಷ್ಟೋತ್ತಿಗಾಗಲೇ 1 ಗಂಟೆ ತಡವಾಗಿತ್ತು.

10ನೇ ವಾರ್ಡಿನಲ್ಲಿ ಕೆಲ ಕಾಲ ಗದ್ದಲ: ಪಟ್ಟಣ 11 ವಾರ್ಡ್‌ಗಳಿಗೆ ಚುನಾವಣೆ ನಡೆಯಿತು. ಪ್ರತಿ ವಾರ್ಡಿಗೂ ಪ್ರತ್ಯೇಕ ಮತಗಟ್ಟೆ ಸ್ಥಾಪಿಸ ಲಾಗಿತ್ತು. ಪಟ್ಟಣದ 10ನೇ ವಾರ್ಡಿನಲ್ಲಿ ಬೆಳಗ್ಗೆಯಿಂದಲೂ ಅಭ್ಯರ್ಥಿ ಗಳ ಪರ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗಿತ್ತು. ನಿಗದಿತ ಗಡಿಯನ್ನು ದಾಟಿ ತಮಗೆ ಮತ ನೀಡಿ ಎಂದು ಪ್ರತಿಯೊಬ್ಬ ಅಭ್ಯರ್ಥಿಯೂ ಮತದಾರರಿಗೆ ತಮ್ಮ ಕಾರ್ಯಕರ್ತರ ಒಡಗೂಡಿ ಅವಲತ್ತುಕೊಳ್ಳು ತ್ತಿದ್ದರು. ಇವರ ಸಂಖ್ಯೆಯೂ ಹೆಚ್ಚಾಗಿದ್ದರಿಂದ ಗದ್ದಲ ಉಂಟಾಯಿತು. ಕೆಲ ಕಾಲ ಪೊಲೀಸರು ಗುಂಪನ್ನು ಚದುರಿಸಲು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿತ್ತು. ವ್ಹೀಲ್ ಚೇರ್‌ ಇಲ್ಲದೆ ಪರದಾಡಿದ ಮತದಾರರು: ಪಟ್ಟಣದ ದೇವಾಂಗ ಬೀದಿಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಾಣ ಮಾಡಲಾಗಿದ್ದ 3 ಮತ್ತು 7 ನೇ ಮತಗಟ್ಟೆಯಲ್ಲಿ ಮತದಾ ರರಿಗೆ ವ್ಹೀಲ್ ಚೇರ್‌ ವ್ಯವಸ್ಥೆ ಇರಲಿಲ್ಲ. ವಿಶೇಷ ಚೇತನರು ಹಾಗೂ ವಯೋವೃದ್ಧರನ್ನು ಎತ್ತಿಕೊಂಡೇ ಮತಗಟ್ಟೆಗೆ ತೆರಳುವ ಸ್ಥಿತಿ ಇತ್ತು.

ಮಳೆ ನೀರಿನಲ್ಲೇ ನಡೆದ ಮತದಾನ: ಪಟ್ಟಣದ 3 ಮತ್ತು 7ನೇ ವಾರ್ಡ್‌ ವ್ಯಾಪ್ತಿಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಹಾಗೂ 1 ಮತ್ತು 2ನೇ ವಾರ್ಡಿನ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿನ ಮಂಗಳವಾರ ರಾತ್ರಿ ಪಟ್ಟಣದಲ್ಲಿ ಸುರಿದ ಮಳೆಯಿಂದ ಮಳೆ ನೀರು ಸಂಗ್ರಹವಾಗಿ ಇಡೀ ಆವರಣವೇ ಮಳೆ ನೀರಿನಿಂದ ತುಂಬಿಕೊಂಡಿತ್ತು. ಇದರಿಂದ ವಯೋವೃದ್ಧರು ಪರದಾಡುವ ಸ್ಥಿತಿ ನಿರ್ಮಾಣಮಾತು. ಕಾಲು ಜಾರಿ ಬೀಳುವ ಅಪಾಯದಲ್ಲೇ ಬೇರೆಯವರ ನೆರವಿನೊಂದಿಗೆ ಮತ ಚಲಾವಣೆ ಮಾಡುತ್ತಿದ್ದ ದೃಶ್ಯ ಅಲ್ಲಲ್ಲಿ ಕಾಣಸಿಗುತ್ತಿತ್ತು. ಅಲ್ಲದೆ ವಿಶೇಷ ಚೇತನರನ್ನು ಖಾಸಗಿ ವಾಹನಗಳಲ್ಲಿ ಮತಗಟ್ಟೆ ಸಮೀಪಕ್ಕೆ ಸಾಗಿಸಲೂ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.